ಹೈದರಾಬಾದ್ (ಐಎಎನ್ಎಸ್): ಪ್ರತ್ಯೇಕ ತೆಲಂಗಾಣ ರಾಜ್ಯಕ್ಕಾಗಿ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಇದೀಗ ಅಸಹಕಾರ ಚಳವಳಿಯಾಗಿ ಮಾರ್ಪಾಡುಗೊಂಡಿದೆ. ಜಂಟಿ ಕ್ರಿಯಾ ಸಮಿತಿ, ತೆಲಂಗಾಣ ರಾಷ್ಟ್ರೀಯ ಸಮಿತಿ, ಭಾರತೀಯ ಜನತಾ ಪಕ್ಷಗಳು ನೀಡಿದ ಕರೆಗೆ ಓಗೊಟ್ಟು ಸುಮಾರು 3 ಲಕ್ಷ ಮಂದಿ ಸರ್ಕಾರಿ ನೌಕರರು ಗುರುವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.