<p><strong>ಚೆನ್ನೈ(ಪಿಟಿಐ):</strong> ‘ಜಯಲಲಿತಾ ಅವರಿಗೆ ಜಾಮೀನು ದೊರೆಯದಿದ್ದರೆ, ಇಲ್ಲಿರುವ ಕನ್ನಡಿಗರನ್ನು ಒತ್ತೆಯಾಳಾಗಿ ಇರಿಸಿಕೊಳ್ಳಲಾಗುವುದು’ ಎಂಬ ಬೆದರಿಕೆ ಬರಹವುಳ್ಳ ಭಿತ್ತಿಪತ್ರಗಳು ಚೆನ್ನೈನ ಹಲವೆಡೆ ಮಂಗಳವಾರ ಬೆಳಿಗ್ಗೆ ಕಂಡುಬಂದಿವೆ.</p>.<p>ಜಯಲಲಿತಾ ಅವರ ಜಾಮೀನು ಅರ್ಜಿಯ ವಿಚಾರಣೆ ಬೆಂಗಳೂರು ಹೈಕೋರ್ಟ್ನಲ್ಲಿ ಪ್ರಾರಂಭವಾದ ಸ್ವಲ್ಪ ಹೊತ್ತಿನಲ್ಲೇ ಈ ಭಿತ್ತಿಪತ್ರಗಳು ಕಂಡುಬಂದಿರುವುದು ವಿಶೇಷ.<br /> <br /> ಇತ್ತೀಚೆಗೆ ‘ಎಐಎಡಿಎಂಕೆ’ ಪಕ್ಷದಿಂದ ಉಚ್ಛಾಟನೆಗೊಂಡ ಕಾರ್ಯಕರ್ತರೊಬ್ಬರು ಈ ಕೃತ್ಯ ಎಸಗಿದ್ದಾರೆ ಎಂದು ಪೋಲಿಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.<br /> <br /> ಚೆನ್ನೈನ ದಕ್ಷಿಣ ಭಾಗಗಳಲ್ಲಿ ಅಂಟಿಸಿರುವ ಭಿತ್ತಿಪತ್ರದಲ್ಲಿ ‘ಎಚ್ಚರಿಕೆ... ಮುಖ್ಯಮಂತ್ರಿ ಅಮ್ಮ ಅವರನ್ನು ತಕ್ಷಣ ಬಿಡುಗಡೆ ಮಾಡಿ. ಇಲ್ಲದಿದ್ದರೆ ತಮಿಳುನಾಡಿನಲ್ಲಿರುವ ಕನ್ನಡಿಗರನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಳ್ಳುತ್ತೇವೆ’ ಎಂದು ಬರೆಯಲಾಗಿದೆ. ಭಿತ್ತಿಪತ್ರದಲ್ಲಿ ಎಐಎಡಿಎಂಕೆ ಪಕ್ಷದ ಕೆಲವು ನಾಯಕರ ಹೆಸರುಗಳನ್ನೂ ಕೂಡ ಬರೆಯಲಾಗಿದೆ.<br /> <br /> ಚೆನ್ನೈ ದಕ್ಷಿಣ ಭಾಗದ(ಉತ್ತರ) ಎಐಎಡಿಎಂಕೆ ಪಕ್ಷದ ಕಾರ್ಯದರ್ಶಿ ವಿ.ಪಿ ಕಲೈರಾಜನ್ ಅವರು ಪಕ್ಷದಿಂದ ಹೊರಹೋದ ಕೆ.ಸಿ ವಿಜಯ್ ನಮ್ಮ ಗಮನಕ್ಕೆ ಬಾರದೆ ಈ ಕೆಲಸ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಭಿತ್ತಿಪತ್ರ ತೆಗೆಯುವಂತೆ ಪಕ್ಷದ ಕಾರ್ಯಕರ್ತರಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ(ಪಿಟಿಐ):</strong> ‘ಜಯಲಲಿತಾ ಅವರಿಗೆ ಜಾಮೀನು ದೊರೆಯದಿದ್ದರೆ, ಇಲ್ಲಿರುವ ಕನ್ನಡಿಗರನ್ನು ಒತ್ತೆಯಾಳಾಗಿ ಇರಿಸಿಕೊಳ್ಳಲಾಗುವುದು’ ಎಂಬ ಬೆದರಿಕೆ ಬರಹವುಳ್ಳ ಭಿತ್ತಿಪತ್ರಗಳು ಚೆನ್ನೈನ ಹಲವೆಡೆ ಮಂಗಳವಾರ ಬೆಳಿಗ್ಗೆ ಕಂಡುಬಂದಿವೆ.</p>.<p>ಜಯಲಲಿತಾ ಅವರ ಜಾಮೀನು ಅರ್ಜಿಯ ವಿಚಾರಣೆ ಬೆಂಗಳೂರು ಹೈಕೋರ್ಟ್ನಲ್ಲಿ ಪ್ರಾರಂಭವಾದ ಸ್ವಲ್ಪ ಹೊತ್ತಿನಲ್ಲೇ ಈ ಭಿತ್ತಿಪತ್ರಗಳು ಕಂಡುಬಂದಿರುವುದು ವಿಶೇಷ.<br /> <br /> ಇತ್ತೀಚೆಗೆ ‘ಎಐಎಡಿಎಂಕೆ’ ಪಕ್ಷದಿಂದ ಉಚ್ಛಾಟನೆಗೊಂಡ ಕಾರ್ಯಕರ್ತರೊಬ್ಬರು ಈ ಕೃತ್ಯ ಎಸಗಿದ್ದಾರೆ ಎಂದು ಪೋಲಿಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.<br /> <br /> ಚೆನ್ನೈನ ದಕ್ಷಿಣ ಭಾಗಗಳಲ್ಲಿ ಅಂಟಿಸಿರುವ ಭಿತ್ತಿಪತ್ರದಲ್ಲಿ ‘ಎಚ್ಚರಿಕೆ... ಮುಖ್ಯಮಂತ್ರಿ ಅಮ್ಮ ಅವರನ್ನು ತಕ್ಷಣ ಬಿಡುಗಡೆ ಮಾಡಿ. ಇಲ್ಲದಿದ್ದರೆ ತಮಿಳುನಾಡಿನಲ್ಲಿರುವ ಕನ್ನಡಿಗರನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಳ್ಳುತ್ತೇವೆ’ ಎಂದು ಬರೆಯಲಾಗಿದೆ. ಭಿತ್ತಿಪತ್ರದಲ್ಲಿ ಎಐಎಡಿಎಂಕೆ ಪಕ್ಷದ ಕೆಲವು ನಾಯಕರ ಹೆಸರುಗಳನ್ನೂ ಕೂಡ ಬರೆಯಲಾಗಿದೆ.<br /> <br /> ಚೆನ್ನೈ ದಕ್ಷಿಣ ಭಾಗದ(ಉತ್ತರ) ಎಐಎಡಿಎಂಕೆ ಪಕ್ಷದ ಕಾರ್ಯದರ್ಶಿ ವಿ.ಪಿ ಕಲೈರಾಜನ್ ಅವರು ಪಕ್ಷದಿಂದ ಹೊರಹೋದ ಕೆ.ಸಿ ವಿಜಯ್ ನಮ್ಮ ಗಮನಕ್ಕೆ ಬಾರದೆ ಈ ಕೆಲಸ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಭಿತ್ತಿಪತ್ರ ತೆಗೆಯುವಂತೆ ಪಕ್ಷದ ಕಾರ್ಯಕರ್ತರಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>