<p><strong>ನವದೆಹಲಿ (ಐಎಎನ್ಎಸ್): </strong>`ಭ್ರಷ್ಟಾಚಾರ ನಿರ್ಮೂಲನೆ ಮಾಡುವಲ್ಲಿ ಯಾವುದೇ ಮಾಟ-ಮಂತ್ರವಿಲ್ಲ. ಸರ್ಕಾರ ಕೂಡ ಭ್ರಷ್ಟಾಚಾರವನ್ನು ಪೋಷಿಸುತ್ತಿಲ್ಲ. ಆದರೆ, ಅದರ ನಿರ್ಮೂಲನೆಗೆ ಅಧಿಕಾರಿಗಳು ದಿಟ್ಟ ನಿರ್ಧಾರಗಳನ್ನು ಕೈಗೊಳ್ಳಬೇಕು~ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಇಲ್ಲಿ ಅಧಿಕಾರಿಗಳಿಗೆ ಕರೆ ನೀಡಿದರು.<br /> <br /> ಶನಿವಾರ ಆರಂಭವಾದ 7ನೇ ನಾಗರಿಕ ಸೇವಾ ದಿನ ಸಮಾರಂಭವನ್ನು ಉದ್ಘಾಟನೆ ಮಾಡಿ ಮಾತನಾಡಿದ ಪ್ರಧಾನಿ ಅವರು `ಭ್ರಷ್ಟಾಚಾರ ವಿರುದ್ಧದ ಹೋರಾಟದಲ್ಲಿ ಯಾವುದೇ ಮಾಟ-ಮಂತ್ರ ಇರುವುದಿಲ್ಲ. ಅದರ ನಿರ್ಮೂಲನೆಗೆ ಅಧಿಕಾರಿಗಳು ಶ್ರಮಿಸಬೇಕು~ ಎಂದರು.<br /> <br /> ಯಾವ ಅಧಿಕಾರಿಗಳು ಭ್ರಷ್ಟಾಚಾರನ್ನು ಪ್ರೋತ್ಸಾಹಿಸಬಾರದು. ಭ್ರಷ್ಟಾಚಾರವನ್ನು ಕಡಿವಾಣದಲ್ಲಿಡಲು ಅಧಿಕಾರಿಗಳಿಗೆ ನಮ್ಮ ಸರ್ಕಾರ ಉತ್ತಮ ಪರಿಸರವನ್ನು ಕಲ್ಪಿಸಿಕೊಡುತ್ತದೆ.<br /> <br /> ದೇಶದ ಕಾನೂನಿನ ಪ್ರಕಾರ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರಿಗಳನ್ನು ನಮ್ಮ ಸರ್ಕಾರ ಪ್ರೋತ್ಸಾಹಿಸುತ್ತದೆ. ಯಾವ ವ್ಯಕ್ತಿಯು ಭ್ರಷ್ಟಾಚಾರದ ಸುಳಿಗೆ ಸಿಲಕಬಾರದು~ ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು. <br /> <br /> ಯಾವ ಅಧಿಕಾರಿ ತನ್ನ ಅಧಿಕಾರದ ಅವಧಿಯಲ್ಲಿ ಯಾವುದೇ ಪ್ರಬಲ ನಿರ್ಧಾರಗಳನ್ನು ಕೈಗೊಳ್ಳದೆ ಸುರಕ್ಷಿತವಾಗಿ ಇರಬಹುದು. ಆದರೆ ಅಂತಿಮವಾಗಿ ಆತನಿಂದ ದೇಶಕ್ಕೆ ಮತ್ತು ಸಮಾಜಕ್ಕೆ ಯಾವುದೇ ಕೊಡುಗೆ ಇರುವುದಿಲ್ಲ~ ಎಂದರು.</p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಐಎಎನ್ಎಸ್): </strong>`ಭ್ರಷ್ಟಾಚಾರ ನಿರ್ಮೂಲನೆ ಮಾಡುವಲ್ಲಿ ಯಾವುದೇ ಮಾಟ-ಮಂತ್ರವಿಲ್ಲ. ಸರ್ಕಾರ ಕೂಡ ಭ್ರಷ್ಟಾಚಾರವನ್ನು ಪೋಷಿಸುತ್ತಿಲ್ಲ. ಆದರೆ, ಅದರ ನಿರ್ಮೂಲನೆಗೆ ಅಧಿಕಾರಿಗಳು ದಿಟ್ಟ ನಿರ್ಧಾರಗಳನ್ನು ಕೈಗೊಳ್ಳಬೇಕು~ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಇಲ್ಲಿ ಅಧಿಕಾರಿಗಳಿಗೆ ಕರೆ ನೀಡಿದರು.<br /> <br /> ಶನಿವಾರ ಆರಂಭವಾದ 7ನೇ ನಾಗರಿಕ ಸೇವಾ ದಿನ ಸಮಾರಂಭವನ್ನು ಉದ್ಘಾಟನೆ ಮಾಡಿ ಮಾತನಾಡಿದ ಪ್ರಧಾನಿ ಅವರು `ಭ್ರಷ್ಟಾಚಾರ ವಿರುದ್ಧದ ಹೋರಾಟದಲ್ಲಿ ಯಾವುದೇ ಮಾಟ-ಮಂತ್ರ ಇರುವುದಿಲ್ಲ. ಅದರ ನಿರ್ಮೂಲನೆಗೆ ಅಧಿಕಾರಿಗಳು ಶ್ರಮಿಸಬೇಕು~ ಎಂದರು.<br /> <br /> ಯಾವ ಅಧಿಕಾರಿಗಳು ಭ್ರಷ್ಟಾಚಾರನ್ನು ಪ್ರೋತ್ಸಾಹಿಸಬಾರದು. ಭ್ರಷ್ಟಾಚಾರವನ್ನು ಕಡಿವಾಣದಲ್ಲಿಡಲು ಅಧಿಕಾರಿಗಳಿಗೆ ನಮ್ಮ ಸರ್ಕಾರ ಉತ್ತಮ ಪರಿಸರವನ್ನು ಕಲ್ಪಿಸಿಕೊಡುತ್ತದೆ.<br /> <br /> ದೇಶದ ಕಾನೂನಿನ ಪ್ರಕಾರ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರಿಗಳನ್ನು ನಮ್ಮ ಸರ್ಕಾರ ಪ್ರೋತ್ಸಾಹಿಸುತ್ತದೆ. ಯಾವ ವ್ಯಕ್ತಿಯು ಭ್ರಷ್ಟಾಚಾರದ ಸುಳಿಗೆ ಸಿಲಕಬಾರದು~ ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು. <br /> <br /> ಯಾವ ಅಧಿಕಾರಿ ತನ್ನ ಅಧಿಕಾರದ ಅವಧಿಯಲ್ಲಿ ಯಾವುದೇ ಪ್ರಬಲ ನಿರ್ಧಾರಗಳನ್ನು ಕೈಗೊಳ್ಳದೆ ಸುರಕ್ಷಿತವಾಗಿ ಇರಬಹುದು. ಆದರೆ ಅಂತಿಮವಾಗಿ ಆತನಿಂದ ದೇಶಕ್ಕೆ ಮತ್ತು ಸಮಾಜಕ್ಕೆ ಯಾವುದೇ ಕೊಡುಗೆ ಇರುವುದಿಲ್ಲ~ ಎಂದರು.</p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>