<p><strong>ನವದೆಹಲಿ (ಪಿಟಿಐ):</strong> ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಹೊರಬಿದ್ದಿದ್ದರಿಂದ ರಾಷ್ಟ್ರದ ರಾಜಧಾನಿಯಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಅನಿಶ್ಚಿತತೆ ಎದುರಾಗಿದೆ.<br /> <br /> ಒಟ್ಟೂ 70 ಸದಸ್ಯ ಬಲದ ವಿಧಾನಸಭೆಯಲ್ಲಿ ಭಾರತೀಯ ಜನತಾ ಪಕ್ಷ 32 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ, ಸರಳ ಬಹುಮತ (36) ಅಗತ್ಯವಿರುವ ಸ್ಥಾನ ಗೆಲ್ಲಲು ಅದಕ್ಕೆ ಸಾಧ್ಯವಾಗಿಲ್ಲ.<br /> ಭ್ರಷ್ಟಾಚಾರ ವಿರೋಧ ಹೋರಾಟದ ಮೂಲಕ ಅಸ್ತಿತ್ವಕ್ಕೆ ಬಂದಿರುವ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ನಿರೀಕ್ಷೆಗೂ ಮೀರಿದ ಸಾಧನೆ ಮಾಡಿದೆ. ಒಟ್ಟು 28 ಸ್ಥಾನಗಳನ್ನು ಗೆಲ್ಲುವ ಮೂಲಕ ಎರಡನೇ ಅತಿದೊಡ್ಡ ಪಕ್ಷವಾಗಿದೆ.<br /> <br /> ದೆಹಲಿಯಲ್ಲಿ ಸತತ ಮೂರು ಬಾರಿ ಅಧಿಕಾರದ ಸವಿ ಅನುಭವಿಸಿದ ಕಾಂಗ್ರೆಸ್ ಈ ಚುನಾವಣೆಯಲ್ಲಿ ಕೇವಲ 8 ಸ್ಥಾನಗಳನ್ನು ಗೆಲ್ಲುವ ಮೂಲಕ ಹೀನಾಯ ಸೋಲು ಅನುಭವಿಸಿದೆ.<br /> <br /> ಸರ್ಕಾರ ರಚನೆಗೆ ಮನವಿ ಸಲ್ಲಿಸುವುದು ಅಥವಾ ಲೆಫ್ಟಿನೆಂಟ್ ಗೌವರ್ನರ್ ಆಹ್ವಾನಕ್ಕೆ ಕಾಯುವುದು. ಈ ಎರಡು ಆಯ್ಕೆಗಳು ಬಿಜೆಪಿಯ ಮುಂದಿದೆ.<br /> <br /> ಚುನಾವಣೆಯಲ್ಲಿ ಅತಿಹೆಚ್ಚು ಸ್ಥಾನಗಳಿಸಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಸರ್ಕಾರ ರಚನೆಗೆ ಬಿಜೆಪಿ ಆಹ್ವಾನ ನೀಡಿ, ಬಹುಮತ ಸಾಬೀತಿಗೆ ಕಾಲಮಿತಿ ನಿಗದಿಗೊಳಿಸುವ ಸಾಧ್ಯತೆ ಇದೆ.<br /> <br /> ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಪಕ್ಷದ ನೆರವು ಪಡೆಯದೇ ವಿಧಾನಸಭೆಯಲ್ಲಿ ಬಿಜೆಪಿ ಬಹುಮತ ಸಾಬೀತು ಪಡಿಸುವುದು ಅಸಾಧ್ಯವಾಗಲಿದೆ.<br /> <br /> ‘ಬಹುಮತದ ಸಂಖ್ಯೆ (36)ಗಳಿಸಲು ನಾವು ಯಾವುದೇ ರೀತಿಯ ವಾಮ ಮಾರ್ಗಗಳನ್ನು ಅನುಸರಿಸುವುದಿಲ್ಲ. ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತುಕೊಳ್ಳಲು ಆದ್ಯತೆ ನೀಡುತ್ತೇವೆ’ ಎಂದು ಬಿಜೆಪಿ ದೆಹಲಿ ಬಿಜೆಪಿ ಅಧ್ಯಕ್ಷ ವಿಜಯ ಗೊಯಲ್ ಹೇಳಿದ್ದಾರೆ.<br /> <br /> ‘ಸಹಜ ಪ್ರಕ್ರಿಯೆಗಳ ಮೂಲಕ ಬೆಂಬಲ ಸಿಕ್ಕರೆ ಸರ್ಕಾರ ರಚಿಸುತ್ತೇವೆ. ಇಲ್ಲದಿದ್ದರೆ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತುಕೊಳ್ಳುತ್ತೇವೆ’ ಎಂದು ಬಿಜೆಪಿ ದೆಹಲಿ ಉಸ್ತುವಾರಿ ನಿತನ್ ಗಡ್ಕರಿ ಅವರು ಹೇಳಿದ್ದಾರೆ.