ತಿರುಪತಿ: ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ತಮ್ಮ ಹುಟ್ಟು ಹಬ್ಬದ ನಿಮಿತ್ತ ತಿರುಪತಿ ತಿಮ್ಮಪ್ಪನ ದೇಗುಲಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಎಚ್.ಡಿ.ದೇವೇಗೌಡ ಅವರು ಕುಟುಂಬದ ಸದಸ್ಯರ ಜತೆ ಗುರುವಾರ ಬೆಂಗಳೂರಿನಿಂದ ತಿರುಪತಿಗೆ ತೆರಳಿದ್ದರು.
ರಾಜ್ಯ ರಾಜಕೀಯದಲ್ಲಿ ಬಿರುಸಿನ ಬೆಳವಣಿಗೆಗಳಾಗುತ್ತಿರುವ ವೇಳೆ ದೇವೇಗೌಡರು ತಿರುಪತಿಗೆ ಹೊರಟಿದ್ದೇಕೆ ಎಂಬ ಪ್ರಶ್ನೆ ಚರ್ಚೆಯಾಗುತ್ತಿತ್ತು. ಈ ವೇಳೆ ಅವರು, ತಮ್ಮ ಜನ್ಮ ದಿನದಂದು ಪ್ರತಿ ವರ್ಷ ತಿರುಪತಿಗೆ ಹೋಗುತ್ತೇನೆ ಅದರಂತೆ ಇಂದೂ ಹೋಗುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದರು.