<p><strong>ಹೈದರಾಬಾದ್:</strong> ಅಕ್ರಮ ಆಸ್ತಿ ಹೊಂದಿರುವ ಆರೋಪದ ಮೇಲೆ ಜೈಲು ಸೇರಿರುವ ವೈಎಸ್ಆರ್ ಕಾಂಗ್ರೆಸ್ ಮುಖ್ಯಸ್ಥ ಹಾಗೂ ಸಂಸದ ವೈ.ಎಸ್.ಜಗನ್ಮೋಹನ್ ರೆಡ್ಡಿ ಅವರ ಜಾಮೀನು ಅರ್ಜಿಯನ್ನು ಬುಧವಾರ ಹೈ ಕೋರ್ಟ್ ತಿರಸ್ಕರಿಸಿದೆ.<br /> <br /> ಜಗನ್ ಪರ ವಕೀಲರು ಜೂನ್ 21ರಂದು ಜಾಮೀನಿಗಾಗಿ ಹೈ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. <br /> ಈ ನಡುವೆ, ಸಿಬಿಐ ವಿಶೇಷ ನ್ಯಾಯಾಲಯ ಜಗನ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಇದೇ 18ರವರೆಗೆ ವಿಸ್ತರಿಸಿದೆ. ಮುಂದಿನ ವಿಚಾರಣೆಯನ್ನೂ ಚಂಚಲಗುಡ ಜೈಲಿನಲ್ಲೇ ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆಸಲಾಗುವುದು ಎಂದು ನ್ಯಾಯಾಲಯ ಸ್ಪಷ್ಟಡಿಸಿದೆ.<br /> <br /> `ಪ್ರಕರಣ ತನಿಖೆ ಮಹತ್ವದ ಘಟ್ಟ ತಲುಪಿದ್ದು, ಜಗನ್ ಸಾಕ್ಷ್ಯಗಳನ್ನು ನಾಶಪಡಿಸುವ ಸಾಧ್ಯತೆ ಇರುವುದರಿಂದ ಈ ಸಂದರ್ಭದಲ್ಲಿ ಜಾಮೀನು ನೀಡಬಾರದು~ ಎಂಬ ಸಿಬಿಐ ವಾದವನ್ನು~ ಕೋರ್ಟ್ ಒಪ್ಪಿಕೊಂಡಿದೆ. ಇದೇ ಸಂದರ್ಭದಲ್ಲಿ, ಜಗನ್ ಈ ಹಿಂದೆ ಸಾಕ್ಷ್ಯಗಳನ್ನು ನಾಶಪಡಿಸಿದ್ದರು ಎಂಬುದಕ್ಕೆ ಸಿಬಿಐ ಯಾವುದೇ ದಾಖಲೆಗಳನ್ನು ನೀಡಿಲ್ಲ ಎಂದೂ ಕೋರ್ಟ್ ಹೇಳಿದೆ.<br /> <br /> ಜಗನ್ ಪರ ವಕೀಲ ರಾಂ ಜೇಠ್ಮಲಾನಿ, `ತಮ್ಮ ಕಕ್ಷಿದಾರಪಕ್ಷವೊಂದರ ಅಧ್ಯಕ್ಷರು ಹಾಗೂ ಸಂಸದರಾಗಿದ್ದಾರೆ. ಅವರು ಸಾಕ್ಷ್ಯ ನಾಶಪಡಿಸುವುದಿಲ್ಲ. ತನಿಖೆಗೆ ಸಹಕರಿಸುತ್ತಾರೆ ಎಂದು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. <br /> <br /> ಮಂಗಳವಾರ, ಸಿಬಿಐ ಜಗನ್ ವಿರುದ್ಧ ನಾಲ್ಕನೇ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು.<br /> <br /> <strong>ಪ್ರಧಾನಿ ಭೇಟಿ: </strong>ಜಗನ್ಗೆ ನ್ಯಾಯಾಲಯ ಜಾಮೀನು ತಿರಸ್ಕರಿಸಿರುವ ಬೆನ್ನಲ್ಲೇ ಅವರ ತಾಯಿ ವೈಎಸ್ಆರ್ ಕಾಂಗ್ರೆಸ್ನ ಗೌರವಾಧ್ಯಕ್ಷೆ ವಿಜಯಮ್ಮ, ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಬುಧವಾರ ಭೇಟಿಯಾಗಿ, ತಮ್ಮ ಮಗನಿಗೆ ತನಿಖೆ ನೆಪದಲ್ಲಿ ಸಿಬಿಐ ನವರು ಹಿಂಸೆ ನೀಡುತ್ತಿದ್ದಾರೆ. ಈ ಪ್ರಕರಣವನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯವರಿಂದ ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸಿದರು.<br /> <br /> ನಿಯೋಗದೊಂದಿಗೆ ಪ್ರಧಾನಿಯವರನ್ನು ಭೇಟಿಯಾದ ಅವರು, ಜಗನ್ ಬಂಧನದ ಸುತ್ತ ನಡೆದಿರುವ ಘಟನೆಗಳನ್ನು ವಿವರಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಅಕ್ರಮ ಆಸ್ತಿ ಹೊಂದಿರುವ ಆರೋಪದ ಮೇಲೆ ಜೈಲು ಸೇರಿರುವ ವೈಎಸ್ಆರ್ ಕಾಂಗ್ರೆಸ್ ಮುಖ್ಯಸ್ಥ ಹಾಗೂ ಸಂಸದ ವೈ.