<p><strong>ಹೈದರಾಬಾದ್ (ಪಿಟಿಐ):</strong> ವೈ.ಎಸ್. ಜಗನ್ಮೋಹನ್ ರೆಡ್ಡಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ `ಇಂಡಿಯಾ ಸಿಮೆಂಟ್ಸ್~ ಕಂಪೆನಿ ವ್ಯವಸ್ಥಾಪಕ ನಿರ್ದೇಶಕರೂ ಆದ ಬಿಸಿಸಿಐ ಮುಖ್ಯಸ್ಥ ಎನ್. ಶ್ರೀನಿವಾಸನ್ ಅವರಿಗೆ ಮುಂದಿನ ವಾರ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.</p>.<p>`ಇಂಡಿಯಾ ಸಿಮೆಂಟ್ಸ್~ ಕಂಪೆನಿಯು ವೈ.ಎಸ್. ರಾಜಶೇಖರ ರೆಡ್ಡಿ ಅವರ ಅಧಿಕಾರಾವಧಿಯಲ್ಲಿ ಜಗನ್ ಒಡೆತನದ ಕಂಪೆನಿಗಳಲ್ಲಿ ಹೂಡಿಕೆ ಮಾಡಿದೆ ಎಂಬ ಆಪಾದನೆಯ ಹಿನ್ನೆಲೆಯಲ್ಲಿ ಶ್ರೀನಿವಾಸನ್ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸೂಚಿಸಿದೆ.</p>.<p>ಇನ್ನಿತರ ಸಿಮೆಂಟ್ ಕಂಪೆನಿಗಳ ಅಧಿಕಾರಿಗಳಿಗೂ ತನ್ನ ಮುಂದೆ ಹಾಜರಾಗುವಂತೆ ಸಿಬಿಐ ನಿರ್ದೇಶಿಸಿದೆ. ಈ ಕಂಪೆನಿಗಳಿಗೆ ರಾಜಶೇಖರ ರೆಡ್ಡಿ ಅವರ ಅಧಿಕಾರ ಅವಧಿಯಲ್ಲಿ ಪೂರೈಕೆ ಮಾಡಲಾಗಿದ್ದ ನೀರು ಮತ್ತು ಸುಣ್ಣದಕಲ್ಲುಗಳ ವಿಚಾರವಾಗಿ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<p>ಜಗನ್ ತಮ್ಮ ತಂದೆ ರಾಜಶೇಖರ ರೆಡ್ಡಿ ಅವರ ಪ್ರಭಾವವನ್ನು ಬಳಸಿಕೊಂಡು ತಾವು ನಡೆಸುತ್ತಿರುವ ಉದ್ದಿಮೆ- ಇನ್ನಿತರ ವ್ಯವಹಾರಗಳಲ್ಲಿ ಹೂಡಿಕೆ ಮಾಡಿರುವ ಕೆಲವರಿಗೆ ಕಾನೂನು ಬಾಹಿರವಾಗಿ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ತನಿಖಾ ಸಂಸ್ಥೆಯು ಆರೋಪಪಟ್ಟಿಯಲ್ಲಿ ಆಪಾದಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್ (ಪಿಟಿಐ):</strong> ವೈ.ಎಸ್. ಜಗನ್ಮೋಹನ್ ರೆಡ್ಡಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ `ಇಂಡಿಯಾ ಸಿಮೆಂಟ್ಸ್~ ಕಂಪೆನಿ ವ್ಯವಸ್ಥಾಪಕ ನಿರ್ದೇಶಕರೂ ಆದ ಬಿಸಿಸಿಐ ಮುಖ್ಯಸ್ಥ ಎನ್. ಶ್ರೀನಿವಾಸನ್ ಅವರಿಗೆ ಮುಂದಿನ ವಾರ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.</p>.<p>`ಇಂಡಿಯಾ ಸಿಮೆಂಟ್ಸ್~ ಕಂಪೆನಿಯು ವೈ.ಎಸ್. ರಾಜಶೇಖರ ರೆಡ್ಡಿ ಅವರ ಅಧಿಕಾರಾವಧಿಯಲ್ಲಿ ಜಗನ್ ಒಡೆತನದ ಕಂಪೆನಿಗಳಲ್ಲಿ ಹೂಡಿಕೆ ಮಾಡಿದೆ ಎಂಬ ಆಪಾದನೆಯ ಹಿನ್ನೆಲೆಯಲ್ಲಿ ಶ್ರೀನಿವಾಸನ್ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸೂಚಿಸಿದೆ.</p>.<p>ಇನ್ನಿತರ ಸಿಮೆಂಟ್ ಕಂಪೆನಿಗಳ ಅಧಿಕಾರಿಗಳಿಗೂ ತನ್ನ ಮುಂದೆ ಹಾಜರಾಗುವಂತೆ ಸಿಬಿಐ ನಿರ್ದೇಶಿಸಿದೆ. ಈ ಕಂಪೆನಿಗಳಿಗೆ ರಾಜಶೇಖರ ರೆಡ್ಡಿ ಅವರ ಅಧಿಕಾರ ಅವಧಿಯಲ್ಲಿ ಪೂರೈಕೆ ಮಾಡಲಾಗಿದ್ದ ನೀರು ಮತ್ತು ಸುಣ್ಣದಕಲ್ಲುಗಳ ವಿಚಾರವಾಗಿ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<p>ಜಗನ್ ತಮ್ಮ ತಂದೆ ರಾಜಶೇಖರ ರೆಡ್ಡಿ ಅವರ ಪ್ರಭಾವವನ್ನು ಬಳಸಿಕೊಂಡು ತಾವು ನಡೆಸುತ್ತಿರುವ ಉದ್ದಿಮೆ- ಇನ್ನಿತರ ವ್ಯವಹಾರಗಳಲ್ಲಿ ಹೂಡಿಕೆ ಮಾಡಿರುವ ಕೆಲವರಿಗೆ ಕಾನೂನು ಬಾಹಿರವಾಗಿ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ತನಿಖಾ ಸಂಸ್ಥೆಯು ಆರೋಪಪಟ್ಟಿಯಲ್ಲಿ ಆಪಾದಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>