ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ, ನೀರು ಹಂಚಿಕೆ ಉದ್ದೇಶದಿಂದಲೇ ಕೇಂದ್ರ ಸರ್ಕಾರ 2013ರಲ್ಲಿ ಮೇಲುಸ್ತುವಾರಿ ಸಮಿತಿ ರಚಿಸಿದೆ. ನ್ಯಾಯಮಂಡಳಿ ನೀಡಿರುವ ಐತೀರ್ಪಿನ ಬಗ್ಗೆ ಸ್ಪಷ್ಟನೆ ಕೋರಲಾಗಿದ್ದು, ಸುಪ್ರೀಂ ಕೋರ್ಟ್ನ ತೀರ್ಪಿಗಾಗಿ ಕಾಯಲಾಗುತ್ತಿದೆ ಎಂದು ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ರಂಜಿತ್ಕುಮಾರ್ ಹೇಳಿದರು.