<p><strong>ನವದೆಹಲಿ (ಪಿಟಿಐ):</strong> ದೆಹಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕಾಶ್ಮೀರಿ ವೈದ್ಯಕೀಯ ವಿದ್ಯಾರ್ಥಿ ಒಬ್ಬನನ್ನು ವಶಕ್ಕೆ ತೆಗೆದುಕೊಂಡಿದೆ. ಸ್ಫೋಟದ ಸಂಚಿನ ರೂವಾರಿ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.<br /> <br /> ಬಾಂಗ್ಲಾ ದೇಶದಲ್ಲಿ ಯುನಾನಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯಾಗಿರುವ ವಾಸಿಂ ಅಹಮ್ಮದ್ ಬಂಧಿತನಾಡಿದ್ದು, ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ವಾಸಿಂನನ್ನು ಭಾರತ-ಬಾಂಗ್ಲಾ ಗಡಿಯಲ್ಲಿ ಬಂಧಿಸಲಾಗಿದೆಯೋ ಅಥವಾ ಬಾಂಗ್ಲಾ ದೇಶದ ಅಧಿಕಾರಿಗಳು ಆತನನ್ನು ಭಾರತಕ್ಕೆ ಹಿಡಿದುಕೊಟ್ಟಿದ್ದಾರೆ ಎಂಬುದರ ಬಗ್ಗೆ ಯಾವೊಬ್ಬ ಅಧಿಕಾರಿಯು ಇಲ್ಲಿಯವರೆಗೆ ತುಟಿ ಬಿಚ್ಚಿಲ್ಲ. ತನಿಖಾ ಸಂಸ್ಥೆಯು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಮೂವರನ್ನು ವಶಕ್ಕೆ ತೆಗೆದುಕೊಂಡಿತ್ತು. ಆನಂತರ ಒಬ್ಬನನ್ನು ಬಿಡುಗಡೆ ಮಾಡಿತ್ತು. <br /> <br /> ಸ್ಫೋಟದ ಸಂಚಿನ ಪ್ರಮುಖ ರೂವಾರಿ ಎಂದೇ ಹೇಳಲಾತ್ತಿರುವ ಹಿಜ್ಬುಲ್ ಮುಜಾಹಿದ್ದೀನ್ ಸಂಚಾಲಕ ಜುನೈದ್ ಅಕ್ರಂನ ಅಡಗುದಾಣಗಳ ಬಗ್ಗೆಯು ಪ್ರಶ್ನಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.<br /> <br /> <strong>ಅಬ್ಬಾಸ್ ಎನ್ಐಎ ವಶಕ್ಕೆ: </strong>ದೆಹಲಿ ಹೈಕೋರ್ಟ್ ಅವರಣದಲ್ಲಿ ಸೆ.7ರಂದು ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಬಂಧಿತ ಆರೋಪಿ ಅಮೀರ್ ಅಬ್ಬಾಸ್ ದೇವ್ನನ್ನು ಇದೇ 14 ರವರೆಗೆ ರಾಷ್ಟ್ರೀಯ ತನಿಖಾ ಆಯೋದಗದ ವಶಕ್ಕೆ ನೀಡುವಂತೆ ಶುಕ್ರವಾರ ದೆಹಲಿ ಕೋರ್ಟ್ ಆದೇಶಿಸಿದೆ.<br /> <br /> ಈ ಪ್ರಕರಣವನ್ನು ವಿಚಾರಣೆ ಮಾಡಿದ ವಿಶೇಷ ನ್ಯಾಯಾಧೀಶ ಎಚ್.