ನವದೆಹಲಿ (ಪಿಟಿಐ): ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಮುಸ್ಲಿಂ ಸಮುದಾಯದ ವಿರೋಧಿಯಾಗಿರಲಿಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವರು ಮಂಗಳವಾರ ಹೇಳಿದ್ದಾರೆ.
ಈ ಕುರಿತಂತೆ ತಮ್ಮ ಬ್ಲಾಗ್ನಲ್ಲಿ ಬರೆದುಕೊಂಡಿರುವ ಅಡ್ವಾಣಿ ಅವರು ಅದಕ್ಕೆ ಪೂರಕವಾಗಿ ಪಟೇಲ್ ಅವರನ್ನು ಕುರಿತಂತೆ ಸಂಶೋಧನೆ ನಡೆಸಿರುವ ಇಸ್ಲಾಮಿಕ್ ವಿದ್ವಾಂಸ ಮತ್ತು ಕಾಂಗ್ರೆಸ್, ಮುಖಂಡ ರಫೀಕ್ ಜಕಾರಿಯಾ ಅವರ ಮಾತುಗಳನ್ನು ಉಲ್ಲೇಖಿಸಿದ್ದಾರೆ.