<p>ನವದೆಹಲಿ (ಪಿಟಿಐ): ನ್ಯಾಯೋಚಿತ ಹಾಗೂ ತೃಪ್ತಿಕರ ಪರಿಹಾರ ಒದಗಿಸುವ ಮತ್ತು ಅಭಿವೃದ್ಧಿ ಉದ್ದೇಶಗಳಿಗಾಗಿ ಯಾವುದೇ ಪ್ರದೇಶದಲ್ಲಿ ಭೂಸ್ವಾಧೀನಕ್ಕೆ ಆ ಪ್ರದೇಶದ ಶೇಕಡಾ 80 ಜನರ ಒಪ್ಪಿಗೆಯನ್ನು ಕಡ್ಡಾಯಗೊಳಿಸುವ ಮಸೂದೆಯನ್ನು ಸರ್ಕಾರವು ಬುಧವಾರ ಲೋಕಸಭೆಯಲ್ಲಿ ಮಂಡಿಸಿದೆ.<br /> <br /> ದೀರ್ಘಕಾಲದಿಂದ ನಿರೀಕ್ಷಿಸಲಾಗಿದ್ದ ಭೂಸ್ವಾಧೀನ, ಪುನಃಶ್ಚೈತನ್ಯ ಮತ್ತು ಮರುವಸತಿ ಮಸೂದೆ 2011ನ್ನು ಗ್ರಾಮೀಣಾಭಿವೃದ್ಧಿ ಸಚಿವ ಜೈರಾಮ್ ರಮೇಶ್ ಅವರು ಮೂಲ ಕರಡಿನಲ್ಲಿ ಸ್ವಲ್ಪ ಮಾರ್ಪಾಡಿನೊಂದಿಗೆ ಮಂಡಿಸಿದರು.<br /> <br /> ಉದ್ದೇಶಿತ ಮಸೂದೆಯು ಶತಮಾನದಷ್ಟು ಹಳೆಯದಾದ ಕಾನೂನಿಗೆ ಬದಲಿಯಾಗಿ ಜಾರಿಗೆ ಬರಲಿದೆ.<br /> ಭೂಸ್ವಾಧೀನದಿಂದ ನಿರಾಶ್ರಿತರಾಗುವ ಕುಟುಂಬಗಳ ಮೇಲೆ ಆಗುವ ಆರ್ಥಿಕ, ಪರಿಸರ, ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರತಿಕೂಲ ಪರಿಣಾಮಗಳನ್ನು ಪ್ರಾತಿನಿಧಿಕ ಮತ್ತು ಪಾರದರ್ಶಕ ರೀತಿಯಲ್ಲಿ ಅಂದಾಜು ಮಾಡಬೇಕು ಎಂದು ಜೈರಾಂ ರಮೇಶ್ ಹೇಳಿದರು.<br /> <br /> ವಿವಿಧ ಪಾಲುದಾರರ ಜೊತೆಗೆ ಸಮಾಲೋಚಿಸಿದ ಬಳಿಕ ಸಿದ್ಧ ಪಡಿಸಲಾದ ಮಸೂದೆಯ ಅಂತಿಮ ರೂಪವು ~ಬಹುಬೆಳೆ ನೀರಾವರಿ ಭೂಮಿಯನ್ನು ಅಂತಿಮ ಹಂತದ ಕ್ರಮವಾಗಿ ಮಾತ್ರವೇ ಸ್ವಾಧೀನ ಪಡಿಸಿಕೊಳ್ಳಬಹುದು~ ಎಂದು ಸ್ಪಷ್ಟವಾಗಿ ಹೇಳುತ್ತದೆ.<br /> <br /> ಯಾವುದೇ ಬಹುಬೆಳೆ ನೀರಾವರಿ ಪ್ರದೇಶವನ್ನು ಸಾರ್ವಜನಿಕ ಉದ್ದೇಶಕ್ಕಾಗಿ ಸ್ವಾಧೀನ ಪಡಿಸಿಕೊಳ್ಳುವ ಅಗತ್ಯ ಸರ್ಕಾರಕ್ಕೆ ಕಂಡು ಬರುತ್ತಿಲ್ಲ~ ಎಂದು ಮೊದಲ ಕರಡು ಹೇಳಿತ್ತು.