<p><strong>ಹೈದರಾಬಾದ್ ( ಪಿಟಿಐ):</strong> ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಸಿಬಿಐನಿಂದ ಬಂಧನಕ್ಕೊಳಗಾಗಿ ಚಂಚಲಗುಡ ಜೈಲಿನಲ್ಲಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹಾಗೂ ಓಬಳಾಪುರಂ ಗಣಿ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಬಿ. ಶ್ರೀನಿವಾಸ ರೆಡ್ಡಿ ಅವರ ಜಾಮೀನು ಅರ್ಜಿಯನ್ನು ವಿಶೇಷ ಸಿಬಿಐ ನ್ಯಾಯಾಲಯವು ಮಂಗಳವಾರ ತಿರಸ್ಕರಿಸಿದೆ.<br /> <br /> ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ ನಾಗಮಾರುತಿ ಶರ್ಮಾ ಅವರು ರೆಡ್ಡಿದ್ವಯರ ಜಾಮೀನು ಅರ್ಜಿ ತಿರಸ್ಕರಿಸಿ, ಹೆಚ್ಚಿನ ವಿಚಾರಣೆಗಾಗಿ ತಕ್ಷಣವೇ ಅವರನ್ನು ಸೆಪ್ಟೆಂಬರ್ 19ರ ವರೆಗೆ ಸಿಬಿಐ ವಶಕ್ಕೆ ಒಪ್ಪಿಸುವಂತೆ ಚಂಚಲಗುಡ ಜೈಲು ಅಧಿಕಾರಿಗಳಿಗೆ ಹೇಳಿದರು.<br /> <br /> ಕರ್ನಾಟಕದ ಹೊರಗೆ ಮತ್ತು ಆಂಧ್ರ ಪ್ರದೇಶದಲ್ಲಿನ ಅಕ್ರಮ ಗಣಿಗಾರಿಕೆ ಬಗ್ಗೆ ರೆಡ್ಡಿದ್ವಯರಿಗೆ ವೈಯಕ್ತಿಕ ಮಾಹಿತಿಗಳು ಇರುವ ಕಾರಣ ಅವರ ವಿಚಾರಣೆ ನಿರ್ಣಾಯಕವಾಗಿದ್ದು ಇಬ್ಬರನ್ನೂ 15 ದಿನಗಳ ಅವಧಿಗೆ ತನ್ನ ವಶಕ್ಕೆ ನೀಡಬೇಕು ಎಂದು ಸಿಬಿಐ ಮೊದಲಿಗೆ ಮನವಿ ಮಾಡಿತ್ತು.<br /> <br /> ಜೊತೆಗೆ ಜಾಲದಲ್ಲಿ ಷಾಮೀಲಾಗಿದ್ದಾರೆಂದು ಆಪಾದಿಸಲಾಗಿರುವ ಸರ್ಕಾರಿ ಅಧಿಕಾರಿಗಳೊಂದಿನ ಸಂಚಿನ ಮಾಹಿತಿಯನ್ನು ಅವರಿಂದ ಪಡೆಯಬಹುದು ಎಂದೂ ಸಿಬಿಐ ವಾದಿಸಿತ್ತು.<br /> <br /> ಸಿಬಿಐ ರೆಡ್ಡಿ ಅವರ ಓಬಳಾಪುರಂ ಗಣಿಗಾರಿಕಾ ಕಂಪೆನಿ ವಿರುದ್ಧ 2009ರ ಡಿಸೆಂಬರ್ 7ರಂದು ಪ್ರಕರಣ ದಾಖಲಿಸಿತ್ತು. ಅನಂತಪುರ ಜಿಲ್ಲೆಯ ಓಬಳಾಪುರಂ ಮತ್ತು ಮಲ್ಪನಗುಡಿ ಗ್ರಾಮಗಳಲ್ಲಿ ಓಬಳಾಪುರಂ ಗಣಿಗಾರಿಕಾ ಕಂಪೆನಿಗೆ ಗಣಿಗಾರಿಕೆ ಗುತ್ತಿಗೆ ನೀಡಿಕೆಯಲ್ಲಿನ ಅಕ್ರಮಗಳ ಆಪಾದನೆಗಳ ಹಿನ್ನೆಲೆಯಲ್ಲಿ ಆಂದ್ರಪ್ರದೇಶ ಸರ್ಕಾರ ಈ ಕುರಿತು ತನಿಖೆಗೆ ಮನವಿ ಮಾಡಿತ್ತು. <br /> <br /> ಜನಾರ್ದನ ರೆಡ್ಡಿ ಮತ್ತು ಶ್ರೀನಿವಾಸ ರೆಡ್ಡಿ ಅವರನ್ನು ಸಿಬಿಐ ಸೆಪ್ಟೆಂಬರ್ 5ರಂದು ಬಳ್ಳಾರಿಯಲ್ಲಿ ಬಂಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್ ( ಪಿಟಿಐ):</strong> ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಸಿಬಿಐನಿಂದ ಬಂಧನಕ್ಕೊಳಗಾಗಿ ಚಂಚಲಗುಡ ಜೈಲಿನಲ್ಲಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹಾಗೂ ಓಬಳಾಪುರಂ ಗಣಿ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಬಿ. ಶ್ರೀನಿವಾಸ ರೆಡ್ಡಿ ಅವರ ಜಾಮೀನು ಅರ್ಜಿಯನ್ನು ವಿಶೇಷ ಸಿಬಿಐ ನ್ಯಾಯಾಲಯವು ಮಂಗಳವಾರ ತಿರಸ್ಕರಿಸಿದೆ.<br /> <br /> ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ ನಾಗಮಾರುತಿ ಶರ್ಮಾ ಅವರು ರೆಡ್ಡಿದ್ವಯರ ಜಾಮೀನು ಅರ್ಜಿ ತಿರಸ್ಕರಿಸಿ, ಹೆಚ್ಚಿನ ವಿಚಾರಣೆಗಾಗಿ ತಕ್ಷಣವೇ ಅವರನ್ನು ಸೆಪ್ಟೆಂಬರ್ 19ರ ವರೆಗೆ ಸಿಬಿಐ ವಶಕ್ಕೆ ಒಪ್ಪಿಸುವಂತೆ ಚಂಚಲಗುಡ ಜೈಲು ಅಧಿಕಾರಿಗಳಿಗೆ ಹೇಳಿದರು.<br /> <br /> ಕರ್ನಾಟಕದ ಹೊರಗೆ ಮತ್ತು ಆಂಧ್ರ ಪ್ರದೇಶದಲ್ಲಿನ ಅಕ್ರಮ ಗಣಿಗಾರಿಕೆ ಬಗ್ಗೆ ರೆಡ್ಡಿದ್ವಯರಿಗೆ ವೈಯಕ್ತಿಕ ಮಾಹಿತಿಗಳು ಇರುವ ಕಾರಣ ಅವರ ವಿಚಾರಣೆ ನಿರ್ಣಾಯಕವಾಗಿದ್ದು ಇಬ್ಬರನ್ನೂ 15 ದಿನಗಳ ಅವಧಿಗೆ ತನ್ನ ವಶಕ್ಕೆ ನೀಡಬೇಕು ಎಂದು ಸಿಬಿಐ ಮೊದಲಿಗೆ ಮನವಿ ಮಾಡಿತ್ತು.<br /> <br /> ಜೊತೆಗೆ ಜಾಲದಲ್ಲಿ ಷಾಮೀಲಾಗಿದ್ದಾರೆಂದು ಆಪಾದಿಸಲಾಗಿರುವ ಸರ್ಕಾರಿ ಅಧಿಕಾರಿಗಳೊಂದಿನ ಸಂಚಿನ ಮಾಹಿತಿಯನ್ನು ಅವರಿಂದ ಪಡೆಯಬಹುದು ಎಂದೂ ಸಿಬಿಐ ವಾದಿಸಿತ್ತು.<br /> <br /> ಸಿಬಿಐ ರೆಡ್ಡಿ ಅವರ ಓಬಳಾಪುರಂ ಗಣಿಗಾರಿಕಾ ಕಂಪೆನಿ ವಿರುದ್ಧ 2009ರ ಡಿಸೆಂಬರ್ 7ರಂದು ಪ್ರಕರಣ ದಾಖಲಿಸಿತ್ತು. ಅನಂತಪುರ ಜಿಲ್ಲೆಯ ಓಬಳಾಪುರಂ ಮತ್ತು ಮಲ್ಪನಗುಡಿ ಗ್ರಾಮಗಳಲ್ಲಿ ಓಬಳಾಪುರಂ ಗಣಿಗಾರಿಕಾ ಕಂಪೆನಿಗೆ ಗಣಿಗಾರಿಕೆ ಗುತ್ತಿಗೆ ನೀಡಿಕೆಯಲ್ಲಿನ ಅಕ್ರಮಗಳ ಆಪಾದನೆಗಳ ಹಿನ್ನೆಲೆಯಲ್ಲಿ ಆಂದ್ರಪ್ರದೇಶ ಸರ್ಕಾರ ಈ ಕುರಿತು ತನಿಖೆಗೆ ಮನವಿ ಮಾಡಿತ್ತು. <br /> <br /> ಜನಾರ್ದನ ರೆಡ್ಡಿ ಮತ್ತು ಶ್ರೀನಿವಾಸ ರೆಡ್ಡಿ ಅವರನ್ನು ಸಿಬಿಐ ಸೆಪ್ಟೆಂಬರ್ 5ರಂದು ಬಳ್ಳಾರಿಯಲ್ಲಿ ಬಂಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>