<p>ನವದೆಹಲಿ (ಪಿಟಿಐ): 2ಜಿ ತರಂಗಾಂತರ ಹಗರಣದಲ್ಲಿ ತಮ್ಮನ್ನು ಸಿಬಿಐ ವಿಚಾರಣೆಗೊಳಪಡಿಸಲು ನಿರ್ಧರಿಸಿರುವುದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್, ತಮ್ಮ ಅವಧಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಶುಕ್ರವಾರ ಸಮರ್ಥಿಸಿಕೊಂಡಿದ್ದಾರೆ.<br /> <br /> ಜಸ್ವಂತ್ ಸಿಂಗ್ ಎನ್ಡಿಎ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದರು.<br /> <br /> `ನನ್ನ ಅವಧಿಯಲ್ಲಿ ಅಕ್ರಮ ನಡೆದಿಲ್ಲ. ಯಾರಾದರೂ ಉದ್ದೇಶಪೂರ್ವಕವಾಗಿ ಈ ಆರೋಪ ಮಾಡಿದರೆ ನನಗೆ ನೋವಾಗುತ್ತದೆ~ ಎಂದಿರುವ ಜಸ್ವಂತ್, `ವಿಚಾರಣೆಗೊಳಪಡಿಸುವ ಸಂಬಂಧ ನನಗೆ ಸಿಬಿಐನಿಂದ ಅಥವಾ ಸರ್ಕಾರದಿಂದ ಯಾವುದೇ ಮಾಹಿತಿ ಬಂದಿಲ್ಲ. ಆದರೆ ಅದು ತನ್ನ ಕರ್ತವ್ಯ ಮಾಡುತ್ತಿರುವುದು ಸಂತೋಷದ ವಿಷಯ~ ಎಂದು ಸಂಸತ್ ಭವನದ ಹೊರಗೆ ಸುದ್ದಿಗಾರರಿಗೆ ತಿಳಿಸಿದರು.<br /> <br /> `ಹಗರಣದ ತನಿಖೆಯ ಭಾಗವಾಗಿ ಜಸ್ವಂತ್ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತದೆ~ ಎಂದು ಸಿಬಿಐ ಗುರುವಾರ ಸುಪ್ರೀಂಕೋರ್ಟ್ಗೆ ತಿಳಿಸಿತ್ತು. ದಯಾನಿಧಿ ಮಾರನ್ ಹಾಗೂ ಪಿ.ಚಿದಂಬರಂ ಅವರನ್ನು ಪ್ರಶ್ನಿಸದೇ ಸಿಬಿಐ ತಾರತಮ್ಯ ಮಾಡುತ್ತಿದೆ ಎನ್ನುವ ಬಿಜೆಪಿ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ `ಪ್ರಭಾವಿ ವ್ಯಕ್ತಿಗಳನ್ನು ತಪ್ಪಿತಸ್ಥರೆಂದು ಹೇಳಲಾಗದು~ ಎನ್ನುವ `ರಾಮಚರಿತ ಮಾನಸ~ ಗ್ರಂಥದ ಸಾಲುಗಳನ್ನು ಅವರು ಉದಾಹರಿಸಿದರು.<br /> <br /> `2ಜಿ ಹಗರಣವು ಎನ್ಡಿಎ ಆಳ್ವಿಕೆಯಲ್ಲಿ ದಿ. ಪ್ರಮೋದ್ ಮಹಾಜನ್ ಹಾಗೂ ಅರುಣ್ ಶೌರಿ ಅವರು ದೂರಸಂಪರ್ಕ ಸಚಿವರಾಗಿದ್ದಾಗ ನಡೆದ ನೀತಿ ಉಲ್ಲಂಘನೆಗೆ ಸಾಕ್ಷಿಯಾಗಿದೆ. ಹಗರಣದ ತನಿಖೆಯ ಭಾಗವಾಗಿ ಆಗಿನ ಹಣಕಾಸು ಸಚಿವ ಜಸ್ವಂತ್ ಸಿಂಗ್ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತದೆ~ ಎಂದು ಸಿಬಿಐ ಸುಪ್ರೀಂಕೋರ್ಟ್ಗೆ ತಿಳಿಸಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): 