<p><br /> ನವದೆಹಲಿ: ಕೇಂದ್ರ ಜಾಗೃತ ಆಯುಕ್ತ ಪಿ. ಜೆ. ಥಾಮಸ್ ನೇಮಕಾತಿ ರದ್ದು ಮಾಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ಗೌರವಿಸುವುದಾಗಿ ಪ್ರಧಾನಿ ಪ್ರಧಾನಿ ಮನಮೋಹನ್ಸಿಂಗ್ ಗುರುವಾರ ಹೇಳಿದ್ದಾರೆ. ಈ ಸಂಬಂಧ ಸಂಸತ್ತಿನಲ್ಲಿ ಸೋಮವಾರ ಹೇಳಿಕೆ ನೀಡಲಿದ್ದಾರೆ.<br /> <br /> ‘ನಾನು ಸುಪ್ರೀಂಕೋರ್ಟ್ ತೀರ್ಪನ್ನು ಗೌರವಿಸುತ್ತೇನೆ. ಈ ಸಂಬಂಧ ಸಂಸತ್ತಿನಲ್ಲಿ ಹೇಳಿಕೆ ನೀಡುತ್ತೇನೆ’ ಎಂದು ಮನಮೋಹನ್ಸಿಂಗ್ ಸಂಸತ್ತಿನ ಹೊರಗೆ ಪತ್ರಕರ್ತರಿಗೆ ತಿಳಿಸಿದರು. ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಸರ್ಕಾರದ ಮೇಲೆ ಮುಗಿಬಿದ್ದಿವೆ.<br /> <br /> ಪ್ರಧಾನಿ, ಗೃಹ ಸಚಿವರು ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಉನ್ನತಾಧಿಕಾರ ಸಮಿತಿ ಕಾನೂನು ರೀತಿ ಸಿವಿಸಿ ಅವರನ್ನು ನೇಮಕ ಮಾಡಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.<br /> <br /> ಸರ್ಕಾರಕ್ಕೆ ಮುಜುಗರ: ಕೇಂದ್ರ ಜಾಗೃತ ದಳದ ಕಮಿಷನರ್ ಪಿ.ಜೆ. ಥಾಮಸ್ ನೇಮಕಾತಿ ರದ್ದು ಮಾಡಿದ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಯುಪಿಎ ಸರ್ಕಾರದ ಮೇಲೆ ಮುಗಿಬಿದ್ದಿರುವುದರಿಂದ ಪ್ರಧಾನಿ ಮನಮೋಹನ್ಸಿಂಗ್ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮುಜುಗರಕ್ಕೆ ಒಳಗಾಗಿದ್ದಾರೆ.<br /> <br /> ಸುಪ್ರೀಂ ಕೋರ್ಟ್ ತೀರ್ಪು ಪ್ರಕಟವಾಗುತ್ತಿದ್ದಂತೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕಿ ಸುಷ್ಮಾ ಸ್ವರಾಜ್, ಸುಪ್ರೀಂ ಕೋರ್ಟ್ ತೀರ್ಪು ಬಿಜೆಪಿ ನಿಲುವನ್ನು ಎತ್ತಿ ಹಿಡಿದಿದೆ ಎಂದಿದ್ದಾರೆ.<br /> <br /> ಥಾಮಸ್ ನೇಮಕ ಸಂದರ್ಭದಲ್ಲಿ ಭಿನ್ನಮತ ದಾಖಲು ಮಾಡಿದ್ದ ‘ಸಿವಿಸಿ ನೇಮಕಾತಿ ಉನ್ನತಾಧಿಕಾರ ಸಮಿತಿ ಸದಸ್ಯರೂ ಆಗಿರುವ ಸುಷ್ಮಾ ಸ್ವರಾಜ್, ಕೋರ್ಟ್ ತೀರ್ಪು ಹೊರ ಬೀಳುತ್ತಿದ್ದಂತೆ ‘ಟ್ವೀಟರ್’ನಲ್ಲಿ ಪ್ರತಿಕ್ರಿಯಿಸಿದ್ದಾರೆ. ‘ಸಿವಿಸಿ ಸ್ಥಾನದ ಘನತೆ ಮರು ಸ್ಥಾಪಿಸಬೇಕಾಗಿದೆ’ ಎಂದಿದ್ದಾರೆ.