<p>ತಿರುವನಂತಪುರ (ಪಿಟಿಐ): ಇಲ್ಲಿನ ಪದ್ಮನಾಭಸ್ವಾಮಿ ದೇವಸ್ಥಾನದ ರಹಸ್ಯ ನೆಲಮಾಳಿಗೆಗಳಲ್ಲಿ ಶೋಧಿಸಲಾಗಿರುವ ಅಷ್ಟೈಶ್ವರ್ಯ ಸಾರ್ವಜನಿಕರ ಸ್ವತ್ತು ಎಂಬ ಸಿಪಿಎಂ ಅಭಿಪ್ರಾಯಕ್ಕೆ ರಾಜ್ಯದ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.<br /> <br /> `ಈ ಸಂಪತ್ತು ದೇವಸ್ಥಾನಕ್ಕೇ ಸೇರಿದ್ದು ಎನ್ನುವುದು ನನ್ನ ಅಭಿಪ್ರಾಯ~ ಎಂದು ಮುಖ್ಯಮಂತ್ರಿ ಉಮ್ಮನ್ ಚಾಂಡಿ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.<br /> <br /> ದೇವಸ್ಥಾನದ ವ್ಯವಹಾರಗಳನ್ನು ತಿರುವಾಂಕೂರು ರಾಜಮನೆತನದ ಸುಪರ್ದಿಯಿಂದ ಮುಕ್ತಗೊಳಿಸಿ ಗುರುವಾಯೂರು ದೇವಸ್ಥಾನ ನಿರ್ವಹಣಾ ಸಮಿತಿಯಂಥ ಮಂಡಳಿಯನ್ನು ರಚಿಸಿ ಅದಕ್ಕೆ ಒಪ್ಪಿಸಬೇಕು ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ವಿಜಯನ್ ಅವರು ನೀಡಿದ್ದ ಸಲಹೆಯನ್ನೂ ಅವರು ತಿರಸ್ಕರಿಸಿದ್ದಾರೆ. <br /> <br /> ಅದೇನೆ ಇರಲಿ, ಈ ಎಲ್ಲ ವಿಷಯಗಳಲ್ಲಿಯೂ ಸುಪ್ರೀಂಕೋರ್ಟ್ ನಿರ್ಧಾರವೇ ಅಂತಿಮ ಎಂದು ಚಾಂಡಿ ಸ್ಪಷ್ಟಪಡಿಸಿದ್ದಾರೆ.<br /> <br /> ಕೇರಳದ ಕೆಲವು ಹಿಂದೂ ಸಂಘಟನೆಗಳು ಸಹ ಸಿಪಿಎಂ ಹೇಳಿಕೆಯನ್ನು ಖಂಡಿಸಿವೆ. `ದೇವಸ್ಥಾನದ ಸಂಪತ್ತು ದೇವಸ್ಥಾನಕ್ಕೇ ಸೇರಿದ್ದು. ವಿಜಯನ್ ಅವರ ಹೇಳಿಕೆಯಿಂದ ಭಕ್ತರ ನಂಬಿಕೆಗೆ ಅಗೌರವ ತೋರಿಸಿದಂತೆ ಆಗಿದೆ~ ಎಂದು ಮುಖಂಡ ಕುಮ್ಮನಂ ರಾಜಶೇಖರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿರುವನಂತಪುರ (ಪಿಟಿಐ): ಇಲ್ಲಿನ ಪದ್ಮನಾಭಸ್ವಾಮಿ ದೇವಸ್ಥಾನದ ರಹಸ್ಯ ನೆಲಮಾಳಿಗೆಗಳಲ್ಲಿ ಶೋಧಿಸಲಾಗಿರುವ ಅಷ್ಟೈಶ್ವರ್ಯ ಸಾರ್ವಜನಿಕರ ಸ್ವತ್ತು ಎಂಬ ಸಿಪಿಎಂ ಅಭಿಪ್ರಾಯಕ್ಕೆ ರಾಜ್ಯದ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.<br /> <br /> `ಈ ಸಂಪತ್ತು ದೇವಸ್ಥಾನಕ್ಕೇ ಸೇರಿದ್ದು ಎನ್ನುವುದು ನನ್ನ ಅಭಿಪ್ರಾಯ~ ಎಂದು ಮುಖ್ಯಮಂತ್ರಿ ಉಮ್ಮನ್ ಚಾಂಡಿ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.<br /> <br /> ದೇವಸ್ಥಾನದ ವ್ಯವಹಾರಗಳನ್ನು ತಿರುವಾಂಕೂರು ರಾಜಮನೆತನದ ಸುಪರ್ದಿಯಿಂದ ಮುಕ್ತಗೊಳಿಸಿ ಗುರುವಾಯೂರು ದೇವಸ್ಥಾನ ನಿರ್ವಹಣಾ ಸಮಿತಿಯಂಥ ಮಂಡಳಿಯನ್ನು ರಚಿಸಿ ಅದಕ್ಕೆ ಒಪ್ಪಿಸಬೇಕು ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ವಿಜಯನ್ ಅವರು ನೀಡಿದ್ದ ಸಲಹೆಯನ್ನೂ ಅವರು ತಿರಸ್ಕರಿಸಿದ್ದಾರೆ. <br /> <br /> ಅದೇನೆ ಇರಲಿ, ಈ ಎಲ್ಲ ವಿಷಯಗಳಲ್ಲಿಯೂ ಸುಪ್ರೀಂಕೋರ್ಟ್ ನಿರ್ಧಾರವೇ ಅಂತಿಮ ಎಂದು ಚಾಂಡಿ ಸ್ಪಷ್ಟಪಡಿಸಿದ್ದಾರೆ.<br /> <br /> ಕೇರಳದ ಕೆಲವು ಹಿಂದೂ ಸಂಘಟನೆಗಳು ಸಹ ಸಿಪಿಎಂ ಹೇಳಿಕೆಯನ್ನು ಖಂಡಿಸಿವೆ. `ದೇವಸ್ಥಾನದ ಸಂಪತ್ತು ದೇವಸ್ಥಾನಕ್ಕೇ ಸೇರಿದ್ದು. ವಿಜಯನ್ ಅವರ ಹೇಳಿಕೆಯಿಂದ ಭಕ್ತರ ನಂಬಿಕೆಗೆ ಅಗೌರವ ತೋರಿಸಿದಂತೆ ಆಗಿದೆ~ ಎಂದು ಮುಖಂಡ ಕುಮ್ಮನಂ ರಾಜಶೇಖರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>