<p><strong>ನವದೆಹಲಿ (ಪಿಟಿಐ):</strong> ಸತತ 15 ವರ್ಷಗಳ ಕಾಲ ದೆಹಲಿಯಲ್ಲಿ ರಾಜ್ಯಭಾರ ನಡೆಸಿದ್ದ ಶೀಲಾ ದೀಕ್ಷಿತ್ ಅವರು, ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ವಿರುದ್ಧ ಭಾನುವಾರ ಸೋಲು ಕಂಡಿದ್ದಾರೆ. ಸೋಲು ಖಚಿತಗೊಳ್ಳುತ್ತಿದ್ದಂತೆ ದೀಕ್ಷಿತ್, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.<br /> <br /> ಲೆಫ್ಟಿನೆಂಟ್ ಗವರ್ನರ್ ನಜೀಬ್ ಜುಂಗ್ ಅವರಿಗೆ ಶೀಲಾ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.</p>.<p>ದೀಕ್ಷಿತ್ ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದರು.<br /> <br /> <strong>ದೆಹಲಿ ವಿಧಾನಸಭೆ ವಿಸರ್ಜನೆ</strong><strong>: </strong>ದೆಹಲಿ ವಿಧಾನಸಭೆಯನ್ನು ಭಾನುವಾರ ವಿಸರ್ಜನೆ ಗೊಳಿಸಿರುವ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜುಂಗ್, ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ಪ್ರಣವ್ ಮುಖರ್ಜಿಗೆ ರವಾನಿಸಿದ್ದಾರೆ.</p>.<p>‘ಇಂದಿನಿಂದ ಅನ್ವಯಿಸುವಂತೆ(ಡಿಸೆಂಬರ್8, 2013) ದೆಹಲಿ ವಿಧಾನಸಭೆಯ ನಾಲ್ಕನೇ ಶಾಸಕಾಂಗವನ್ನು ನಜೀಬ್ ಅವರು ವಿಸರ್ಜಿಸಿದ್ದಾರೆ. ದೀಕ್ಷಿತ್ ಅವರ ರಾಜೀನಾಮೆ ಪತ್ರವನ್ನು ’ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಸತತ 15 ವರ್ಷಗಳ ಕಾಲ ದೆಹಲಿಯಲ್ಲಿ ರಾಜ್ಯಭಾರ ನಡೆಸಿದ್ದ ಶೀಲಾ ದೀಕ್ಷಿತ್ ಅವರು, ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ವಿರುದ್ಧ ಭಾನುವಾರ ಸೋಲು ಕಂಡಿದ್ದಾರೆ. ಸೋಲು ಖಚಿತಗೊಳ್ಳುತ್ತಿದ್ದಂತೆ ದೀಕ್ಷಿತ್, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.<br /> <br /> ಲೆಫ್ಟಿನೆಂಟ್ ಗವರ್ನರ್ ನಜೀಬ್ ಜುಂಗ್ ಅವರಿಗೆ ಶೀಲಾ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.</p>.<p>ದೀಕ್ಷಿತ್ ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದರು.<br /> <br /> <strong>ದೆಹಲಿ ವಿಧಾನಸಭೆ ವಿಸರ್ಜನೆ</strong><strong>: </strong>ದೆಹಲಿ ವಿಧಾನಸಭೆಯನ್ನು ಭಾನುವಾರ ವಿಸರ್ಜನೆ ಗೊಳಿಸಿರುವ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜುಂಗ್, ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ಪ್ರಣವ್ ಮುಖರ್ಜಿಗೆ ರವಾನಿಸಿದ್ದಾರೆ.</p>.<p>‘ಇಂದಿನಿಂದ ಅನ್ವಯಿಸುವಂತೆ(ಡಿಸೆಂಬರ್8, 2013) ದೆಹಲಿ ವಿಧಾನಸಭೆಯ ನಾಲ್ಕನೇ ಶಾಸಕಾಂಗವನ್ನು ನಜೀಬ್ ಅವರು ವಿಸರ್ಜಿಸಿದ್ದಾರೆ. ದೀಕ್ಷಿತ್ ಅವರ ರಾಜೀನಾಮೆ ಪತ್ರವನ್ನು ’ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>