<p><strong>ಲೋಕಸಭೆಯಲ್ಲಿ ರಕ್ಷಣಾ ಸಚಿವರ ಹೇಳಿಕೆ<br /> ನವದೆಹಲಿ (ಪಿಟಿಐ): </strong>ಪಾಕಿಸ್ತಾನ ಮೂಲದ ಗುಪ್ತಚರ ಸಂಸ್ಥೆಗಳು ಕಳೆದ ಮೂರು ವರ್ಷಗಳಲ್ಲಿ ನಡೆಸಿದ ಬೇಹುಗಾರಿಕೆ ಚಟುವಟಿಕೆಗೆ ಸಂಬಂಧಿಸಿದಂತೆ ಒಟ್ಟು ಐದು ಪ್ರಕರಣಗಳನ್ನು ದಾಖಲು ಮಾಡಲಾಗಿದ್ದು, ಈ ಸಂಬಂಧ 12 ಜನರನ್ನು ಬಂಧಿಸಲಾಗಿದೆ ಎಂದು ಸೋಮವಾರ ರಕ್ಷಣಾ ಸಚಿವ ಎ.ಕೆ. ಆಂಟನಿ ಲೋಕಸಭೆಗೆ ತಿಳಿಸಿದರು.<br /> <br /> ಬಂಧಿತರಲ್ಲಿ ಒಬ್ಬನಿಗೆ ಈಗಾಗಲೆ ಜೈಲು ಶಿಕ್ಷೆ ವಿಧಿಸಲಾಗಿದ್ದು ಉಳಿದ ಪ್ರಕರಣಗಳ ವಿಚಾರಣೆ ನಡೆಯುತ್ತಿದೆ. ಬೇಹುಗಾರಿಕೆ ಚಟುವಟಿಕೆಗಳ ಮೇಲೆ ಕಣ್ಣಿಡಲು ಗುಪ್ತಚರ ಇಲಾಖೆಯನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದೂ ತಿಳಿಸಿದರು.<br /> <strong><br /> `ಕಾಶ್ಮೀರ ಸಮಸ್ಯೆಗೆ ಪರಿಹಾರ~<br /> </strong> ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕ್ ಅತಿಕ್ರಮಣ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ದ್ವಿಪಕ್ಷೀಯ ಹಾಗೂ ಶಾಂತಿಯುತ ಮಾತುಕತೆಯ ಮೂಲಕ ಭಾರತ ಶೀಘ್ರ ಪರಿಹಾರ ಕಂಡುಕೊಳ್ಳಲಿದೆ ಎಂದೂ ಸಚಿವರು ತಿಳಿಸಿದರು.<br /> <br /> ಗಡಿನಿಯಂತ್ರಣ ರೇಖೆ ಕುರಿತಾದ ಸಮಸ್ಯೆಯನ್ನೂ 1949ರ ಕರಾಚಿ ಒಪ್ಪಂದ ಹಾಗೂ 1972ರ ಸಿಮ್ಲಾ ಒಪ್ಪಂದದ ಅನ್ವಯವೇ ಪರಿಹರಿಸಿಕೊಳ್ಳಲಾಗುವುದು. ಕೆಲ ಪ್ರಕಾಶಕರ ನಕಾಶೆ ಪುಸ್ತಕಗಳಲ್ಲಿ ಭಾರತದ ಗಡಿಗಳ ಕುರಿತು ತಪ್ಪು ಮಾಹಿತಿ ಇದ್ದು ಈ ಕುರಿತು ಸಂಬಂಧಿಸಿದವರ ಜತೆ ಚರ್ಚೆ ನಡೆಸಲಾಗುವುದು ಎಂದರು.<br /> </p>.<p><strong>ಕೇಂದ್ರದ ತೀವ್ರ ನಿಗಾ</strong></p>.<p><strong>ನವದೆಹಲಿ (ಪಿಟಿಐ):</strong> ಗಡಿ ಪ್ರದೇಶದಲ್ಲಿ ಚೀನಾ ಮೂಲಸೌಲಭ್ಯಗಳ ಅಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಬಗ್ಗೆ ಕೇಂದ್ರಕ್ಕೆ ಮಾಹಿತಿ ಇದ್ದು, ಅದರ ಮೇಲೆ ತೀವ್ರ ನಿಗಾ ವಹಿಸಲಾಗಿದೆ ಎಂದು ಸರ್ಕಾರ ಹೇಳಿದೆ.<br /> <br /> `ಭಾರತದ ಪ್ರಬಲ ವಿರೋಧದ ಮಧ್ಯೆಯೂ ಚೀನಾ ಸರ್ಕಾರ ಗಡಿಗುಂಟ ರೈಲು, ರಸ್ತೆ ಅಭಿವೃದ್ಧಿ ಯೋಜನೆ ಮತ್ತು ವಿಮಾನಯಾನ ಸೌಕರ್ಯದಂಥ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುತ್ತಿದೆ. ಸರ್ಕಾರ ಇದರ ಬಗ್ಗೆ ಹೆಚ್ಚಿನ ನಿಗಾ ವಹಿಸಿದೆ~ ಎಂದು ರಕ್ಷಣಾ ಸಚಿವ ಎ.