<p><strong>ನವದೆಹಲಿ, (ಪಿಟಿಐ):</strong> `ಪ್ರಮುಖ ರಾಷ್ಟ್ರಗಳು ತಮ್ಮದೇ ಸಮಸ್ಯೆಗಳತ್ತ ಹೆಚ್ಚಿನ ಗಮನ ಹರಿಸಿರುವುದರಿಂದ ಜಾಗತಿಕ ಸಮಸ್ಯೆಯ ಬಗ್ಗೆ ಸಂಘಟಿತ ಪ್ರಯತ್ನ ಕಡಿಮೆಯಾಗಿದೆ. ಆದ್ದರಿಂದ ಭಾರತ ತನ್ನ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡು ಸಮಸ್ಯೆಗಳನ್ನು ತಾನೇ ಬಗೆಹರಿಸಿಕೊಳ್ಳಬೇಕಾಗಿದೆ~ ಎಂದು ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.<br /> <br /> ಸಶಸ್ತ್ರ ಪಡೆಗಳ ಉನ್ನತ ಕಮಾಂಡರ್ಗಳ ಸಭೆಯನ್ನು ಉದ್ದೇಶಿಸಿ ಮಂಗಳವಾರ ಮಾತನಾಡಿದ ಅವರು, ಭಯೋತ್ಪಾದಕ ಸಂಘಟನೆಗಳು ಈಗ ಹೆಚ್ಚು ಸಂಘಟಿತವಾಗಿ ಉನ್ನತ ತಂತ್ರಜ್ಞಾನಗಳನ್ನು ಬಳಸುತ್ತಿರುವುದರಿಂದ ಅವುಗಳನ್ನು ನಿಯಂತ್ರಿಸಲು ನಾವು ಹೆಚ್ಚಿನ ಸಿದ್ಧತೆ ಮಾಡಿಕೊಳ್ಳಬೇಕಾಗಿದೆ ಎಂದರು.<br /> <br /> ಸೈಬರ್ ಮತ್ತು ಮಾಹಿತಿ ತಂತ್ರಜ್ಞಾನದ ಮೂಲಕ ನಡೆಯುವ ದಾಳಿಗಳನ್ನು ಸಮರ್ಥವಾಗಿ ಎದುರಿಸಬೇಕಾದರೆ ನಮ್ಮ ಯುದ್ಧ ತಂತ್ರವನ್ನು ಬದಲಿಸಿಕೊಳ್ಳಬೇಕು ಎಂದರು.<br /> <br /> ಆಧುನಿಕ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ಜತೆಗೆ ದೇಶ ಇಂದು ವಿವಿಧ ಬಗೆಯ ಸಮಸ್ಯೆಗಳನ್ನು ಎದುರಿಸುತ್ತಿರುವುದರಿಂದ ಅವುಗಳನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ನಾವು ಚಿಂತನೆ ನಡೆಸಬೇಕಾಗಿದೆ ಎಂದು ಪ್ರಧಾನಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ, (ಪಿಟಿಐ):</strong> `ಪ್ರಮುಖ ರಾಷ್ಟ್ರಗಳು ತಮ್ಮದೇ ಸಮಸ್ಯೆಗಳತ್ತ ಹೆಚ್ಚಿನ ಗಮನ ಹರಿಸಿರುವುದರಿಂದ ಜಾಗತಿಕ ಸಮಸ್ಯೆಯ ಬಗ್ಗೆ ಸಂಘಟಿತ ಪ್ರಯತ್ನ ಕಡಿಮೆಯಾಗಿದೆ. ಆದ್ದರಿಂದ ಭಾರತ ತನ್ನ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡು ಸಮಸ್ಯೆಗಳನ್ನು ತಾನೇ ಬಗೆಹರಿಸಿಕೊಳ್ಳಬೇಕಾಗಿದೆ~ ಎಂದು ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.<br /> <br /> ಸಶಸ್ತ್ರ ಪಡೆಗಳ ಉನ್ನತ ಕಮಾಂಡರ್ಗಳ ಸಭೆಯನ್ನು ಉದ್ದೇಶಿಸಿ ಮಂಗಳವಾರ ಮಾತನಾಡಿದ ಅವರು, ಭಯೋತ್ಪಾದಕ ಸಂಘಟನೆಗಳು ಈಗ ಹೆಚ್ಚು ಸಂಘಟಿತವಾಗಿ ಉನ್ನತ ತಂತ್ರಜ್ಞಾನಗಳನ್ನು ಬಳಸುತ್ತಿರುವುದರಿಂದ ಅವುಗಳನ್ನು ನಿಯಂತ್ರಿಸಲು ನಾವು ಹೆಚ್ಚಿನ ಸಿದ್ಧತೆ ಮಾಡಿಕೊಳ್ಳಬೇಕಾಗಿದೆ ಎಂದರು.<br /> <br /> ಸೈಬರ್ ಮತ್ತು ಮಾಹಿತಿ ತಂತ್ರಜ್ಞಾನದ ಮೂಲಕ ನಡೆಯುವ ದಾಳಿಗಳನ್ನು ಸಮರ್ಥವಾಗಿ ಎದುರಿಸಬೇಕಾದರೆ ನಮ್ಮ ಯುದ್ಧ ತಂತ್ರವನ್ನು ಬದಲಿಸಿಕೊಳ್ಳಬೇಕು ಎಂದರು.<br /> <br /> ಆಧುನಿಕ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ಜತೆಗೆ ದೇಶ ಇಂದು ವಿವಿಧ ಬಗೆಯ ಸಮಸ್ಯೆಗಳನ್ನು ಎದುರಿಸುತ್ತಿರುವುದರಿಂದ ಅವುಗಳನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ನಾವು ಚಿಂತನೆ ನಡೆಸಬೇಕಾಗಿದೆ ಎಂದು ಪ್ರಧಾನಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>