ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ. 21 ರಿಂದ 27ರವರೆಗೆ ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ನೀರು ಬಿಡಲು ರಾಜ್ಯ ಸರ್ಕಾರಕ್ಕೆ ಮಂಗಳವಾರ ಸುಪ್ರೀಂ ಕೋರ್ಟ್ ಸೂಚಿಸಿದೆ.
ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ವಾದವನ್ನು ಆಲಿಸಿದ ಸುಪ್ರೀಂ ಕೋರ್ಟ್ನ ದ್ವಿಸದಸ್ಯ ಪೀಠ ತಮಿಳುನಾಡಿಗೆ ನೀರು ಬಿಡಲು ಆದೇಶಿಸಿತು.
ನೀರು ಹಂಚಿಕೆ ಸಂಬಂಧ ನಾಲ್ಕು ವಾರಗಳಲ್ಲಿ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತು.