ನವದೆಹಲಿ(ಪಿಟಿಐ): 2013ರಲ್ಲಿ ಭಾರತದ ಗಡಿ ನಿಯಂತ್ರಣಾ ರೇಖೆಯನ್ನು ದಾಟಿ ಭಾರತೀಯ ಸೈನಿಕರ ಶಿರಚ್ಛೇದನ ಮಾಡಿದ್ದ ಪಾಕ್ ಸೇನೆಗೆ ಭಾರತವು ಸೂಕ್ತ ಉತ್ತರ ನೀಡಿದೆ ಎಂದು ನಿವೃತ್ತಗೊಳ್ಳಲಿರುವ ಭೂಸೇನಾ ಮುಖ್ಯಸ್ಥ ಜನರಲ್ ಬಿಕ್ರಮ್ ಸಿಂಗ್ ಅವರು ಹೇಳಿದ್ದಾರೆ.
ಈ ವಿಷಯ ಕುರಿತು ಮಾಧ್ಯಗಳೊಂದಿಗೆ ಮಾತನಾಡಿದ ಅವರು ಪಾಕಿಸ್ತಾನದ ಈ ದುಷ್ಕೃತ್ಯಕ್ಕೆ ಭಾರತವು ಸೂಕ್ತ ಉತ್ತರ ನೀಡಿದೆ. ಇದು ಪಾಕಿಸ್ತಾನದ ಪೂರ್ವ ನಿಯೋಜಿತ ಕೃತ್ಯವಾಗಿದೆ ಎಂದರು.
ಘಟನೆಗೆ ಸಂಬಂಧಿಸಿದಂತೆ ಭಾರತೀಯ ರಕ್ಷಣಾ ಇಲಾಖೆಯ ವಿರುದ್ಧ ಹಲವು ಆರೋಪಗಳನ್ನು ಮಾಡಲಾಗಿತ್ತು. ಆದರೆ ಈ ಆರೋಪಗಳಲ್ಲಿ ಹುರುಳಿಲ್ಲ ಎಂದು ಸಿಂಗ್ ಅವರು ಸಮರ್ಥಿಸಿಕೊಂಡರು.