ದಾಳಿಯ ವಿಡಿಯೋ ದೃಶ್ಯಾವಳಿಯಲ್ಲಿ ಭಾರತೀಯ ಯೋಧರೊಬ್ಬರು ಬಂಕರ್ಗಳನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯು ಯಶಸ್ವಿಯಾಗಿದೆ ಎನ್ನುತ್ತಿರುವುದು ದಾಖಲಾಗಿದೆ.
ಪಾಕಿಸ್ತಾನದ ಅಮಾನವೀಯ ವರ್ತನೆಗೆ ಪ್ರತ್ಯುತ್ತರ ನೀಡುವ ಸಲುವಾಗಿ ಭಾರತೀಯ ಸೇನೆಯು ಗಡಿ ನಿಯಂತ್ರಣ ರೇಖೆಯ ಬಳಿ ಇರುವ ವಿವಿಧ ವಲಯಗಳಲ್ಲಿ ಬೀಡು ಬಿಟ್ಟಿದ್ದಾರೆ ಎಂದು ಸೇನೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಮೇ 1 ರಂದು ಪಾಕಿಸ್ತಾನ ಸೇನೆ ಕೃಷ್ಣ ಘಾಟಿ ವಲಯದ ಬಳಿ ನಡೆಸಿದ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಇವರ ಶಿರಚ್ಛೇದನ ನಡೆಸಿ ಅಮಾನವೀಯ ವರ್ತನೆ ತೋರಿದ್ದರು.