<br /> <br /> ಸರ್ಕಾರದ ಹೇಳಿಕೆಗೆ ಆಗ್ರಹ: ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಸರ್ಕಾರ ಹೇಳಿಕೆ ನೀಡಬೇಕೆಂದು ಸಂಸತ್ತಿನ ಉಭಯ ಸದನಗಳಲ್ಲಿ ಪ್ರಮುಖ ವಿರೋಧ ಪಕ್ಷವಾದ ಬಿಜೆಪಿ ಆಗ್ರಹಿಸಿದೆ.<br /> <br /> ‘ಥಾಮಸ್ ನೇಮಕಾತಿಗೆ ಕುರಿತಂತೆ ಲೋಪ ಆಗಿರುವುದೆಲ್ಲಿ’ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಲಿ ಎಂದು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅರುಣ್ ಜೇಟ್ಲಿ ಹಾಗೂ ಲೋಕಸಭೆಯಲ್ಲಿ ವಿರೋಧ ಪಕ್ಷದ ಉಪ ನಾಯಕ ಗೋಪಿನಾಥ್ ಮುಂಡೆ ಒತ್ತಾಯಿಸಿದ್ದಾರೆ.<br /> <br /> ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕಲಾಪಕ್ಕೆ ಅಡ್ಡಿಪಡಿಸಿದರು. ‘ಭ್ರಷ್ಟಾಚಾರ ಹತ್ತಿಕ್ಕಲಾಗದ ಸರ್ಕಾರ ಅದಕ್ಷ’ ಎಂದು ಘೋಷಣೆಗಳನ್ನು ಕೂಗುತ್ತಾ ಸಭಾಪತಿ ಪೀಠದ ಮುಂದೆ ಗುಂಪುಗೂಡಿದರು. ಅನಂತರ ಜೇಟ್ಲಿ ಮಾತನಾಡಿದರು.<br /> <br /> ಹೊಣೆಗಾರಿಕೆ ಹೊರಲಿ: ಸಿವಿಸಿ ನೇಮಕಾತಿ ಹೊಣೆಯನ್ನು ಪ್ರಧಾನಿ ಮನಮೋಹನ್ಸಿಂಗ್ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೇ ಹೊರಬೇಕು ಎಂದು ಬಿಜೆಪಿ ಸಂಸದೀಯ ಪಕ್ಷದ ಅಧ್ಯಕ್ಷ ಎಲ್.ಕೆ. ಅಡ್ವಾಣಿ ಹೇಳಿದರು.<br /> <br /> ದೇಶದ 60 ವರ್ಷಗಳ ಇತಿಹಾಸದಲ್ಲಿ ಹಿಂದೆಂದೂ ಈ ರೀತಿ ನಡೆದಿಲ್ಲ. ಸಿವಿಸಿ ನೇಮಕಾತಿ ಕಾನೂನು ಬಾಹಿರ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಹೊಣೆಯನ್ನು ಈ ಇಬ್ಬರು ಮುಖಂಡರು ಹೊರಬೇಕು ಎಂದು ಅಡ್ವಾಣಿ ತಿಳಿಸಿದರು.<br /> <br /> ಥಾಮಸ್ ನೇಮಕಾತಿ ರದ್ದು ಮಾಡುವ ಮೂಲಕ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ‘ಕಪಾಳ ಮೋಕ್ಷ’ ಮಾಡಿದೆ ಎಂದು ಬಿಜೆಪಿ ಅಧ್ಯಕ್ಷ ನಿತಿನ್ ಗಡ್ಕರಿ ವ್ಯಾಖ್ಯಾನಿಸಿದ್ದಾರೆ.