<p>ಉತ್ತರಾಖಂಡದಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದ ನಲುಗಿರುವ ಸಂತ್ರಸ್ತರಿಗೆ ವಿವಿಧ ರಾಜ್ಯಗಳು ಹಾಗೂ ಪ್ರಮುಖ ವ್ಯಕ್ತಿಗಳು, ಸಂಸ್ಥೆಗಳು ನೆರವಿನ ಹಸ್ತ ಚಾಚುತ್ತಿದ್ದು, ನೆರವಿನ ಮಹಾಪೂರವೇ ಹರಿದು ಬರುತ್ತಿದೆ.</p>.<p><strong>ವಿಶೇಷ ಪ್ಯಾಕೇಜ್<br /> ನವದೆಹಲಿ(ಪಿಟಿಐ): </strong>ಪ್ರವಾಹದಿಂದ ತತ್ತರಿಸಿರುವ ಉತ್ತರಾಖಂಡಕ್ಕೆ ಗ್ರಾಮೀಣ ಅಭಿವೃದ್ಧಿ ಸಚಿವ ಜಯರಾಂ ರಮೇಶ್ ರೂ 340 ಕೋಟಿಯ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ.<br /> <br /> ವಿಶೇಷ ಪ್ಯಾಕೇಜ್ನಲ್ಲಿ ಮನೆಗಳ ನಿರ್ಮಾಣ, 82 ರಸ್ತೆ, 27 ಸೇತುವೆ ಸೇರಿದಂತೆ 664 ಕಿ.ಮೀ. ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ವಿವರಿಸಿದ್ದಾರೆ.<br /> <br /> <strong>ಮಹಿಂದ್ರಾದಿಂದ ರೂ 1 ಕೋಟಿ<br /> ನವದೆಹಲಿ(ಪಿಟಿಐ): </strong>ಉತ್ತರಾಖಂಡದಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದ ನಲುಗಿರುವ ಸಂತ್ರಸ್ತರ ನೆರವಿಗೆ ಮುಂದಾಗಿರುವ ಮಹಿಂದ್ರಾ ಹಾಗೂ ಮಹಿಂದ್ರಾ ಸಮೂಹ ಸಂಸ್ಥೆ ಉತ್ತರಾಖಂಡ ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂ 1 ಕೋಟಿ ನೆರವಿನ ಹಸ್ತ ಚಾಚಿದೆ.<br /> <br /> `ಪ್ರವಾಹ ಸ್ಥಿತಿ ನಮಗೆ ಆಘಾತ ಉಂಟು ಮಾಡಿದೆ' ಎಂದು ಮಹಿಂದ್ರಾ ಸಮೂಹ ಸಂಸ್ಥೆಯ ಮುಖ್ಯಸ್ಥ ಆನಂದ ಮಹೀಂದ್ರ ಅವರು ಇದೇ ಸಂದರ್ಭದಲ್ಲಿ ವಿಷಾದ ವ್ಯಕ್ತಪಡಿಸಿದ್ದಾರೆ.<br /> <br /> <strong>ರೂ 5 ಕೋಟಿ ಘೋಷಣೆ<br /> ಭುವನೇಶ್ವರ(ಪಿಟಿಐ): </strong>ಒಡಿಶಾದ 100ಕ್ಕೂ ಹೆಚ್ಚು ಜನ ಉತ್ತರಾಖಂಡನ ವಿವಿಧ ಸ್ಥಳಗಳಲ್ಲಿ ಪ್ರವಾಹದ ಸಂಕಷ್ಟಕ್ಕೆ ಸಿಲುಕಿದ್ದು, ಅವರ ಹಾಗೂ ಪ್ರವಾಹದಲ್ಲಿ ಸಂತ್ರಸ್ತರ ನೆರವಿಗೆ ಮುಂದಾಗಿರುವ ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯ್ಕ ರೂ 5 ಕೋಟಿ ನೆರವು ಘೋಷಣೆ ಮಾಡಿದ್ದಾರೆ.<br /> <br /> <strong>ಬಿಜೆಪಿಯಿಂದ ನಿಧಿ ಸಂಗ್ರಹ<br /> ಲಕ್ನೋ(ಪಿಟಿಐ): </strong>ಉತ್ತರ ಪ್ರದೇಶದ ಬಿಜೆಪಿ ಉತ್ತರಾಖಂಡ್ನ ಸಂತ್ರಸ್ತರ ನೆರವಿಗೆ ನಿಧಿ ಸಂಗ್ರಹಿಸಲು ಮುಂದಾಗಿದ್ದು, ಶಾಸಕರು ತಮ್ಮ ಒಂದು ತಿಂಗಳ ವೇತನ ನೀಡುವುದಾಗಿ ಘೋಷಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉತ್ತರಾಖಂಡದಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದ ನಲುಗಿರುವ ಸಂತ್ರಸ್ತರಿಗೆ ವಿವಿಧ ರಾಜ್ಯಗಳು ಹಾಗೂ ಪ್ರಮುಖ ವ್ಯಕ್ತಿಗಳು, ಸಂಸ್ಥೆಗಳು ನೆರವಿನ ಹಸ್ತ ಚಾಚುತ್ತಿದ್ದು, ನೆರವಿನ ಮಹಾಪೂರವೇ ಹರಿದು ಬರುತ್ತಿದೆ.</p>.<p><strong>ವಿಶೇಷ ಪ್ಯಾಕೇಜ್<br /> ನವದೆಹಲಿ(ಪಿಟಿಐ): </strong>ಪ್ರವಾಹದಿಂದ ತತ್ತರಿಸಿರುವ ಉತ್ತರಾಖಂಡಕ್ಕೆ ಗ್ರಾಮೀಣ ಅಭಿವೃದ್ಧಿ ಸಚಿವ ಜಯರಾಂ ರಮೇಶ್ ರೂ 340 ಕೋಟಿಯ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ.<br /> <br /> ವಿಶೇಷ ಪ್ಯಾಕೇಜ್ನಲ್ಲಿ ಮನೆಗಳ ನಿರ್ಮಾಣ, 82 ರಸ್ತೆ, 27 ಸೇತುವೆ ಸೇರಿದಂತೆ 664 ಕಿ.ಮೀ. ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ವಿವರಿಸಿದ್ದಾರೆ.<br /> <br /> <strong>ಮಹಿಂದ್ರಾದಿಂದ ರೂ 1 ಕೋಟಿ<br /> ನವದೆಹಲಿ(ಪಿಟಿಐ): </strong>ಉತ್ತರಾಖಂಡದಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದ ನಲುಗಿರುವ ಸಂತ್ರಸ್ತರ ನೆರವಿಗೆ ಮುಂದಾಗಿರುವ ಮಹಿಂದ್ರಾ ಹಾಗೂ ಮಹಿಂದ್ರಾ ಸಮೂಹ ಸಂಸ್ಥೆ ಉತ್ತರಾಖಂಡ ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂ 1 ಕೋಟಿ ನೆರವಿನ ಹಸ್ತ ಚಾಚಿದೆ.<br /> <br /> `ಪ್ರವಾಹ ಸ್ಥಿತಿ ನಮಗೆ ಆಘಾತ ಉಂಟು ಮಾಡಿದೆ' ಎಂದು ಮಹಿಂದ್ರಾ ಸಮೂಹ ಸಂಸ್ಥೆಯ ಮುಖ್ಯಸ್ಥ ಆನಂದ ಮಹೀಂದ್ರ ಅವರು ಇದೇ ಸಂದರ್ಭದಲ್ಲಿ ವಿಷಾದ ವ್ಯಕ್ತಪಡಿಸಿದ್ದಾರೆ.<br /> <br /> <strong>ರೂ 5 ಕೋಟಿ ಘೋಷಣೆ<br /> ಭುವನೇಶ್ವರ(ಪಿಟಿಐ): </strong>ಒಡಿಶಾದ 100ಕ್ಕೂ ಹೆಚ್ಚು ಜನ ಉತ್ತರಾಖಂಡನ ವಿವಿಧ ಸ್ಥಳಗಳಲ್ಲಿ ಪ್ರವಾಹದ ಸಂಕಷ್ಟಕ್ಕೆ ಸಿಲುಕಿದ್ದು, ಅವರ ಹಾಗೂ ಪ್ರವಾಹದಲ್ಲಿ ಸಂತ್ರಸ್ತರ ನೆರವಿಗೆ ಮುಂದಾಗಿರುವ ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯ್ಕ ರೂ 5 ಕೋಟಿ ನೆರವು ಘೋಷಣೆ ಮಾಡಿದ್ದಾರೆ.<br /> <br /> <strong>ಬಿಜೆಪಿಯಿಂದ ನಿಧಿ ಸಂಗ್ರಹ<br /> ಲಕ್ನೋ(ಪಿಟಿಐ): </strong>ಉತ್ತರ ಪ್ರದೇಶದ ಬಿಜೆಪಿ ಉತ್ತರಾಖಂಡ್ನ ಸಂತ್ರಸ್ತರ ನೆರವಿಗೆ ನಿಧಿ ಸಂಗ್ರಹಿಸಲು ಮುಂದಾಗಿದ್ದು, ಶಾಸಕರು ತಮ್ಮ ಒಂದು ತಿಂಗಳ ವೇತನ ನೀಡುವುದಾಗಿ ಘೋಷಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>