<p>ನವದೆಹಲಿ: ಕರ್ನಾಟಕದ ಮೇದಾರ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್ಟಿ)ಕ್ಕೆ ಸೇರಿಸುವ ಮಹತ್ವದ ನಿರ್ಣಯವನ್ನು ಕೇಂದ್ರ ಸಚಿವ ಸಂಪುಟ ಕೈಗೊಂಡಿದೆ.<br /> <br /> ಈ ಸಮುದಾಯದ ದಶಕಗಳ ಬೇಡಿಕೆಯನ್ನು ದೀಪಾವಳಿ ಕೊಡುಗೆಯಾಗಿ ಈಡೇರಿಸಿದ್ದು, ಇನ್ನು ಮುಂದೆ ಮೇದಾರ ಸಮುದಾಯದವರು ಎಸ್ಟಿ ಸೌಲಭ್ಯ ಪಡೆಯಲು ಅರ್ಹರಾಗಿದ್ದಾರೆ. ಈ ಸಂಬಂಧದ ಮಸೂದೆಯನ್ನು ಸಂಸತ್ನಲ್ಲಿ ಮಂಡನೆ ಮಾಡಲಾಗುವುದು ಎಂದು ವಾರ್ತಾ ಮತ್ತು ಪ್ರಚಾರ ಖಾತೆ ಸಚಿವೆ ಅಂಬಿಕಾ ಸೋನಿ ತಿಳಿಸಿದ್ದಾರೆ.<br /> <br /> ಸಂಪುಟದ ಈ ನಿರ್ಧಾರದಿಂದಾಗಿ ಕರ್ನಾಟಕದಲ್ಲಿರುವ ಸುಮಾರು ಎರಡು ಲಕ್ಷ ಮಂದಿ ಮೇದಾರರು ಸಂವಿಧಾನದ ಪ್ರಕಾರ ಪರಿಶಿಷ್ಟ ಪಂಗಡದವರು ಪಡೆಯುವ ಸೌಲಭ್ಯಕ್ಕೆ ಅರ್ಹರಾಗಿದ್ದಾರೆ. ಜತೆಗೆ ಅವರಿಗೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ.<br /> <br /> ಕೇಂದ್ರ ಸರ್ಕಾರ ಮೇದಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸೌಲಭ್ಯ ಕಲ್ಪಿಸಿ, ಅಗತ್ಯ ಮಸೂದೆಯನ್ನು ಸಂಸತ್ನಲ್ಲಿ ಅಂಗೀಕರಿಸಿದರೂ ಸಹ, ಆ ಸಮುದಾಯದಕ್ಕೆ ಪರಿಶಿಷ್ಟ ಪಂಗಡ ಸೌಲಭ್ಯ ನೀಡುವ ಹೊಣೆ ಮಾತ್ರ ರಾಜ್ಯ ಸರ್ಕಾರದ್ದಾಗಿದೆ ಎಂದೂ ಅಂಬಿಕಾ ಸೋನಿ ತಿಳಿಸಿದರು.<br /> <br /> ಕೃತಜ್ಞತೆ: ಪರಿಶಿಷ್ಟ ಪಂಗಡಕ್ಕೆ ಮೇದಾರರನ್ನು ಸೇರ್ಪಡೆ ಮಾಡಲು ಕೇಂದ್ರ ಸಚಿವ ಸಂಪುಟ ಕೈಗೊಂಡ ನಿರ್ಧಾರವನ್ನು ಮಾಜಿ ಶಾಸಕ ಹಾಗೂ ಕರ್ನಾಟಕ ಆದಿವಾಸಿ ರಕ್ಷಣಾ ಸಮಿತಿ ಅಧ್ಯಕ್ಷ ಎಚ್.ಡಿ.ಬಸವರಾಜ್ ಅವರು ಸ್ವಾಗತಿಸಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಕರ್ನಾಟಕದ ಮೇದಾರ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್ಟಿ)ಕ್ಕೆ ಸೇರಿಸುವ ಮಹತ್ವದ ನಿರ್ಣಯವನ್ನು ಕೇಂದ್ರ ಸಚಿವ ಸಂಪುಟ ಕೈಗೊಂಡಿದೆ.<br /> <br /> ಈ ಸಮುದಾಯದ ದಶಕಗಳ ಬೇಡಿಕೆಯನ್ನು ದೀಪಾವಳಿ ಕೊಡುಗೆಯಾಗಿ ಈಡೇರಿಸಿದ್ದು, ಇನ್ನು ಮುಂದೆ ಮೇದಾರ ಸಮುದಾಯದವರು ಎಸ್ಟಿ ಸೌಲಭ್ಯ ಪಡೆಯಲು ಅರ್ಹರಾಗಿದ್ದಾರೆ. ಈ ಸಂಬಂಧದ ಮಸೂದೆಯನ್ನು ಸಂಸತ್ನಲ್ಲಿ ಮಂಡನೆ ಮಾಡಲಾಗುವುದು ಎಂದು ವಾರ್ತಾ ಮತ್ತು ಪ್ರಚಾರ ಖಾತೆ ಸಚಿವೆ ಅಂಬಿಕಾ ಸೋನಿ ತಿಳಿಸಿದ್ದಾರೆ.<br /> <br /> ಸಂಪುಟದ ಈ ನಿರ್ಧಾರದಿಂದಾಗಿ ಕರ್ನಾಟಕದಲ್ಲಿರುವ ಸುಮಾರು ಎರಡು ಲಕ್ಷ ಮಂದಿ ಮೇದಾರರು ಸಂವಿಧಾನದ ಪ್ರಕಾರ ಪರಿಶಿಷ್ಟ ಪಂಗಡದವರು ಪಡೆಯುವ ಸೌಲಭ್ಯಕ್ಕೆ ಅರ್ಹರಾಗಿದ್ದಾರೆ. ಜತೆಗೆ ಅವರಿಗೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ.<br /> <br /> ಕೇಂದ್ರ ಸರ್ಕಾರ ಮೇದಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸೌಲಭ್ಯ ಕಲ್ಪಿಸಿ, ಅಗತ್ಯ ಮಸೂದೆಯನ್ನು ಸಂಸತ್ನಲ್ಲಿ ಅಂಗೀಕರಿಸಿದರೂ ಸಹ, ಆ ಸಮುದಾಯದಕ್ಕೆ ಪರಿಶಿಷ್ಟ ಪಂಗಡ ಸೌಲಭ್ಯ ನೀಡುವ ಹೊಣೆ ಮಾತ್ರ ರಾಜ್ಯ ಸರ್ಕಾರದ್ದಾಗಿದೆ ಎಂದೂ ಅಂಬಿಕಾ ಸೋನಿ ತಿಳಿಸಿದರು.<br /> <br /> ಕೃತಜ್ಞತೆ: ಪರಿಶಿಷ್ಟ ಪಂಗಡಕ್ಕೆ ಮೇದಾರರನ್ನು ಸೇರ್ಪಡೆ ಮಾಡಲು ಕೇಂದ್ರ ಸಚಿವ ಸಂಪುಟ ಕೈಗೊಂಡ ನಿರ್ಧಾರವನ್ನು ಮಾಜಿ ಶಾಸಕ ಹಾಗೂ ಕರ್ನಾಟಕ ಆದಿವಾಸಿ ರಕ್ಷಣಾ ಸಮಿತಿ ಅಧ್ಯಕ್ಷ ಎಚ್.ಡಿ.ಬಸವರಾಜ್ ಅವರು ಸ್ವಾಗತಿಸಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>