ಕೆ. ಆಂಟನಿ ಲೋಕಸಭೆಗೆ ನೀಡಿರುವ ಲಿಖಿತ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲೋಕಸಭೆಯಲ್ಲಿ ರಕ್ಷಣಾ ಸಚಿವರ ಹೇಳಿಕೆ<br /> ನವದೆಹಲಿ (ಪಿಟಿಐ): </strong>ಪಾಕಿಸ್ತಾನ ಮೂಲದ ಗುಪ್ತಚರ ಸಂಸ್ಥೆಗಳು ಕಳೆದ ಮೂರು ವರ್ಷಗಳಲ್ಲಿ ನಡೆಸಿದ ಬೇಹುಗಾರಿಕೆ ಚಟುವಟಿಕೆಗೆ ಸಂಬಂಧಿಸಿದಂತೆ ಒಟ್ಟು ಐದು ಪ್ರಕರಣಗಳನ್ನು ದಾಖಲು ಮಾಡಲಾಗಿದ್ದು, ಈ ಸಂಬಂಧ 12 ಜನರನ್ನು ಬಂಧಿಸಲಾಗಿದೆ ಎಂದು ಸೋಮವಾರ ರಕ್ಷಣಾ ಸಚಿವ ಎ.ಕೆ. ಆಂಟನಿ ಲೋಕಸಭೆಗೆ ತಿಳಿಸಿದರು.<br /> <br /> ಬಂಧಿತರಲ್ಲಿ ಒಬ್ಬನಿಗೆ ಈಗಾಗಲೆ ಜೈಲು ಶಿಕ್ಷೆ ವಿಧಿಸಲಾಗಿದ್ದು ಉಳಿದ ಪ್ರಕರಣಗಳ ವಿಚಾರಣೆ ನಡೆಯುತ್ತಿದೆ. ಬೇಹುಗಾರಿಕೆ ಚಟುವಟಿಕೆಗಳ ಮೇಲೆ ಕಣ್ಣಿಡಲು ಗುಪ್ತಚರ ಇಲಾಖೆಯನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದೂ ತಿಳಿಸಿದರು.<br /> <strong><br /> `ಕಾಶ್ಮೀರ ಸಮಸ್ಯೆಗೆ ಪರಿಹಾರ~<br /> </strong> ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕ್ ಅತಿಕ್ರಮಣ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ದ್ವಿಪಕ್ಷೀಯ ಹಾಗೂ ಶಾಂತಿಯುತ ಮಾತುಕತೆಯ ಮೂಲಕ ಭಾರತ ಶೀಘ್ರ ಪರಿಹಾರ ಕಂಡುಕೊಳ್ಳಲಿದೆ ಎಂದೂ ಸಚಿವರು ತಿಳಿಸಿದರು.<br /> <br /> ಗಡಿನಿಯಂತ್ರಣ ರೇಖೆ ಕುರಿತಾದ ಸಮಸ್ಯೆಯನ್ನೂ 1949ರ ಕರಾಚಿ ಒಪ್ಪಂದ ಹಾಗೂ 1972ರ ಸಿಮ್ಲಾ ಒಪ್ಪಂದದ ಅನ್ವಯವೇ ಪರಿಹರಿಸಿಕೊಳ್ಳಲಾಗುವುದು. ಕೆಲ ಪ್ರಕಾಶಕರ ನಕಾಶೆ ಪುಸ್ತಕಗಳಲ್ಲಿ ಭಾರತದ ಗಡಿಗಳ ಕುರಿತು ತಪ್ಪು ಮಾಹಿತಿ ಇದ್ದು ಈ ಕುರಿತು ಸಂಬಂಧಿಸಿದವರ ಜತೆ ಚರ್ಚೆ ನಡೆಸಲಾಗುವುದು ಎಂದರು.<br /> </p>.<p><strong>ಕೇಂದ್ರದ ತೀವ್ರ ನಿಗಾ</strong></p>.<p><strong>ನವದೆಹಲಿ (ಪಿಟಿಐ):</strong> ಗಡಿ ಪ್ರದೇಶದಲ್ಲಿ ಚೀನಾ ಮೂಲಸೌಲಭ್ಯಗಳ ಅಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಬಗ್ಗೆ ಕೇಂದ್ರಕ್ಕೆ ಮಾಹಿತಿ ಇದ್ದು, ಅದರ ಮೇಲೆ ತೀವ್ರ ನಿಗಾ ವಹಿಸಲಾಗಿದೆ ಎಂದು ಸರ್ಕಾರ ಹೇಳಿದೆ.<br /> <br /> `ಭಾರತದ ಪ್ರಬಲ ವಿರೋಧದ ಮಧ್ಯೆಯೂ ಚೀನಾ ಸರ್ಕಾರ ಗಡಿಗುಂಟ ರೈಲು, ರಸ್ತೆ ಅಭಿವೃದ್ಧಿ ಯೋಜನೆ ಮತ್ತು ವಿಮಾನಯಾನ ಸೌಕರ್ಯದಂಥ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುತ್ತಿದೆ. ಸರ್ಕಾರ ಇದರ ಬಗ್ಗೆ ಹೆಚ್ಚಿನ ನಿಗಾ ವಹಿಸಿದೆ~ ಎಂದು ರಕ್ಷಣಾ ಸಚಿವ ಎ.ಕೆ. ಆಂಟನಿ ಲೋಕಸಭೆಗೆ ನೀಡಿರುವ ಲಿಖಿತ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>