ಅಮಿತ್ ಶಾ ಗೃಹಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಈ ಸಂದೇಶ ರವಾನಿಸಲಾಗಿದೆ.ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ತೀರಾ ಹದೆಗೆಟ್ಟಿದ್ದು, ನಿಯಂತ್ರಣಕ್ಕೆ ತರದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಲಾಗಿದೆ. ರಾಜಕೀಯ ವೈಷಮ್ಯದಿಂದ ಪಶ್ಚಿಮಬಂಗಾಳದ ಉತ್ತರ 24 ಪರಗಣಾ ಜಿಲ್ಲೆಯ ಬಾಸಿರಾತ್ನ ಧನಿಪಾರ ಗ್ರಾಮದಲ್ಲಿ ನಡೆದ ಗಲಭೆಯಲ್ಲಿ ಬಿಜೆಪಿಯ ಇಬ್ಬರು ಕಾರ್ಯಕರ್ತರು ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷದ ಒಬ್ಬರು ಮೃತಪಟ್ಟಿದ್ದಾರೆ.