<p><strong>ನವದೆಹಲಿ (ಐಎಎನ್ಎಸ್):</strong> ಮಹಾರಾಷ್ಟ್ರದ ದಾಭೋಲ್ನಿಂದ ಬೆಂಗಳೂರಿಗೆ ಅನಿಲ ಪೂರೈಕೆ ಮಾಡುವ ರೂ.4,500 ಕೋಟಿ ವೆಚ್ಚದ ಕೊಳವೆ ಮಾರ್ಗ ಯೋಜನೆಯನ್ನು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಮಂಗಳವಾರ ಉದ್ಘಾಟಿಸಿದರು.<br /> <br /> ಸರ್ಕಾರಿ ಸ್ವಾಮ್ಯದ ಭಾರತೀಯ ಅನಿಲ ಪ್ರಾಧಿಕಾರ (ಜಿಎಐಎಲ್) ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ.<br /> <br /> ಜಿಎಐಎಲ್ ಮತ್ತು ಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟ (ಫಿಕ್ಕಿ) ಜಂಟಿಯಾಗಿ ಆಯೋಜಿಸಿದ್ದ 8ನೇ ಏಷ್ಯಾ ಅನಿಲ ಸಹಭಾಗಿತ್ವ ಶೃಂಗಸಭೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿಯವರು ಈ ಯೋಜನೆಯನ್ನು ದೇಶಕ್ಕೆ ಸರ್ಮಪಿಸಿದರು.<br /> <br /> ದಿನವೊಂದಕ್ಕೆ 16 ದಶಲಕ್ಷ ಘನ ಅಡಿ ನೈಸರ್ಗಿಕ ಅನಿಲದಿಂದ 3,000 ಮೆಗಾವಾಟ್ ವಿದ್ಯುತ್ ಉತ್ಪಾದಿಸುವಂತೆ ಈ ಯೋಜನೆಯನ್ನು ವಿನ್ಯಾಸಗೊಳಿಸಲಾಗಿದೆ.</p>.<p>19 ತಿಂಗಳಲ್ಲಿ ಪೂರ್ಣಗೊಂಡ ಈ ಯೋಜನೆಯ ಮಾರ್ಗವು ದಾಭೋಲ್ನಿಂದ ಬೆಳಗಾವಿ, ಧಾರವಾಡ, ಗದಗ, ಬೆಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ ಮೂಲಕವಾಗಿ ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಪ್ರದೇಶಗಳನ್ನು ಸಂಪರ್ಕಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಐಎಎನ್ಎಸ್):</strong> ಮಹಾರಾಷ್ಟ್ರದ ದಾಭೋಲ್ನಿಂದ ಬೆಂಗಳೂರಿಗೆ ಅನಿಲ ಪೂರೈಕೆ ಮಾಡುವ ರೂ.4,500 ಕೋಟಿ ವೆಚ್ಚದ ಕೊಳವೆ ಮಾರ್ಗ ಯೋಜನೆಯನ್ನು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಮಂಗಳವಾರ ಉದ್ಘಾಟಿಸಿದರು.<br /> <br /> ಸರ್ಕಾರಿ ಸ್ವಾಮ್ಯದ ಭಾರತೀಯ ಅನಿಲ ಪ್ರಾಧಿಕಾರ (ಜಿಎಐಎಲ್) ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ.<br /> <br /> ಜಿಎಐಎಲ್ ಮತ್ತು ಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟ (ಫಿಕ್ಕಿ) ಜಂಟಿಯಾಗಿ ಆಯೋಜಿಸಿದ್ದ 8ನೇ ಏಷ್ಯಾ ಅನಿಲ ಸಹಭಾಗಿತ್ವ ಶೃಂಗಸಭೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿಯವರು ಈ ಯೋಜನೆಯನ್ನು ದೇಶಕ್ಕೆ ಸರ್ಮಪಿಸಿದರು.<br /> <br /> ದಿನವೊಂದಕ್ಕೆ 16 ದಶಲಕ್ಷ ಘನ ಅಡಿ ನೈಸರ್ಗಿಕ ಅನಿಲದಿಂದ 3,000 ಮೆಗಾವಾಟ್ ವಿದ್ಯುತ್ ಉತ್ಪಾದಿಸುವಂತೆ ಈ ಯೋಜನೆಯನ್ನು ವಿನ್ಯಾಸಗೊಳಿಸಲಾಗಿದೆ.</p>.<p>19 ತಿಂಗಳಲ್ಲಿ ಪೂರ್ಣಗೊಂಡ ಈ ಯೋಜನೆಯ ಮಾರ್ಗವು ದಾಭೋಲ್ನಿಂದ ಬೆಳಗಾವಿ, ಧಾರವಾಡ, ಗದಗ, ಬೆಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ ಮೂಲಕವಾಗಿ ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಪ್ರದೇಶಗಳನ್ನು ಸಂಪರ್ಕಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>