ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ‘ಪದ್ಮಾವತಿ’ ಚಿತ್ರದಲ್ಲಿ ಪದ್ಮಿನಿ ಮತ್ತು ಅಲ್ಲಾವುದ್ದೀನ್ ಖಿಲ್ಜಿ ನಡುವೆ ಪ್ರಣಯವಿದ್ದಂತೆ ಚಿತ್ರಿಸಲಾಗಿದೆ ಎಂದು ಪ್ರತಿಭಟನೆ ನಡೆಸಲಾಗುತ್ತಿದೆ. ರಾಣಿ ಪದ್ಮಾವತಿ ತನ್ನ ಸತಿತ್ವ ಕಾಪಾಡುವುದು ಹಾಗೂ ಮೊಘಲರಿಗೆ ಶರಣಾಗುವುದರ ಬದಲಾಗಿ ಅಗ್ನಿ ಪ್ರವೇಶ ಮಾಡಿ, ತನ್ನನ್ನು ತಾನೇ ಸುಟ್ಟುಕೊಂಡಿದ್ದರು ಎಂಬ ಇತಿಹಾಸದಲ್ಲಿ ಅನೇಕರ ನಂಬಿಕೆ ಇದೆ.