ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ನಿಧನರಾಗಿರುವ ಸುದ್ದಿ ಸತ್ಯಕ್ಕೆ ದೂರವಾದುದು ಎಂದು ಅಪೋಲೊ ಆಸ್ಪತ್ರೆ ಹೇಳಿದೆ.
ಜಯಾ ಅವರ ಪ್ರಾಣ ಉಳಿಸುವ ಚಿಕಿತ್ಸೆ ಮುಂದುವರಿಸುತ್ತಿದ್ದೇವೆ ಎಂದು ಅಪೋಲೊ ಆಸ್ಪತ್ರೆ ಟ್ವೀಟ್ ಮಾಡಿದೆ.
ಕೆಲವು ಮಾಧ್ಯಮಗಳು ಜಯಲಲಿತಾ ನಿಧನರಾಗಿದ್ದಾರೆ ಎಂದು ಸುದ್ದಿ ಮಾಡಿವೆ. ಇದು ಆಧಾರ ರಹಿತ ಮತ್ತು ಸತ್ಯಕ್ಕೆ ದೂರವಾದುದು. ನಾವು ಜಯಾ ಅವರಿಗೆ ಚಿಕಿತ್ಸೆ ಮುಂದುವರಿಸಿದ್ದೇವೆ ಎಂದು ಅಪೋಲೊ ಆಸ್ಪತ್ರೆ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ.
ಅರ್ಧಕ್ಕಿಳಿಸಿ ಮೇಲೇರಿದ ಪಕ್ಷದ ಧ್ವಜ
ಸುದ್ದಿವಾಹಿನಿಗಳಲ್ಲಿ ಜಯಲಲಿತಾ ನಿಧನರಾಗಿದ್ದಾರೆ ಎಂಬ ಸುದ್ದಿ ಪ್ರಕಟವಾಗುತ್ತಿದ್ದಂತೆ ಎಐಎಡಿಎಂಕೆ ಕಚೇರಿಯಲ್ಲಿ ಧ್ವಜವನ್ನು ಅರ್ಧಕ್ಕಿಳಿಸಲಾಗಿತ್ತು. ಸ್ವಲ್ಪ ಹೊತ್ತಿನಲ್ಲಿ ಸುದ್ದಿ ವಾಹಿನಿಗಳು ಜಯಾ ಬದುಕಿದ್ದಾರೆ ಎಂಬ ಸುದ್ದಿ ಪ್ರಕಟಿಸಿದಾಗ ಅರ್ಧಕ್ಕಿಳಿಸಿದ್ದ ಧ್ವಜವನ್ನು ಮೇಲಕ್ಕೇರಿಸಲಾಗಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.