<p><strong>ನವದೆಹಲಿ (ಪಿಟಿಐ):</strong> ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯ ಮಸೂದೆಗೆ ಸಂಬಂಧಿಸಿ ನಿರ್ಧಾರ ತೆಗೆದುಕೊಳ್ಳಲು ರಾಷ್ಟ್ರಪತಿಗಳು ಆಂಧ್ರಪ್ರದೇಶದ ವಿಧಾನಸಭೆಗೆ ಆರು ವಾರಗಳ ಕಾಲಾವಕಾಶ ನೀಡಿದ್ದಾರೆ.<br /> <br /> ಮಸೂದೆಗೆ ಅಂಕಿತ ಹಾಕಿರುವ ರಾಷ್ಟ್ರಪತಿಗಳು, ಇದು ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಅಂಗೀಕಾರ ವಾಗಬೇಕಿರುವುದರಿಂದ ಬುಧವಾರ ರಾತ್ರಿ ವಾಪಸ್ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಟ್ಟಿದ್ದಾರೆ.<br /> <br /> ಆಂಧ್ರ ಒಡೆಯುವ ಈ ಮಸೂದೆಯನ್ನು ಇದೀಗ ಆಂಧ್ರಪ್ರದೇಶ ವಿಧಾನಸಭೆಗೆ ಕಳುಹಿಸಲಾಗುತ್ತಿದ್ದು, ಈಗಾಗಲೆ ಸ್ಪೀಕರ್ ಎನ್. ಮನೋಹರ್ ಅವರ ಕಚೇರಿಗೆ ಮಾಹಿತಿ ನೀಡಲಾಗಿದೆ. ಆದರೆ ಮಸೂದೆಗೆ ಆಂಧ್ರ ವಿಧಾನಸಭೆ ಅಂಗೀಕಾರ ನೀಡಲಿ ಇಲ್ಲವೆ ಬಿಡಲಿ , ಪ್ರತ್ಯೇಕ ರಾಜ್ಯ ರಚನೆ ವಿಷಯದಲ್ಲಿ ಸಂಸತ್ತು ತಾನು ತೆಗೆದುಕೊಂಡ ನಿರ್ಧಾರ ಅನುಷ್ಠಾನಕ್ಕೆ ತರಲು ತೊಂದರೆ ಇಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.<br /> <br /> <strong>ಹೈದರಾಬಾದ್ ತಲುಪಿದ ಮಸೂದೆ</strong><br /> ಮಸೂದೆಯ ದಾಖಲೆಗಳನ್ನು ಹೊತ್ತ ವಿಶೇಷ ವಿಮಾನ ಗುರುವಾರ ಸಂಜೆ ಹೈದರಾಬಾದ್ ತಲುಪಿದ್ದು ಕೇಂದ್ರ ಗೃಹ ಸಚಿವಾಲಯದ ಸಿಬ್ಬಂದಿ ಇದನ್ನು ರಾಜ್ಯದ ಮುಖ್ಯ ಕಾರ್ಯದರ್ಶಿಗೆ ತಲುಪಿಸಿದರು.</p>.<p>ಮಸೂದೆ ಹೈದರಾಬಾದ್ ತಲುಪುತ್ತಲೆ ರಾಜಕೀಯ ವಲಯದಲ್ಲಿ ಸಂಚಲನ ಆರಂಭವಾಗಿದ್ದು ವಿವಿಧ ಮುಖಂಡರು ಈ ಕುರಿತು ಪರ, ವಿರೋಧ ಅಭಿ<br /> ಪ್ರಾಯ ಸಂಗ್ರಹಿಸಲು ಓಡಾಡುವುದು ಕಂಡುಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯ ಮಸೂದೆಗೆ ಸಂಬಂಧಿಸಿ ನಿರ್ಧಾರ ತೆಗೆದುಕೊಳ್ಳಲು ರಾಷ್ಟ್ರಪತಿಗಳು ಆಂಧ್ರಪ್ರದೇಶದ ವಿಧಾನಸಭೆಗೆ ಆರು ವಾರಗಳ ಕಾಲಾವಕಾಶ ನೀಡಿದ್ದಾರೆ.<br /> <br /> ಮಸೂದೆಗೆ ಅಂಕಿತ ಹಾಕಿರುವ ರಾಷ್ಟ್ರಪತಿಗಳು, ಇದು ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಅಂಗೀಕಾರ ವಾಗಬೇಕಿರುವುದರಿಂದ ಬುಧವಾರ ರಾತ್ರಿ ವಾಪಸ್ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಟ್ಟಿದ್ದಾರೆ.<br /> <br /> ಆಂಧ್ರ ಒಡೆಯುವ ಈ ಮಸೂದೆಯನ್ನು ಇದೀಗ ಆಂಧ್ರಪ್ರದೇಶ ವಿಧಾನಸಭೆಗೆ ಕಳುಹಿಸಲಾಗುತ್ತಿದ್ದು, ಈಗಾಗಲೆ ಸ್ಪೀಕರ್ ಎನ್. ಮನೋಹರ್ ಅವರ ಕಚೇರಿಗೆ ಮಾಹಿತಿ ನೀಡಲಾಗಿದೆ. ಆದರೆ ಮಸೂದೆಗೆ ಆಂಧ್ರ ವಿಧಾನಸಭೆ ಅಂಗೀಕಾರ ನೀಡಲಿ ಇಲ್ಲವೆ ಬಿಡಲಿ , ಪ್ರತ್ಯೇಕ ರಾಜ್ಯ ರಚನೆ ವಿಷಯದಲ್ಲಿ ಸಂಸತ್ತು ತಾನು ತೆಗೆದುಕೊಂಡ ನಿರ್ಧಾರ ಅನುಷ್ಠಾನಕ್ಕೆ ತರಲು ತೊಂದರೆ ಇಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.<br /> <br /> <strong>ಹೈದರಾಬಾದ್ ತಲುಪಿದ ಮಸೂದೆ</strong><br /> ಮಸೂದೆಯ ದಾಖಲೆಗಳನ್ನು ಹೊತ್ತ ವಿಶೇಷ ವಿಮಾನ ಗುರುವಾರ ಸಂಜೆ ಹೈದರಾಬಾದ್ ತಲುಪಿದ್ದು ಕೇಂದ್ರ ಗೃಹ ಸಚಿವಾಲಯದ ಸಿಬ್ಬಂದಿ ಇದನ್ನು ರಾಜ್ಯದ ಮುಖ್ಯ ಕಾರ್ಯದರ್ಶಿಗೆ ತಲುಪಿಸಿದರು.</p>.<p>ಮಸೂದೆ ಹೈದರಾಬಾದ್ ತಲುಪುತ್ತಲೆ ರಾಜಕೀಯ ವಲಯದಲ್ಲಿ ಸಂಚಲನ ಆರಂಭವಾಗಿದ್ದು ವಿವಿಧ ಮುಖಂಡರು ಈ ಕುರಿತು ಪರ, ವಿರೋಧ ಅಭಿ<br /> ಪ್ರಾಯ ಸಂಗ್ರಹಿಸಲು ಓಡಾಡುವುದು ಕಂಡುಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>