ಪಾಕಿಸ್ತಾನದ ಸೇನಾ ಕಾರ್ಯಾಚರಣೆಗಳ ಮಹಾ ನಿರ್ದೇಶಕರ ಜತೆ ಭಾರತದ ಸೇನಾ ಕಾರ್ಯಾಚರಣೆಗಳ ಮಹಾ ನಿರ್ದೇಶಕ (ಡಿಜಿಎಂಒ) ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ಶುಕ್ರವಾರ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಗಡಿ ನಿಯಂತ್ರಣ ರೇಖೆ ಬಳಿ ಅಶಾಂತಿ ಸೃಷ್ಟಿಯಾಗಿದ್ದು, ಇದಕ್ಕೆ ನೀಡುವ ಕುಮ್ಮಕ್ಕನ್ನು ತಕ್ಷಣವೇ ಪಾಕಿಸ್ತಾನ ನಿಲ್ಲಿಸಬೇಕು ಎಂದು ಮಾತುಕತೆ ವೇಳೆ ಚೌಹಾಣ್ ಹೇಳಿದ್ದಾರೆ ಎನ್ನಲಾಗಿದೆ.