ಎಸ್.ಜಗನ್ಮೋಹನ್ ರೆಡ್ಡಿ ಅವರ ಜಾಮೀನು ಅರ್ಜಿಯನ್ನು ಬುಧವಾರ ಹೈ ಕೋರ್ಟ್ ತಿರಸ್ಕರಿಸಿದೆ.<br /> <br /> ಜಗನ್ ಪರ ವಕೀಲರು ಜೂನ್ 21ರಂದು ಜಾಮೀನಿಗಾಗಿ ಹೈ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. <br /> ಈ ನಡುವೆ, ಸಿಬಿಐ ವಿಶೇಷ ನ್ಯಾಯಾಲಯ ಜಗನ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಇದೇ 18ರವರೆಗೆ ವಿಸ್ತರಿಸಿದೆ. ಮುಂದಿನ ವಿಚಾರಣೆಯನ್ನೂ ಚಂಚಲಗುಡ ಜೈಲಿನಲ್ಲೇ ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆಸಲಾಗುವುದು ಎಂದು ನ್ಯಾಯಾಲಯ ಸ್ಪಷ್ಟಡಿಸಿದೆ.<br /> <br /> `ಪ್ರಕರಣ ತನಿಖೆ ಮಹತ್ವದ ಘಟ್ಟ ತಲುಪಿದ್ದು, ಜಗನ್ ಸಾಕ್ಷ್ಯಗಳನ್ನು ನಾಶಪಡಿಸುವ ಸಾಧ್ಯತೆ ಇರುವುದರಿಂದ ಈ ಸಂದರ್ಭದಲ್ಲಿ ಜಾಮೀನು ನೀಡಬಾರದು~ ಎಂಬ ಸಿಬಿಐ ವಾದವನ್ನು~ ಕೋರ್ಟ್ ಒಪ್ಪಿಕೊಂಡಿದೆ. ಇದೇ ಸಂದರ್ಭದಲ್ಲಿ, ಜಗನ್ ಈ ಹಿಂದೆ ಸಾಕ್ಷ್ಯಗಳನ್ನು ನಾಶಪಡಿಸಿದ್ದರು ಎಂಬುದಕ್ಕೆ ಸಿಬಿಐ ಯಾವುದೇ ದಾಖಲೆಗಳನ್ನು ನೀಡಿಲ್ಲ ಎಂದೂ ಕೋರ್ಟ್ ಹೇಳಿದೆ.<br /> <br /> ಜಗನ್ ಪರ ವಕೀಲ ರಾಂ ಜೇಠ್ಮಲಾನಿ, `ತಮ್ಮ ಕಕ್ಷಿದಾರಪಕ್ಷವೊಂದರ ಅಧ್ಯಕ್ಷರು ಹಾಗೂ ಸಂಸದರಾಗಿದ್ದಾರೆ. ಅವರು ಸಾಕ್ಷ್ಯ ನಾಶಪಡಿಸುವುದಿಲ್ಲ. ತನಿಖೆಗೆ ಸಹಕರಿಸುತ್ತಾರೆ ಎಂದು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. <br /> <br /> ಮಂಗಳವಾರ, ಸಿಬಿಐ ಜಗನ್ ವಿರುದ್ಧ ನಾಲ್ಕನೇ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು.<br /> <br /> <strong>ಪ್ರಧಾನಿ ಭೇಟಿ: </strong>ಜಗನ್ಗೆ ನ್ಯಾಯಾಲಯ ಜಾಮೀನು ತಿರಸ್ಕರಿಸಿರುವ ಬೆನ್ನಲ್ಲೇ ಅವರ ತಾಯಿ ವೈಎಸ್ಆರ್ ಕಾಂಗ್ರೆಸ್ನ ಗೌರವಾಧ್ಯಕ್ಷೆ ವಿಜಯಮ್ಮ, ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಬುಧವಾರ ಭೇಟಿಯಾಗಿ, ತಮ್ಮ ಮಗನಿಗೆ ತನಿಖೆ ನೆಪದಲ್ಲಿ ಸಿಬಿಐ ನವರು ಹಿಂಸೆ ನೀಡುತ್ತಿದ್ದಾರೆ. ಈ ಪ್ರಕರಣವನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯವರಿಂದ ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸಿದರು.<br /> <br /> ನಿಯೋಗದೊಂದಿಗೆ ಪ್ರಧಾನಿಯವರನ್ನು ಭೇಟಿಯಾದ ಅವರು, ಜಗನ್ ಬಂಧನದ ಸುತ್ತ ನಡೆದಿರುವ ಘಟನೆಗಳನ್ನು ವಿವರಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>