<br /> <br /> ಥಾಮಸ್ ನೇಮಕದಿಂದ ಆಗಿರುವ ಲೋಪವನ್ನು ಈಗ ಸರಿಪಡಿಸಲು ಸಾಧ್ಯವಿಲ್ಲ. ಯುಪಿಎ ಸರ್ಕಾರವನ್ನು ಮುಜುಗರಕ್ಕೆ ಸಿಕ್ಕಿಸಿರುವ ಈ ಬೆಳವಣಿಗೆಗೆ ಸಂಬಂಧಿಸಿದಂತೆ ಪ್ರಧಾನಿ ರಾಜೀನಾಮೆಗೆ ಒತ್ತಡ ಹೇರುವುದಿಲ್ಲ ಎಂದು ಪತ್ರಕರ್ತರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><br /> ನವದೆಹಲಿ: ಕೇಂದ್ರ ಜಾಗೃತ ಆಯುಕ್ತ ಪಿ. ಜೆ. ಥಾಮಸ್ ನೇಮಕಾತಿ ರದ್ದು ಮಾಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ಗೌರವಿಸುವುದಾಗಿ ಪ್ರಧಾನಿ ಪ್ರಧಾನಿ ಮನಮೋಹನ್ಸಿಂಗ್ ಗುರುವಾರ ಹೇಳಿದ್ದಾರೆ. ಈ ಸಂಬಂಧ ಸಂಸತ್ತಿನಲ್ಲಿ ಸೋಮವಾರ ಹೇಳಿಕೆ ನೀಡಲಿದ್ದಾರೆ.<br /> <br /> ‘ನಾನು ಸುಪ್ರೀಂಕೋರ್ಟ್ ತೀರ್ಪನ್ನು ಗೌರವಿಸುತ್ತೇನೆ. ಈ ಸಂಬಂಧ ಸಂಸತ್ತಿನಲ್ಲಿ ಹೇಳಿಕೆ ನೀಡುತ್ತೇನೆ’ ಎಂದು ಮನಮೋಹನ್ಸಿಂಗ್ ಸಂಸತ್ತಿನ ಹೊರಗೆ ಪತ್ರಕರ್ತರಿಗೆ ತಿಳಿಸಿದರು. ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಸರ್ಕಾರದ ಮೇಲೆ ಮುಗಿಬಿದ್ದಿವೆ.<br /> <br /> ಪ್ರಧಾನಿ, ಗೃಹ ಸಚಿವರು ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಉನ್ನತಾಧಿಕಾರ ಸಮಿತಿ ಕಾನೂನು ರೀತಿ ಸಿವಿಸಿ ಅವರನ್ನು ನೇಮಕ ಮಾಡಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.<br /> <br /> ಸರ್ಕಾರಕ್ಕೆ ಮುಜುಗರ: ಕೇಂದ್ರ ಜಾಗೃತ ದಳದ ಕಮಿಷನರ್ ಪಿ.ಜೆ. ಥಾಮಸ್ ನೇಮಕಾತಿ ರದ್ದು ಮಾಡಿದ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಯುಪಿಎ ಸರ್ಕಾರದ ಮೇಲೆ ಮುಗಿಬಿದ್ದಿರುವುದರಿಂದ ಪ್ರಧಾನಿ ಮನಮೋಹನ್ಸಿಂಗ್ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮುಜುಗರಕ್ಕೆ ಒಳಗಾಗಿದ್ದಾರೆ.<br /> <br /> ಸುಪ್ರೀಂ ಕೋರ್ಟ್ ತೀರ್ಪು ಪ್ರಕಟವಾಗುತ್ತಿದ್ದಂತೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕಿ ಸುಷ್ಮಾ ಸ್ವರಾಜ್, ಸುಪ್ರೀಂ ಕೋರ್ಟ್ ತೀರ್ಪು ಬಿಜೆಪಿ ನಿಲುವನ್ನು ಎತ್ತಿ ಹಿಡಿದಿದೆ ಎಂದಿದ್ದಾರೆ.<br /> <br /> ಥಾಮಸ್ ನೇಮಕ ಸಂದರ್ಭದಲ್ಲಿ ಭಿನ್ನಮತ ದಾಖಲು ಮಾಡಿದ್ದ ‘ಸಿವಿಸಿ ನೇಮಕಾತಿ ಉನ್ನತಾಧಿಕಾರ ಸಮಿತಿ ಸದಸ್ಯರೂ ಆಗಿರುವ ಸುಷ್ಮಾ ಸ್ವರಾಜ್, ಕೋರ್ಟ್ ತೀರ್ಪು ಹೊರ ಬೀಳುತ್ತಿದ್ದಂತೆ ‘ಟ್ವೀಟರ್’ನಲ್ಲಿ ಪ್ರತಿಕ್ರಿಯಿಸಿದ್ದಾರೆ. ‘ಸಿವಿಸಿ ಸ್ಥಾನದ ಘನತೆ ಮರು ಸ್ಥಾಪಿಸಬೇಕಾಗಿದೆ’ ಎಂದಿದ್ದಾರೆ.