<br /> <br /> ಆಹಾರ ಸುರಕ್ಷತಾ ಖಾತರಿ ಸಲುವಾಗಿ ಬಹು ಬೆಳೆ ನೀರಾವರಿ ಪ್ರದೇಶವನ್ನು ಅಂತಿಮ ಕ್ರಮವಾಗಿ ಮಾತ್ರವೇ ಸ್ವಾಧೀನಪಡಿಸಿಕೊಳ್ಳಬಹುದು ಎಂದು ಪರಿಷ್ಕೃತ ಮಸೂದೆ ಹೇಳಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ನ್ಯಾಯೋಚಿತ ಹಾಗೂ ತೃಪ್ತಿಕರ ಪರಿಹಾರ ಒದಗಿಸುವ ಮತ್ತು ಅಭಿವೃದ್ಧಿ ಉದ್ದೇಶಗಳಿಗಾಗಿ ಯಾವುದೇ ಪ್ರದೇಶದಲ್ಲಿ ಭೂಸ್ವಾಧೀನಕ್ಕೆ ಆ ಪ್ರದೇಶದ ಶೇಕಡಾ 80 ಜನರ ಒಪ್ಪಿಗೆಯನ್ನು ಕಡ್ಡಾಯಗೊಳಿಸುವ ಮಸೂದೆಯನ್ನು ಸರ್ಕಾರವು ಬುಧವಾರ ಲೋಕಸಭೆಯಲ್ಲಿ ಮಂಡಿಸಿದೆ.<br /> <br /> ದೀರ್ಘಕಾಲದಿಂದ ನಿರೀಕ್ಷಿಸಲಾಗಿದ್ದ ಭೂಸ್ವಾಧೀನ, ಪುನಃಶ್ಚೈತನ್ಯ ಮತ್ತು ಮರುವಸತಿ ಮಸೂದೆ 2011ನ್ನು ಗ್ರಾಮೀಣಾಭಿವೃದ್ಧಿ ಸಚಿವ ಜೈರಾಮ್ ರಮೇಶ್ ಅವರು ಮೂಲ ಕರಡಿನಲ್ಲಿ ಸ್ವಲ್ಪ ಮಾರ್ಪಾಡಿನೊಂದಿಗೆ ಮಂಡಿಸಿದರು.<br /> <br /> ಉದ್ದೇಶಿತ ಮಸೂದೆಯು ಶತಮಾನದಷ್ಟು ಹಳೆಯದಾದ ಕಾನೂನಿಗೆ ಬದಲಿಯಾಗಿ ಜಾರಿಗೆ ಬರಲಿದೆ.<br /> ಭೂಸ್ವಾಧೀನದಿಂದ ನಿರಾಶ್ರಿತರಾಗುವ ಕುಟುಂಬಗಳ ಮೇಲೆ ಆಗುವ ಆರ್ಥಿಕ, ಪರಿಸರ, ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರತಿಕೂಲ ಪರಿಣಾಮಗಳನ್ನು ಪ್ರಾತಿನಿಧಿಕ ಮತ್ತು ಪಾರದರ್ಶಕ ರೀತಿಯಲ್ಲಿ ಅಂದಾಜು ಮಾಡಬೇಕು ಎಂದು ಜೈರಾಂ ರಮೇಶ್ ಹೇಳಿದರು.<br /> <br /> ವಿವಿಧ ಪಾಲುದಾರರ ಜೊತೆಗೆ ಸಮಾಲೋಚಿಸಿದ ಬಳಿಕ ಸಿದ್ಧ ಪಡಿಸಲಾದ ಮಸೂದೆಯ ಅಂತಿಮ ರೂಪವು ~ಬಹುಬೆಳೆ ನೀರಾವರಿ ಭೂಮಿಯನ್ನು ಅಂತಿಮ ಹಂತದ ಕ್ರಮವಾಗಿ ಮಾತ್ರವೇ ಸ್ವಾಧೀನ ಪಡಿಸಿಕೊಳ್ಳಬಹುದು~ ಎಂದು ಸ್ಪಷ್ಟವಾಗಿ ಹೇಳುತ್ತದೆ.<br /> <br /> ಯಾವುದೇ ಬಹುಬೆಳೆ ನೀರಾವರಿ ಪ್ರದೇಶವನ್ನು ಸಾರ್ವಜನಿಕ ಉದ್ದೇಶಕ್ಕಾಗಿ ಸ್ವಾಧೀನ ಪಡಿಸಿಕೊಳ್ಳುವ ಅಗತ್ಯ ಸರ್ಕಾರಕ್ಕೆ ಕಂಡು ಬರುತ್ತಿಲ್ಲ~ ಎಂದು ಮೊದಲ ಕರಡು ಹೇಳಿತ್ತು.<br /> <br /> ಆಹಾರ ಸುರಕ್ಷತಾ ಖಾತರಿ ಸಲುವಾಗಿ ಬಹು ಬೆಳೆ ನೀರಾವರಿ ಪ್ರದೇಶವನ್ನು ಅಂತಿಮ ಕ್ರಮವಾಗಿ ಮಾತ್ರವೇ ಸ್ವಾಧೀನಪಡಿಸಿಕೊಳ್ಳಬಹುದು ಎಂದು ಪರಿಷ್ಕೃತ ಮಸೂದೆ ಹೇಳಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>