<p><strong>ಭಟ್ಕಳ: </strong>ಧಾರವಾಡ ಕಾರಾಗೃಹದಿಂದ ಪರಾರಿಯಾಗಿದ್ದ ಕಮ್ಮರಡಿ ಹನೀಫ್ನನ್ನು ಬಂಧಿಸಿದ ಭಟ್ಕಳದ ಪೊಲೀಸರಿಗೆ ಆತ ವಿಚಾರಣೆ ಸಂದರ್ಭದಲ್ಲಿ ಹಲವು ಮಹತ್ವದ ವಿಷಯಗಳನ್ನು ತಿಳಿಸಿದ್ದಾನೆ ಎನ್ನಲಾಗಿದೆ.<br /> <br /> ಉಡುಪಿ ಮೂಲಕ ಮಂಗಳೂರಿಗೆ ತೆರಳಿ ಅಲ್ಲಿಂದ ಮುಂಬೈಗೆ ಹೋಗಿ, ಸ್ವಲ್ಪ ದಿನಗಳ ನಂತರ ದುಬೈಗೆ ತೆರಳಲು ಸಂಚು ಹೂಡಿದ್ದ ಎಂದು ತಿಳಿದುಬಂದಿದೆ. ಈತನ ಸ್ನೇಹಿತ ಹೆಬ್ಬೆಟ್ ಮಂಜ ಕೂಡ ದುಬೈನಲ್ಲಿ ಇರುವುದರಿಂದ ಅಲ್ಲಿಗೆ ತೆರಳಲು ಹನೀಫ್ ಯೋಜಿಸಿದ್ದ ಎನ್ನಲಾಗಿದೆ.<br /> <br /> ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾ.ಪಂ.ಅಧ್ಯಕ್ಷ ಹೊಸಳ್ಳಿ ವೆಂಕಟೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಹನೀಫ್, ಇನ್ನೂ ಜೈಲಿನಲ್ಲಿಯೇ ಇರಬೇಕಾಗುತ್ತದೆ ಎಂದು ಪರಾರಿಯಾಗಿ ದೇಶ ತೊರೆಯಲು ಉದ್ದೇಶಿಸಿದ್ದ ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ.<br /> <br /> ನೆಲಮಂಗಲದ ಜೆಡಿಎಸ್ ಮುಖಂಡ ಹಾಗೂ ಜಿ.ಪಂ ಸದಸ್ಯ ಕೃಷ್ಣಪ್ಪನ ಹತ್ಯೆಗೂ ತನಗೂ ಸಂಬಂಧವಿಲ್ಲ ಎಂದು ಆತ ಹೇಳಿಕೊಂಡಿದ್ದಾನೆ. ಆ ಕೊಲೆಗೆ ಸುಪಾರಿ ಕೊಟ್ಟವನೂ ತಾನಲ್ಲ. ಕೃಷ್ಣಪ್ಪ ಹಾಗೂ ಸೀನ ಎಂಬುವವರು ಪರಸ್ಪರ ದ್ವೇಷಿಸುತ್ತಿದ್ದರು ಎಂದು ವಿಚಾರಣೆ ಸಂದರ್ಭದಲ್ಲಿ ತಿಳಿಸಿದ್ದಾನೆ ಎನ್ನಲಾಗಿದೆ.<br /> <br /> ದಕ್ಷಿಣ ಕನ್ನಡದ ಪಡುಬಿದ್ರೆಯ ಜೆಡಿಎಸ್ ಮುಖಂಡ ಗುಲಾಂ ಅವರಿಗೆ ಹಣ ನೀಡುವಂತೆ ಪೋನ್ ಮಾಡಿ ಬೆದರಿಕೆ ಹಾಕಿದ್ದು ನಿಜ ಎಂದು ಒಪ್ಪಿಕೊಂಡಿರುವ ಆತ ಕೈದಿ ಹನೀಫ್, ಬೆಳಗಾವಿ ಜೈಲಿನಲ್ಲಿರುವ ಹಿರಿಯಡ್ಕ ಸಂತೋಷ ಎಂಬಾತ ಗುಲಾಂ ನಂಬರ್ ಕೊಟ್ಟು ಬೆದರಿಕೆ ಹಾಕಲು ಹೇಳಿದ್ದರಿಂದ ಆ ರೀತಿ ಮಾಡಿದೆ ಎಂದಿದ್ದಾನೆ. <br /> ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿ, ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ: </strong>ಧಾರವಾಡ ಕಾರಾಗೃಹದಿಂದ ಪರಾರಿಯಾಗಿದ್ದ ಕಮ್ಮರಡಿ ಹನೀಫ್ನನ್ನು ಬಂಧಿಸಿದ ಭಟ್ಕಳದ ಪೊಲೀಸರಿಗೆ ಆತ ವಿಚಾರಣೆ ಸಂದರ್ಭದಲ್ಲಿ ಹಲವು ಮಹತ್ವದ ವಿಷಯಗಳನ್ನು ತಿಳಿಸಿದ್ದಾನೆ ಎನ್ನಲಾಗಿದೆ.