2ಜಿ ತರಂಗಾಂತರ ಹಗರಣದಲ್ಲಿ ತಮ್ಮನ್ನು ಸಿಬಿಐ ವಿಚಾರಣೆಗೊಳಪಡಿಸಲು ನಿರ್ಧರಿಸಿರುವುದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್, ತಮ್ಮ ಅವಧಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಶುಕ್ರವಾರ ಸಮರ್ಥಿಸಿಕೊಂಡಿದ್ದಾರೆ.<br /> <br /> ಜಸ್ವಂತ್ ಸಿಂಗ್ ಎನ್ಡಿಎ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದರು.<br /> <br /> `ನನ್ನ ಅವಧಿಯಲ್ಲಿ ಅಕ್ರಮ ನಡೆದಿಲ್ಲ. ಯಾರಾದರೂ ಉದ್ದೇಶಪೂರ್ವಕವಾಗಿ ಈ ಆರೋಪ ಮಾಡಿದರೆ ನನಗೆ ನೋವಾಗುತ್ತದೆ~ ಎಂದಿರುವ ಜಸ್ವಂತ್, `ವಿಚಾರಣೆಗೊಳಪಡಿಸುವ ಸಂಬಂಧ ನನಗೆ ಸಿಬಿಐನಿಂದ ಅಥವಾ ಸರ್ಕಾರದಿಂದ ಯಾವುದೇ ಮಾಹಿತಿ ಬಂದಿಲ್ಲ. ಆದರೆ ಅದು ತನ್ನ ಕರ್ತವ್ಯ ಮಾಡುತ್ತಿರುವುದು ಸಂತೋಷದ ವಿಷಯ~ ಎಂದು ಸಂಸತ್ ಭವನದ ಹೊರಗೆ ಸುದ್ದಿಗಾರರಿಗೆ ತಿಳಿಸಿದರು.<br /> <br /> `ಹಗರಣದ ತನಿಖೆಯ ಭಾಗವಾಗಿ ಜಸ್ವಂತ್ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತದೆ~ ಎಂದು ಸಿಬಿಐ ಗುರುವಾರ ಸುಪ್ರೀಂಕೋರ್ಟ್ಗೆ ತಿಳಿಸಿತ್ತು. ದಯಾನಿಧಿ ಮಾರನ್ ಹಾಗೂ ಪಿ.ಚಿದಂಬರಂ ಅವರನ್ನು ಪ್ರಶ್ನಿಸದೇ ಸಿಬಿಐ ತಾರತಮ್ಯ ಮಾಡುತ್ತಿದೆ ಎನ್ನುವ ಬಿಜೆಪಿ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ `ಪ್ರಭಾವಿ ವ್ಯಕ್ತಿಗಳನ್ನು ತಪ್ಪಿತಸ್ಥರೆಂದು ಹೇಳಲಾಗದು~ ಎನ್ನುವ `ರಾಮಚರಿತ ಮಾನಸ~ ಗ್ರಂಥದ ಸಾಲುಗಳನ್ನು ಅವರು ಉದಾಹರಿಸಿದರು.<br /> <br /> `2ಜಿ ಹಗರಣವು ಎನ್ಡಿಎ ಆಳ್ವಿಕೆಯಲ್ಲಿ ದಿ. ಪ್ರಮೋದ್ ಮಹಾಜನ್ ಹಾಗೂ ಅರುಣ್ ಶೌರಿ ಅವರು ದೂರಸಂಪರ್ಕ ಸಚಿವರಾಗಿದ್ದಾಗ ನಡೆದ ನೀತಿ ಉಲ್ಲಂಘನೆಗೆ ಸಾಕ್ಷಿಯಾಗಿದೆ. ಹಗರಣದ ತನಿಖೆಯ ಭಾಗವಾಗಿ ಆಗಿನ ಹಣಕಾಸು ಸಚಿವ ಜಸ್ವಂತ್ ಸಿಂಗ್ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತದೆ~ ಎಂದು ಸಿಬಿಐ ಸುಪ್ರೀಂಕೋರ್ಟ್ಗೆ ತಿಳಿಸಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>