‘ಕ್ಯಾ ಬತಾಯೇಂಗೆ ಸಾಹೇಬ್, ಸಬ್ ಜಾನ್ ಕರ್ ಅಂಜಾನ್ ಕ್ಯೂಂ ಹೈ’ (ಎಲ್ಲ ಗೊತ್ತಿದ್ದೂ, ಗೊತ್ತಿಲ್ಲದವರಂತೆ ಇರುವುದು ಏಕೆ ಹೇಳುತ್ತೀರಾ ಸಾಹೇಬರೆ?) ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ. ದೆಹಲಿ ಮಾಲಿನ್ಯಕ್ಕೆ ಪರಿಹಾರ ಕಂಡು ಹಿಡಿಯುವ ಬದಲು ಪರಸ್ಪರ ದೋಷಾರೋಪಣೆಯಲ್ಲಿ ತೊಡಗಿರುವ ಪಂಜಾಬ್, ಹರಿಯಾಣ ಮತ್ತು ದೆಹಲಿ ಮುಖ್ಯಮಂತ್ರಿಗಳ ಕೆಸರೆರಚಾಟವನ್ನು ಅವರು ಈ ರೀತಿ ಲೇವಡಿ ಮಾಡಿದ್ದಾರೆ.