ನವದೆಹಲಿ (ಪಿಟಿಐ): ವಿದೇಶಿ ಬ್ಯಾಂಕುಗಳಲ್ಲಿ ಖಾತೆ ಹೊಂದಿದವರ ಇಡೀ ಪಟ್ಟಿಯನ್ನು ಸರ್ಕಾರವು ಬುಧವಾರ ಸುಪ್ರೀಂಕೋರ್ಟ್ಗೆ ಸಲ್ಲಿಸಲಿದೆ ಎಂದು ತಿಳಿಸಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಯಾರನ್ನೂ ರಕ್ಷಿಸುತ್ತಿಲ್ಲ ಎಂದು ಒತ್ತಿ ಹೇಳಿದ್ದಾರೆ.
‘ಖಾತೆದಾರರ ಪಟ್ಟಿಯನ್ನು ಸರ್ಕಾರವು ನ್ಯಾಯಾಲಯಕ್ಕೆ ಸಲ್ಲಿಸಲಿದೆ. ಸುಪ್ರೀಂ ಕೋರ್ಟ್ ರಚಿಸಿರುವ ವಿಶೇಷ ತನಿಖಾ ತಂಡಕ್ಕೆ ಸರ್ಕಾರ ಈಗಾಗಲೇ ಪಟ್ಟಿಯನ್ನು ನೀಡಿದೆ (ಜೂನ್ 27)’ ಎಂದು ಜೇಟ್ಲಿ ಪ್ರತಿಕ್ರಿಯಿಸಿದ್ದಾರೆ.
‘ಸಂಪೂರ್ಣ ಪಟ್ಟಿಯನ್ನು ಸಲ್ಲಿಸಲು ಸರ್ಕಾರಕ್ಕೆ ತೊಂದರೆ ಇಲ್ಲ’ ಎಂದೂ ಅವರು ತಿಳಿಸಿದ್ದಾರೆ.