ಪಟ್ನಾ: ಭಿನ್ನಮತೀಯ ನಾಯಕ ಶರದ್ ಯಾದವ್ ಅವರು ನಡೆಸಿದ ರಾಷ್ಟ್ರೀಯ ಕಾರ್ಯಕಾರಿಣಿಗೆ ಯಾವುದೇ ಮಾನ್ಯತೆ ಇಲ್ಲ ಎಂದು ಜೆಡಿಯು ಹೇಳಿದ್ದು, ಸಭೆ ನಡೆಸುವ ಅಧಿಕಾರ ಅವರಿಗೆ ಇಲ್ಲ ಎಂದು ತಿಳಿಸಿದೆ.
ದೆಹಲಿಯಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾದ ಬೆನ್ನಲ್ಲೇ ಪಕ್ಷದ ಹಿರಿಯ ಮುಖಂಡರೂ ಆದ ರಾಜ್ಯಸಭಾ ಸದಸ್ಯ ಆರ್.ಸಿ.ಪಿ ಸಿಂಗ್ ಈ ಪ್ರತಿಕ್ರಿಯೆ ನೀಡಿದ್ದಾರೆ.
ಪಕ್ಷದ ಚಿಹ್ನೆ ಹಾಗೂ ಹೆಸರು ಸಂಬಂಧ ಅವರ ಸಲ್ಲಿಸಿದ್ದ ಎರಡು ಮನವಿಗಳನ್ನು ಚುನಾವಣಾ ಆಯೋಗ ತಳ್ಳಿಹಾಕಿದ್ದು, ಶರದ್ ಯಾದವ್ ಅವರಿಗೆ ರಾಷ್ಟ್ರೀಯ ಕಾರ್ಯಕಾರಿ ಮಂಡಳಿ ಸಭೆ ನಡೆಸುವ ಅಧಿಕಾರ ಇಲ್ಲ ಎಂದು ಸಿಂಗ್ ಹೇಳಿದ್ದಾರೆ.