<p><strong>ನವದೆಹಲಿ (ಪಿಟಿಐ): </strong>ಭಾರತ ಹಾಗೂ ಅಮೆರಿಕದ ನಡುವೆ ‘ಶೀತಲ ಸಮರ’ಕ್ಕೆ ಕಾರಣವಾಗಿರುವ ದೇವಯಾನಿ ಖೋಬ್ರಾಗಡೆಅವರನ್ನು ಬಂಧಿಸಿದ ‘ಪರಿಸ್ಥಿತಿ’ಯ ಬಗ್ಗೆ ಭಾರತದಲ್ಲಿರುವ ಅಮೆರಿಕದ ರಾಯಭಾರಿ ನ್ಯಾನ್ಸಿ ಪೊವೆಲ್ ಮಂಗಳವಾರ ವಿಷಾದ ವ್ಯಕ್ತಪಡಿಸಿದ್ದಾರೆ.</p>.<p>ಅದಕ್ಕಾಗಿ ಪೊವೆಲ್ ಅವರು ಹೊಸ ವರ್ಷದ ಸಂದೇಶ ರವಾನಿಸುವ ಅವಕಾಶವನ್ನು ಬಳಸಿಕೊಂಡಿದ್ದಾರೆ.</p>.<p>‘ಕಾನ್ಸುಲರ ಅಧಿಕಾರಿಯನ್ನು ಬಂಧಿಸಿದ ರೀತಿಗೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಜಾನ್ ಕೆರಿ ವ್ಯಕ್ತಪಡಿಸಿದ ವಿಷಾದಕ್ಕೆ ನಾನು ದನಿಗೂಡಿಸುವೆ. ಅದಾಗ್ಯೂ ನಮ್ಮ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ ಮುಂದುವರಿಯಲಿದೆ ಎಂದು ನಾವು ನಿರೀಕ್ಷಿಸಬಹುದು ಎಂದುಕೊಂಡಿದ್ದೇವೆ’ ಎಂದಿದ್ದಾರೆ.</p>.<p>ವಿವಿಧ ಕ್ಷೇತ್ರಗಳಲ್ಲಿ ಭಾರತ ಹಾಗೂ ಅಮೆರಿಕದ ನಡುವಣ ಹಲವು ‘ಪರಿಣಾಮಕಾರಿ ಅಭಿವೃದ್ಧಿಗಳ’ ಬಗ್ಗೆ ಪ್ರಸ್ತಾಪಿಸುತ್ತ ಪೊವೆಲ್, ‘ದೇವಯಾನಿ ಬಂಧನ ವಿವಾದ ಸಂಬಂಧ ಉದ್ಭವಿಸಿರುವ ಭಿನ್ನಾಭಿಪ್ರಾಯಗಳಿಂದ ಅಭಿವೃದ್ಧಿಗೆ ತೊಡಕಾಗಿದೆ’ ಎಂದು ಅಭಿಪ್ರಾಯ ಪಟ್ಟಿದ್ದಾರೆ.</p>.<p>ದೇವಯಾನಿ ಅವರೊಂದಿಗೆ ಕಟುವಾಗಿ ವರ್ತಿಸಿದ ಅಮೆರಿಕದ ಕ್ರಮಕ್ಕೆ ಪ್ರತಿಕಾರವಾಗಿ ಭಾರತ, ಪೊವೆಲ್ ಸೇರಿದಂತೆ ಇಲ್ಲಿರುವ ಅಮೆರಿಕ ರಾಯಭಾರಿಗಳಿಗೆ ನೀಡಲಾಗಿದ್ದ ವಿಶೇಷ ಸವಲತ್ತುಗಳನ್ನು ಹಿಂಪಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಭಾರತ ಹಾಗೂ ಅಮೆರಿಕದ ನಡುವೆ ‘ಶೀತಲ ಸಮರ’ಕ್ಕೆ ಕಾರಣವಾಗಿರುವ ದೇವಯಾನಿ ಖೋಬ್ರಾಗಡೆಅವರನ್ನು ಬಂಧಿಸಿದ ‘ಪರಿಸ್ಥಿತಿ’ಯ ಬಗ್ಗೆ ಭಾರತದಲ್ಲಿರುವ ಅಮೆರಿಕದ ರಾಯಭಾರಿ ನ್ಯಾನ್ಸಿ ಪೊವೆಲ್ ಮಂಗಳವಾರ ವಿಷಾದ ವ್ಯಕ್ತಪಡಿಸಿದ್ದಾರೆ.</p>.<p>ಅದಕ್ಕಾಗಿ ಪೊವೆಲ್ ಅವರು ಹೊಸ ವರ್ಷದ ಸಂದೇಶ ರವಾನಿಸುವ ಅವಕಾಶವನ್ನು ಬಳಸಿಕೊಂಡಿದ್ದಾರೆ.</p>.<p>‘ಕಾನ್ಸುಲರ ಅಧಿಕಾರಿಯನ್ನು ಬಂಧಿಸಿದ ರೀತಿಗೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಜಾನ್ ಕೆರಿ ವ್ಯಕ್ತಪಡಿಸಿದ ವಿಷಾದಕ್ಕೆ ನಾನು ದನಿಗೂಡಿಸುವೆ. ಅದಾಗ್ಯೂ ನಮ್ಮ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ ಮುಂದುವರಿಯಲಿದೆ ಎಂದು ನಾವು ನಿರೀಕ್ಷಿಸಬಹುದು ಎಂದುಕೊಂಡಿದ್ದೇವೆ’ ಎಂದಿದ್ದಾರೆ.</p>.<p>ವಿವಿಧ ಕ್ಷೇತ್ರಗಳಲ್ಲಿ ಭಾರತ ಹಾಗೂ ಅಮೆರಿಕದ ನಡುವಣ ಹಲವು ‘ಪರಿಣಾಮಕಾರಿ ಅಭಿವೃದ್ಧಿಗಳ’ ಬಗ್ಗೆ ಪ್ರಸ್ತಾಪಿಸುತ್ತ ಪೊವೆಲ್, ‘ದೇವಯಾನಿ ಬಂಧನ ವಿವಾದ ಸಂಬಂಧ ಉದ್ಭವಿಸಿರುವ ಭಿನ್ನಾಭಿಪ್ರಾಯಗಳಿಂದ ಅಭಿವೃದ್ಧಿಗೆ ತೊಡಕಾಗಿದೆ’ ಎಂದು ಅಭಿಪ್ರಾಯ ಪಟ್ಟಿದ್ದಾರೆ.</p>.<p>ದೇವಯಾನಿ ಅವರೊಂದಿಗೆ ಕಟುವಾಗಿ ವರ್ತಿಸಿದ ಅಮೆರಿಕದ ಕ್ರಮಕ್ಕೆ ಪ್ರತಿಕಾರವಾಗಿ ಭಾರತ, ಪೊವೆಲ್ ಸೇರಿದಂತೆ ಇಲ್ಲಿರುವ ಅಮೆರಿಕ ರಾಯಭಾರಿಗಳಿಗೆ ನೀಡಲಾಗಿದ್ದ ವಿಶೇಷ ಸವಲತ್ತುಗಳನ್ನು ಹಿಂಪಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>