ಜಮ್ಮು ಮತ್ತು ಕಾಶ್ಮೀರದ ಕದನ ವಿರಾಮ ದಾಳಿಗೆ ಪ್ರತಿಕ್ರಿಯಿಸಿರುವ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ‘ರಂಜಾನ್ ಮಾಸದ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಕದನ ವಿರಾಮವನ್ನು ಭಾರತ ಗೌರವಿಸುತ್ತದೆ. ಆದರೆ ಪಾಕ್ನ ಅಪ್ರಚೋದಿತ ಗುಂಡಿನ ದಾಳಿಯು ಗಡಿ ಕಾಯುವ ಯೋಧರನ್ನು ಕೆರಳಿಸುವಂತಿದೆ. ಪಾಕಿಸ್ತಾನ ಇದೇ ಚಾಳಿಯನ್ನು ಮುಂದುವರಿಸಿದರೆ ನಾವು ಸುಮ್ಮನಿರುವುದಿಲ್ಲ. ದೇಶವನ್ನು ರಕ್ಷಿಸುವುದು ನಮ್ಮ ಕರ್ತವ್ಯ’ ಎಂದು ಪ್ರತಿಕ್ರಿಯಿಸಿದ್ದಾರೆ.