ಎಸ್. ಶರ್ಮಾ ಅವರು ಇನ್ನೂ ಏಳು ದಿನಗಳ ಕಾಲ ವಿಚಾರಣೆಗಾಗಿ ರಾಷ್ಟ್ರೀಯ ತನಿಖಾ ದಳದ ವಶಕ್ಕೆ ಅಬ್ಬಾಸ್ನನ್ನು ಒಪ್ಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ದೆಹಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕಾಶ್ಮೀರಿ ವೈದ್ಯಕೀಯ ವಿದ್ಯಾರ್ಥಿ ಒಬ್ಬನನ್ನು ವಶಕ್ಕೆ ತೆಗೆದುಕೊಂಡಿದೆ. ಸ್ಫೋಟದ ಸಂಚಿನ ರೂವಾರಿ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.<br /> <br /> ಬಾಂಗ್ಲಾ ದೇಶದಲ್ಲಿ ಯುನಾನಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯಾಗಿರುವ ವಾಸಿಂ ಅಹಮ್ಮದ್ ಬಂಧಿತನಾಡಿದ್ದು, ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ವಾಸಿಂನನ್ನು ಭಾರತ-ಬಾಂಗ್ಲಾ ಗಡಿಯಲ್ಲಿ ಬಂಧಿಸಲಾಗಿದೆಯೋ ಅಥವಾ ಬಾಂಗ್ಲಾ ದೇಶದ ಅಧಿಕಾರಿಗಳು ಆತನನ್ನು ಭಾರತಕ್ಕೆ ಹಿಡಿದುಕೊಟ್ಟಿದ್ದಾರೆ ಎಂಬುದರ ಬಗ್ಗೆ ಯಾವೊಬ್ಬ ಅಧಿಕಾರಿಯು ಇಲ್ಲಿಯವರೆಗೆ ತುಟಿ ಬಿಚ್ಚಿಲ್ಲ. ತನಿಖಾ ಸಂಸ್ಥೆಯು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಮೂವರನ್ನು ವಶಕ್ಕೆ ತೆಗೆದುಕೊಂಡಿತ್ತು. ಆನಂತರ ಒಬ್ಬನನ್ನು ಬಿಡುಗಡೆ ಮಾಡಿತ್ತು. <br /> <br /> ಸ್ಫೋಟದ ಸಂಚಿನ ಪ್ರಮುಖ ರೂವಾರಿ ಎಂದೇ ಹೇಳಲಾತ್ತಿರುವ ಹಿಜ್ಬುಲ್ ಮುಜಾಹಿದ್ದೀನ್ ಸಂಚಾಲಕ ಜುನೈದ್ ಅಕ್ರಂನ ಅಡಗುದಾಣಗಳ ಬಗ್ಗೆಯು ಪ್ರಶ್ನಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.<br /> <br /> <strong>ಅಬ್ಬಾಸ್ ಎನ್ಐಎ ವಶಕ್ಕೆ: </strong>ದೆಹಲಿ ಹೈಕೋರ್ಟ್ ಅವರಣದಲ್ಲಿ ಸೆ.7ರಂದು ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಬಂಧಿತ ಆರೋಪಿ ಅಮೀರ್ ಅಬ್ಬಾಸ್ ದೇವ್ನನ್ನು ಇದೇ 14 ರವರೆಗೆ ರಾಷ್ಟ್ರೀಯ ತನಿಖಾ ಆಯೋದಗದ ವಶಕ್ಕೆ ನೀಡುವಂತೆ ಶುಕ್ರವಾರ ದೆಹಲಿ ಕೋರ್ಟ್ ಆದೇಶಿಸಿದೆ.<br /> <br /> ಈ ಪ್ರಕರಣವನ್ನು ವಿಚಾರಣೆ ಮಾಡಿದ ವಿಶೇಷ ನ್ಯಾಯಾಧೀಶ ಎಚ್.ಎಸ್. ಶರ್ಮಾ ಅವರು ಇನ್ನೂ ಏಳು ದಿನಗಳ ಕಾಲ ವಿಚಾರಣೆಗಾಗಿ ರಾಷ್ಟ್ರೀಯ ತನಿಖಾ ದಳದ ವಶಕ್ಕೆ ಅಬ್ಬಾಸ್ನನ್ನು ಒಪ್ಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>