ನವದೆಹಲಿ: ಪ್ರತ್ಯೇಕ ಗೋರ್ಖಾಲ್ಯಾಂಡ್ಗಾಗಿ ಹೋರಾಟ ನಡೆಯುತ್ತಿರುವ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಮತ್ತು ಕಲಿಂಪಾಂಗ್ ಜಿಲ್ಲೆಗಳಲ್ಲಿ ನಿಯೋಜಿಸಿರುವ ಕೇಂದ್ರೀಯ ಸಶಸ್ತ್ರ ಅರೆಸೇನಾ ಪಡೆಯ (ಸಿಎಪಿಎಫ್) 15 ತುಕಡಿಗಳಲ್ಲಿ ಏಳನ್ನು ಹಿಂದಕ್ಕೆ ಕರೆಸಿಕೊಳ್ಳಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ಈ ತುಕಡಿಗಳನ್ನು ಹಿಮಾಚಲ ಪ್ರದೇಶ ಮತ್ತು ಗುಜರಾತ್ನಲ್ಲಿ ನಡೆಯಲಿರುವ ಚುನಾವಣಾ ಭದ್ರತೆಗಾಗಿ ಬಳಸಿಕೊಳ್ಳಲಾಗುತ್ತದೆ.