<br /> <br /> ಉಡುಪಿ ಮೂಲಕ ಮಂಗಳೂರಿಗೆ ತೆರಳಿ ಅಲ್ಲಿಂದ ಮುಂಬೈಗೆ ಹೋಗಿ, ಸ್ವಲ್ಪ ದಿನಗಳ ನಂತರ ದುಬೈಗೆ ತೆರಳಲು ಸಂಚು ಹೂಡಿದ್ದ ಎಂದು ತಿಳಿದುಬಂದಿದೆ. ಈತನ ಸ್ನೇಹಿತ ಹೆಬ್ಬೆಟ್ ಮಂಜ ಕೂಡ ದುಬೈನಲ್ಲಿ ಇರುವುದರಿಂದ ಅಲ್ಲಿಗೆ ತೆರಳಲು ಹನೀಫ್ ಯೋಜಿಸಿದ್ದ ಎನ್ನಲಾಗಿದೆ.<br /> <br /> ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾ.ಪಂ.ಅಧ್ಯಕ್ಷ ಹೊಸಳ್ಳಿ ವೆಂಕಟೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಹನೀಫ್, ಇನ್ನೂ ಜೈಲಿನಲ್ಲಿಯೇ ಇರಬೇಕಾಗುತ್ತದೆ ಎಂದು ಪರಾರಿಯಾಗಿ ದೇಶ ತೊರೆಯಲು ಉದ್ದೇಶಿಸಿದ್ದ ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ.<br /> <br /> ನೆಲಮಂಗಲದ ಜೆಡಿಎಸ್ ಮುಖಂಡ ಹಾಗೂ ಜಿ.ಪಂ ಸದಸ್ಯ ಕೃಷ್ಣಪ್ಪನ ಹತ್ಯೆಗೂ ತನಗೂ ಸಂಬಂಧವಿಲ್ಲ ಎಂದು ಆತ ಹೇಳಿಕೊಂಡಿದ್ದಾನೆ. ಆ ಕೊಲೆಗೆ ಸುಪಾರಿ ಕೊಟ್ಟವನೂ ತಾನಲ್ಲ. ಕೃಷ್ಣಪ್ಪ ಹಾಗೂ ಸೀನ ಎಂಬುವವರು ಪರಸ್ಪರ ದ್ವೇಷಿಸುತ್ತಿದ್ದರು ಎಂದು ವಿಚಾರಣೆ ಸಂದರ್ಭದಲ್ಲಿ ತಿಳಿಸಿದ್ದಾನೆ ಎನ್ನಲಾಗಿದೆ.<br /> <br /> ದಕ್ಷಿಣ ಕನ್ನಡದ ಪಡುಬಿದ್ರೆಯ ಜೆಡಿಎಸ್ ಮುಖಂಡ ಗುಲಾಂ ಅವರಿಗೆ ಹಣ ನೀಡುವಂತೆ ಪೋನ್ ಮಾಡಿ ಬೆದರಿಕೆ ಹಾಕಿದ್ದು ನಿಜ ಎಂದು ಒಪ್ಪಿಕೊಂಡಿರುವ ಆತ ಕೈದಿ ಹನೀಫ್, ಬೆಳಗಾವಿ ಜೈಲಿನಲ್ಲಿರುವ ಹಿರಿಯಡ್ಕ ಸಂತೋಷ ಎಂಬಾತ ಗುಲಾಂ ನಂಬರ್ ಕೊಟ್ಟು ಬೆದರಿಕೆ ಹಾಕಲು ಹೇಳಿದ್ದರಿಂದ ಆ ರೀತಿ ಮಾಡಿದೆ ಎಂದಿದ್ದಾನೆ. <br /> ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿ, ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>