ಎಎಪಿ ಅಭ್ಯರ್ಥಿಯಾಗಿದ್ದ ಕುಮಾರ್ ನೇತೃತ್ವದಲ್ಲಿ ಸುಮಾರು 50 ಮಂದಿ ಪ್ರತಿಭಟನಾಕಾರರು ಮತಗಟ್ಟೆ ಇದ್ದ ಶಾಲೆಯ ಮುಂಭಾಗದ ಗೇಟ್ನ ಬಳಿ ಪ್ರತಿಭಟನೆ ನಡೆಸಿದ್ದರು. ಮತದಾನ ಮುಗಿದ ನಂತರ ಇವಿಎಂಗಳನ್ನು ಸಾಗಿಸಲು ಕೂಡ ಅವಕಾಶ ನೀಡದಂತೆ ಮನೋಜ್ ಕುಮಾರ್ ಪ್ರತಿಭಟನಾಕಾರರಿಗೆ ತಿಳಿಸಿ, ಕರ್ತವ್ಯ ನಿರ್ವಹಣೆಗೆ ಅಡ್ಡಿಯನ್ನುಂಟು ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.