ನವದೆಹಲಿ: ಶತಾಬ್ದಿ ರೈಲುಗಳು ಸಂಚರಿಸುವ ಮಾರ್ಗಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇದ್ದರೆ, ಅಂತಹ ಕಡೆ ಪ್ರಯಾಣ ದರ ಕಡಿಮೆ ಮಾಡಲು ರೈಲ್ವೆ ಇಲಾಖೆ ಚಿಂತನೆ ನಡೆಸಿದೆ.
ಪ್ರಸ್ತುತ 45 ಶತಾಬ್ದಿ ರೈಲುಗಳು ಸಂಚರಿಸುತ್ತಿದ್ದು, ಈ ಯೋಜನೆಯ ಜಾರಿಗೆ 25 ರೈಲುಗಳನ್ನು ಗುರುತಿಸಲಾಗಿದೆ ಎಂದು
ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ನವದೆಹಲಿ–ಅಜ್ಮೀರ್ ಮತ್ತು ಚೆನ್ನೈ–ಮೈಸೂರು ಮಾರ್ಗಗಳಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿ ಮಾಡಲಾಗಿತ್ತು. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶೇ 17ರಷ್ಟು ಆದಾಯ ಹೆಚ್ಚಳವಾಗಿದೆ. ಅಲ್ಲದೆ ಟಿಕೆಟ್ ಕಾಯ್ದಿರಿಸುವಿಕೆ ಪ್ರಮಾಣ ಶೇ 63ರಷ್ಟು ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.