ರಾಯಪುರ (ಪಿಟಿಐ): ಛತ್ತೀಸ್ಗಢದ ಬಸ್ತಾರ್ ಜಿಲ್ಲೆಯಲ್ಲಿ ಶುಕ್ರವಾರ ನಕ್ಸಲರು ಪೊಲೀಸರ ತಂಡದ ಮೇಲೆ ಹಠಾತ್ ದಾಳಿ ನಡೆಸಿದ್ದು ಮೂವರು ಮೃತಪಟ್ಟು ಇತರ ನಾಲ್ಕು ಮಂದಿ ಗಾಯಗೊಂಡಿದ್ದಾರೆ.
ಪೊಲೀಸ್ ತಂಡ ನಕ್ಸಲರು ಗುರುವಾರ ರಾತ್ರಿ ಅರಣ್ಯ ಇಲಾಖೆಯ ವಿಶ್ರಾಂತಿ ಗೃಹವನ್ನು ಹಾನಿಗೊಳಿಸಿದ ನೇತನಾರ್ ಗ್ರಾಮಕ್ಕೆ ತೆರಳುತ್ತಿದ್ದಾಗ ಈ ದಾಳಿ ನಡೆದಿದೆ ಎಂದು ಬಸ್ತಾರ್ನ ಪೊಲೀಸ್ ವರಿಷ್ಠಾಧಿಕಾರಿ ರತನ್ ಲಾಲ್ ಡಾಂಗೆ ತಿಳಿಸಿದ್ದಾರೆ.