<br /> <br /> <strong>ಯಾರ ನೆರವೂ ಬಯಸುವುದಿಲ್ಲ: ಕೇಜ್ರಿವಾಲ್</strong><br /> <span style="font-size: 26px;"><strong>ನವದೆಹಲಿ (ಐಎಎನ್ಎಸ್):</strong> ‘ರಾಜಕೀಯದ ಪ್ರಾಮಾಣಿಕ ಯುಗ ಪ್ರಾರಂಭವಾಗಿದೆ’ ಎಂದು ಅರವಿಂದ ಕೇಜ್ರಿವಾಲ್ ಭಾನುವಾರ ಮಾಧ್ಯಮದವರಿಗೆ ತಿಳಿಸಿದರು.</span></p>.<p>ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಹರ್ಷವರ್ಧನ ಅವರನ್ನು ಕೇಜ್ರಿವಾಲ್ ಅಭಿನಂದಿಸಿದ್ದಾರೆ.<br /> <br /> ‘ಇದು ಪಕ್ಷದ ವಿಜಯವಲ್ಲ. ಜನತೆಯ ವಿಜಯ’ ಎಂದು ಅವರು ಬಣ್ಣಿಸಿದ್ದಾರೆ. ‘ದಾನಿಗಳಿಂದ ಪಾರದರ್ಶಕ ರೀತಿಯಲ್ಲಿ ಸಂಗ್ರಹಿಸಿದ ರೂ. 20 ಕೋಟಿ ಬಜೆಟ್ ಬಳಸಿಕೊಂಡು ಪಕ್ಷ ಚುನಾವಣೆ ಎದುರಿಸಿತು’ ಎಂದು ಕೇಜ್ರಿವಾಲ್ ನುಡಿದರು.<br /> ‘ಶೀಲಾ ದೀಕ್ಷಿತ್ ಅವರೊಂದಿಗೆ ವೈಮನಸ್ಸು ಹೊಂದಿಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.<br /> <br /> ‘ನಾವು ಯಾರ ಬೆಂಬಲವನ್ನು ನಿರೀಕ್ಷೆ ಮಾಡುವುದಿಲ್ಲ. ರಚನಾತ್ಮಕ ರೀತಿಯಲ್ಲಿ ವಿರೋಧ ಪಕ್ಷದ ಸ್ಥಾನ ನಿರ್ವಹಿಸುತ್ತೇವೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಹೊರಬಿದ್ದಿದ್ದರಿಂದ ರಾಷ್ಟ್ರದ ರಾಜಧಾನಿಯಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಅನಿಶ್ಚಿತತೆ ಎದುರಾಗಿದೆ.<br /> <br /> ಒಟ್ಟೂ 70 ಸದಸ್ಯ ಬಲದ ವಿಧಾನಸಭೆಯಲ್ಲಿ ಭಾರತೀಯ ಜನತಾ ಪಕ್ಷ 32 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ, ಸರಳ ಬಹುಮತ (36) ಅಗತ್ಯವಿರುವ ಸ್ಥಾನ ಗೆಲ್ಲಲು ಅದಕ್ಕೆ ಸಾಧ್ಯವಾಗಿಲ್ಲ.<br /> ಭ್ರಷ್ಟಾಚಾರ ವಿರೋಧ ಹೋರಾಟದ ಮೂಲಕ ಅಸ್ತಿತ್ವಕ್ಕೆ ಬಂದಿರುವ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ನಿರೀಕ್ಷೆಗೂ ಮೀರಿದ ಸಾಧನೆ ಮಾಡಿದೆ. ಒಟ್ಟು 28 ಸ್ಥಾನಗಳನ್ನು ಗೆಲ್ಲುವ ಮೂಲಕ ಎರಡನೇ ಅತಿದೊಡ್ಡ ಪಕ್ಷವಾಗಿದೆ.<br /> <br /> ದೆಹಲಿಯಲ್ಲಿ ಸತತ ಮೂರು ಬಾರಿ ಅಧಿಕಾರದ ಸವಿ ಅನುಭವಿಸಿದ ಕಾಂಗ್ರೆಸ್ ಈ ಚುನಾವಣೆಯಲ್ಲಿ ಕೇವಲ 8 ಸ್ಥಾನಗಳನ್ನು ಗೆಲ್ಲುವ ಮೂಲಕ ಹೀನಾಯ ಸೋಲು ಅನುಭವಿಸಿದೆ.<br /> <br /> ಸರ್ಕಾರ ರಚನೆಗೆ ಮನವಿ ಸಲ್ಲಿಸುವುದು ಅಥವಾ ಲೆಫ್ಟಿನೆಂಟ್ ಗೌವರ್ನರ್ ಆಹ್ವಾನಕ್ಕೆ ಕಾಯುವುದು. ಈ ಎರಡು ಆಯ್ಕೆಗಳು ಬಿಜೆಪಿಯ ಮುಂದಿದೆ.<br /> <br /> ಚುನಾವಣೆಯಲ್ಲಿ ಅತಿಹೆಚ್ಚು ಸ್ಥಾನಗಳಿಸಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಸರ್ಕಾರ ರಚನೆಗೆ ಬಿಜೆಪಿ ಆಹ್ವಾನ ನೀಡಿ, ಬಹುಮತ ಸಾಬೀತಿಗೆ ಕಾಲಮಿತಿ ನಿಗದಿಗೊಳಿಸುವ ಸಾಧ್ಯತೆ ಇದೆ.<br /> <br /> ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಪಕ್ಷದ ನೆರವು ಪಡೆಯದೇ ವಿಧಾನಸಭೆಯಲ್ಲಿ ಬಿಜೆಪಿ ಬಹುಮತ ಸಾಬೀತು ಪಡಿಸುವುದು ಅಸಾಧ್ಯವಾಗಲಿದೆ.<br /> <br /> ‘ಬಹುಮತದ ಸಂಖ್ಯೆ (36)ಗಳಿಸಲು ನಾವು ಯಾವುದೇ ರೀತಿಯ ವಾಮ ಮಾರ್ಗಗಳನ್ನು ಅನುಸರಿಸುವುದಿಲ್ಲ. ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತುಕೊಳ್ಳಲು ಆದ್ಯತೆ ನೀಡುತ್ತೇವೆ’ ಎಂದು ಬಿಜೆಪಿ ದೆಹಲಿ ಬಿಜೆಪಿ ಅಧ್ಯಕ್ಷ ವಿಜಯ ಗೊಯಲ್ ಹೇಳಿದ್ದಾರೆ.<br /> <br /> ‘ಸಹಜ ಪ್ರಕ್ರಿಯೆಗಳ ಮೂಲಕ ಬೆಂಬಲ ಸಿಕ್ಕರೆ ಸರ್ಕಾರ ರಚಿಸುತ್ತೇವೆ. ಇಲ್ಲದಿದ್ದರೆ ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತುಕೊಳ್ಳುತ್ತೇವೆ’ ಎಂದು ಬಿಜೆಪಿ ದೆಹಲಿ ಉಸ್ತುವಾರಿ ನಿತನ್ ಗಡ್ಕರಿ ಅವರು ಹೇಳಿದ್ದಾರೆ.<br /> <br /> <strong>ಯಾರ ನೆರವೂ ಬಯಸುವುದಿಲ್ಲ: ಕೇಜ್ರಿವಾಲ್</strong><br /> <span style="font-size: 26px;"><strong>ನವದೆಹಲಿ (ಐಎಎನ್ಎಸ್):</strong> ‘ರಾಜಕೀಯದ ಪ್ರಾಮಾಣಿಕ ಯುಗ ಪ್ರಾರಂಭವಾಗಿದೆ’ ಎಂದು ಅರವಿಂದ ಕೇಜ್ರಿವಾಲ್ ಭಾನುವಾರ ಮಾಧ್ಯಮದವರಿಗೆ ತಿಳಿಸಿದರು.</span></p>.<p>ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಹರ್ಷವರ್ಧನ ಅವರನ್ನು ಕೇಜ್ರಿವಾಲ್ ಅಭಿನಂದಿಸಿದ್ದಾರೆ.<br /> <br /> ‘ಇದು ಪಕ್ಷದ ವಿಜಯವಲ್ಲ. ಜನತೆಯ ವಿಜಯ’ ಎಂದು ಅವರು ಬಣ್ಣಿಸಿದ್ದಾರೆ. ‘ದಾನಿಗಳಿಂದ ಪಾರದರ್ಶಕ ರೀತಿಯಲ್ಲಿ ಸಂಗ್ರಹಿಸಿದ ರೂ. 20 ಕೋಟಿ ಬಜೆಟ್ ಬಳಸಿಕೊಂಡು ಪಕ್ಷ ಚುನಾವಣೆ ಎದುರಿಸಿತು’ ಎಂದು ಕೇಜ್ರಿವಾಲ್ ನುಡಿದರು.<br /> ‘ಶೀಲಾ ದೀಕ್ಷಿತ್ ಅವರೊಂದಿಗೆ ವೈಮನಸ್ಸು ಹೊಂದಿಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.<br /> <br /> ‘ನಾವು ಯಾರ ಬೆಂಬಲವನ್ನು ನಿರೀಕ್ಷೆ ಮಾಡುವುದಿಲ್ಲ. ರಚನಾತ್ಮಕ ರೀತಿಯಲ್ಲಿ ವಿರೋಧ ಪಕ್ಷದ ಸ್ಥಾನ ನಿರ್ವಹಿಸುತ್ತೇವೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>