ನವದೆಹಲಿ: ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದಿದ್ದ ಶಾಲಾ ಬಸ್ವೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದು ಕನಿಷ್ಠ 40 ಮಕ್ಕಳು ಸಾವಿಗೀಡಾಗಿರುವ ಸುದ್ದಿ ಸತ್ಯಕ್ಕೆ ದೂರವಾದುದು ಎಂದು ಪೂಂಚ್ ಜಿಲ್ಲೆಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಗರೀಬ್ ನವಾಜ್ ಶಾಲೆಯ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಶಾಲಾ ಬಸ್ ಕಂದಕಕ್ಕೆ ಉರುಳಿ 40 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮಗಳು ಸುದ್ದಿ ಮಾಡಿದ್ದವು. ಆದರೆ ಹೀಗೊಂದು ಅಪಘಾತ ನಡೆದಿಲ್ಲ. ಇದು ವದಂತಿಯಷ್ಟೇ.
ಇಲ್ಲಿ ಯಾವುದೇ ಅಪಘಾತಗಳು ನಡೆದಿಲ್ಲ. ಶಾಲಾ ಮಕ್ಕಳು ಸುರಕ್ಷಿತವಾಗಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಅಧಿಕಾರಿ ಮರ್ಸೂರ್ ಮೀರ್ ಸ್ಪಷ್ಟನೆ ನೀಡಿದ್ದಾರೆ.