ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನತೆಯಲ್ಲಿ ಕಾತರ, ಆತಂಕ...

Last Updated 26 ಸೆಪ್ಟೆಂಬರ್ 2014, 19:30 IST
ಅಕ್ಷರ ಗಾತ್ರ

ಚೆನ್ನೈ (ಪಿಟಿಐ): ಎಐಎಡಿಎಂಕೆ ಮುಖ್ಯಸ್ಥೆ ಮತ್ತು ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ವಿರುದ್ಧದ 18 ವರ್ಷಗಳ ಹಿಂದಿನ ಅಕ್ರಮ ಆಸ್ತಿ ಸಂಪಾದನೆ ಪ್ರಕರಣದ ತೀರ್ಪು ಶನಿವಾರ ಬೆಂಗಳೂರಿನ ವಿಶೇಷ ನ್ಯಾಯಾ­ಲಯದಲ್ಲಿ ಪ್ರಕಟವಾಗಲಿರುವುದರಿಂದ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಭಾರಿ ಕುತೂಹಲವನ್ನು ಉಂಟು ಮಾಡಿದೆ.

ರಾಜಕೀಯ ಪಕ್ಷಗಳ ಮುಖಂಡರಲ್ಲಿ ಅದರಲ್ಲೂ ಎಐಎಡಿಎಂಕೆ ಮುಖಂಡರು ಮತ್ತು ಕಾರ್ಯಕರ್ತರು ತೀವ್ರ ಆತಂಕಕ್ಕೆ ಒಳಗಾಗಿದ್ದು, ‘ ಅಮ್ಮಾ’ ಮತ್ತೊಮ್ಮೆ ರಾಜಕೀಯ ಬಿರುಗಾಳಿಯಿಂದ ಪಾರಾಗಲಿರುವರೆ ಎಂಬುದನ್ನು ಕಾತರದಿಂದ ಎದುರು ನೋಡುತ್ತಿದ್ದಾರೆ.

‘ರಾಜಕೀಯ ದ್ವೇಷಕ್ಕಾಗಿ 1996ರಲ್ಲಿ ಡಿಎಂಕೆ ಸರ್ಕಾರ ಸುಳ್ಳು ಪ್ರಕರಣವನ್ನು ದಾಖಲಿಸಿದ್ದು, ಇತರ ಪ್ರಕರಣಗಳಲ್ಲಿ ನಿರ್ದೋಷಿ ಎಂದು ರ್ಮಾನವಾದಂತೆ ಈ ಪ್ರಕರಣದಲ್ಲೂ  ಅವರು ಕಳಂಕರಹಿತರಾಗಲಿದ್ದಾರೆ’ ಎಂಬುದು ಎಐಎಡಿಎಂಕೆ ಕಾರ್ಯಕರ್ತರ ಹಾರೈಕೆಯಾಗಿದೆ.

2011ರ ವಿಧಾನಸಭೆ ಚುನಾವಣೆಯಲ್ಲಿ ಸಂಪೂರ್ಣ ನೆಲಕಚ್ಚಿರುವ ಡಿಎಂಕೆ ಪಕ್ಷದ ಮುಖಂಡರು ನ್ಯಾಯಾಲಯದ ತೀರ್ಪು ಜಯಲಲಿತಾ ವಿರುದ್ಧ ಬಂದರೆ ಆಗುವ ರಾಜಕೀಯ ಲಾಭದ ಲೆಕ್ಕಾಚಾರದಲ್ಲಿ ಇದ್ದಾರೆ.

ತೀರ್ಪು ಜಯಲಲಿತಾ ವಿರುದ್ಧವಾದರೆ ತಮಿಳುನಾಡು ರಾಜ­ಕೀಯ­ದಲ್ಲಿ ಭಾರಿ ಸಂಚಲನ ಮೂಡಲಿರುವುದರಿಂದ ಇತರ ರಾಜಕೀಯ ಪಕ್ಷಗಳೂ ತೀವ್ರ ಕುತೂಹಲದಿಂದ ಕಾಯುತ್ತಿದ್ದಾರೆ.

18 ವರ್ಷಗಳಷ್ಟು ಸುದೀರ್ಘ ಕಾನೂನು ಹೋರಾಟದಲ್ಲಿ ಜಯಲಲಿತಾ ಅವರ ಭವಿಷ್ಯ ಏನಾಗಬಹುದು ಎಂಬ ಆತಂಕ­ದಲ್ಲಿ ರಾಜ್ಯದ ಜನತೆ ಇದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT