<p><strong>ಜೈಪುರ:</strong> ನವಿಲು ಬ್ರಹ್ಮಚಾರಿ, ಅದು ಹೆಣ್ಣು ನವಿಲಿನೊಂದಿಗೆ ಲೈಂಗಿಕ ಸಂಪರ್ಕ ನಡೆಸುವುದಿಲ್ಲ. ಹೆಣ್ಣು ನವಿಲು ಗಂಡು ನವಿಲಿನ ಕಣ್ಣೀರು ಕುಡಿದು ಬಸಿರಾಗುತ್ತವೆ. ಶ್ರೀಕೃಷ್ಣ ಪರಮಾತ್ಮನೂ ನವಿಲುಗರಿಯನ್ನು ಕಿರೀಟದಲ್ಲಿ ಧರಿಸಿದ್ದಾನೆ- ಹೀಗೆ ಹೇಳಿದ್ದು ರಾಜಸ್ತಾನ ಹೈಕೋರ್ಟ್ ನ್ಯಾಯಾಧೀಶರು!</p>.<p>ಹಸುವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದ ರಾಜಸ್ತಾನ ಹೈಕೋರ್ಟ್ ನ್ಯಾಯಾಧೀಶ ಮಹೇಶ್ ಚಂದ್ರ ಶರ್ಮಾ ಅವರು ಸಿಎನ್ಎನ್- ನ್ಯೂಸ್ 18 ಸುದ್ದಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ನವಿಲನ್ನು ರಾಷ್ಟ್ರ ಪಕ್ಷಿಯನ್ನಾಗಿ ಘೋಷಿಸಿದ್ದು ಯಾಕೆ ಎಂಬುದರ ಬಗ್ಗೆ ಈ ರೀತಿಯ ವಿವರಣೆಯನ್ನು ನೀಡಿದ್ದಾರೆ.</p>.<p>ಹಸುವನ್ನು ಭಾರತದ ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಬೇಕು. ಗೋಹತ್ಯೆ ಮಾಡಿದವರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಬೇಕು ಎಂದು ರಾಜಸ್ತಾನ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ ಬೆನ್ನಲ್ಲೇ ಶರ್ಮಾ ಅವರು ನವಿಲು ಬ್ರಹ್ಮಚಾರಿ ಎಂಬ ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.</p>.<p>ನೇಪಾಳ ಹಸುವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿದೆ. ಅದೇ ರೀತಿ ಭಾರತದಲ್ಲಿಯೂ ಹಸುವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಬೇಕು ಎಂದು ಶರ್ಮಾ ಹೇಳಿದ್ದಾರೆ.</p>.<p>[related]</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ನವಿಲು ಬ್ರಹ್ಮಚಾರಿ, ಅದು ಹೆಣ್ಣು ನವಿಲಿನೊಂದಿಗೆ ಲೈಂಗಿಕ ಸಂಪರ್ಕ ನಡೆಸುವುದಿಲ್ಲ. ಹೆಣ್ಣು ನವಿಲು ಗಂಡು ನವಿಲಿನ ಕಣ್ಣೀರು ಕುಡಿದು ಬಸಿರಾಗುತ್ತವೆ. ಶ್ರೀಕೃಷ್ಣ ಪರಮಾತ್ಮನೂ ನವಿಲುಗರಿಯನ್ನು ಕಿರೀಟದಲ್ಲಿ ಧರಿಸಿದ್ದಾನೆ- ಹೀಗೆ ಹೇಳಿದ್ದು ರಾಜಸ್ತಾನ ಹೈಕೋರ್ಟ್ ನ್ಯಾಯಾಧೀಶರು!</p>.<p>ಹಸುವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದ ರಾಜಸ್ತಾನ ಹೈಕೋರ್ಟ್ ನ್ಯಾಯಾಧೀಶ ಮಹೇಶ್ ಚಂದ್ರ ಶರ್ಮಾ ಅವರು ಸಿಎನ್ಎನ್- ನ್ಯೂಸ್ 18 ಸುದ್ದಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ನವಿಲನ್ನು ರಾಷ್ಟ್ರ ಪಕ್ಷಿಯನ್ನಾಗಿ ಘೋಷಿಸಿದ್ದು ಯಾಕೆ ಎಂಬುದರ ಬಗ್ಗೆ ಈ ರೀತಿಯ ವಿವರಣೆಯನ್ನು ನೀಡಿದ್ದಾರೆ.</p>.<p>ಹಸುವನ್ನು ಭಾರತದ ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಬೇಕು. ಗೋಹತ್ಯೆ ಮಾಡಿದವರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಬೇಕು ಎಂದು ರಾಜಸ್ತಾನ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ ಬೆನ್ನಲ್ಲೇ ಶರ್ಮಾ ಅವರು ನವಿಲು ಬ್ರಹ್ಮಚಾರಿ ಎಂಬ ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.</p>.<p>ನೇಪಾಳ ಹಸುವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿದೆ. ಅದೇ ರೀತಿ ಭಾರತದಲ್ಲಿಯೂ ಹಸುವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಬೇಕು ಎಂದು ಶರ್ಮಾ ಹೇಳಿದ್ದಾರೆ.</p>.<p>[related]</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>