ಡಿಎಂಕೆ ಮತ್ತು ಮಿತ್ರ ಪಕ್ಷಗಳ ಕಾರ್ಯಕರ್ತರು ಕೂಡ ಕಪ್ಪು ಬಾವುಟ ಪ್ರದರ್ಶನ ಮಾಡಿದರು. ಡಿಎಂಕೆ ಪಕ್ಷದ ನಾಯಕರ ಮನೆಗಳ ಮೇಲೂ ಕಪ್ಪು ಬಾವುಟಗಳನ್ನು ಹಾರಿಸಲಾಗಿತ್ತು. ’ಹಾರುತ್ತಿರುವ ಕಪ್ಪು ಬಾವುಟಗಳು ನಮ್ಮ ಭಾವನೆಗಳನ್ನು ಬಿಂಬಿಸುತ್ತಿವೆ, ಜನರು ತಮ್ಮ ಮನೆಗಳ ಮೇಲೆ ಕಪ್ಪು ಬಾವುಟಗಳನ್ನು ಹಾರಿಸಿದ್ದಾರೆ, ನೀವು ಈಗಲಾದರೂ ಎಚ್ಚೆತ್ತುಕೊಂಡು ಸುಪ್ರೀಂ ಕೋರ್ಟ್ನಲ್ಲಿರುವ ಅರ್ಜಿಯನ್ನು ವಾಪಾಸು ಪಡೆಯಿರಿ, ಇಲ್ಲವಾದಲ್ಲಿ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಡಿಎಂಕೆ ನಾಯಕ ಸ್ಟಾಲಿನ್ ಟ್ವೀಟ್ ಮಾಡಿದ್ದಾರೆ.