<br /> <br /> ಸರ್ಕಾರದ ಹೇಳಿಕೆಗೆ ಆಗ್ರಹ: ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಸರ್ಕಾರ ಹೇಳಿಕೆ ನೀಡಬೇಕೆಂದು ಸಂಸತ್ತಿನ ಉಭಯ ಸದನಗಳಲ್ಲಿ ಪ್ರಮುಖ ವಿರೋಧ ಪಕ್ಷವಾದ ಬಿಜೆಪಿ ಆಗ್ರಹಿಸಿದೆ.<br /> <br /> ‘ಥಾಮಸ್ ನೇಮಕಾತಿಗೆ ಕುರಿತಂತೆ ಲೋಪ ಆಗಿರುವುದೆಲ್ಲಿ’ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಲಿ ಎಂದು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅರುಣ್ ಜೇಟ್ಲಿ ಹಾಗೂ ಲೋಕಸಭೆಯಲ್ಲಿ ವಿರೋಧ ಪಕ್ಷದ ಉಪ ನಾಯಕ ಗೋಪಿನಾಥ್ ಮುಂಡೆ ಒತ್ತಾಯಿಸಿದ್ದಾರೆ.<br /> <br /> ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕಲಾಪಕ್ಕೆ ಅಡ್ಡಿಪಡಿಸಿದರು. ‘ಭ್ರಷ್ಟಾಚಾರ ಹತ್ತಿಕ್ಕಲಾಗದ ಸರ್ಕಾರ ಅದಕ್ಷ’ ಎಂದು ಘೋಷಣೆಗಳನ್ನು ಕೂಗುತ್ತಾ ಸಭಾಪತಿ ಪೀಠದ ಮುಂದೆ ಗುಂಪುಗೂಡಿದರು. ಅನಂತರ ಜೇಟ್ಲಿ ಮಾತನಾಡಿದರು.<br /> <br /> ಹೊಣೆಗಾರಿಕೆ ಹೊರಲಿ: ಸಿವಿಸಿ ನೇಮಕಾತಿ ಹೊಣೆಯನ್ನು ಪ್ರಧಾನಿ ಮನಮೋಹನ್ಸಿಂಗ್ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೇ ಹೊರಬೇಕು ಎಂದು ಬಿಜೆಪಿ ಸಂಸದೀಯ ಪಕ್ಷದ ಅಧ್ಯಕ್ಷ ಎಲ್.ಕೆ. ಅಡ್ವಾಣಿ ಹೇಳಿದರು.<br /> <br /> ದೇಶದ 60 ವರ್ಷಗಳ ಇತಿಹಾಸದಲ್ಲಿ ಹಿಂದೆಂದೂ ಈ ರೀತಿ ನಡೆದಿಲ್ಲ. ಸಿವಿಸಿ ನೇಮಕಾತಿ ಕಾನೂನು ಬಾಹಿರ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಹೊಣೆಯನ್ನು ಈ ಇಬ್ಬರು ಮುಖಂಡರು ಹೊರಬೇಕು ಎಂದು ಅಡ್ವಾಣಿ ತಿಳಿಸಿದರು.<br /> <br /> ಥಾಮಸ್ ನೇಮಕಾತಿ ರದ್ದು ಮಾಡುವ ಮೂಲಕ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ‘ಕಪಾಳ ಮೋಕ್ಷ’ ಮಾಡಿದೆ ಎಂದು ಬಿಜೆಪಿ ಅಧ್ಯಕ್ಷ ನಿತಿನ್ ಗಡ್ಕರಿ ವ್ಯಾಖ್ಯಾನಿಸಿದ್ದಾರೆ.<br /> <br /> ಥಾಮಸ್ ನೇಮಕದಿಂದ ಆಗಿರುವ ಲೋಪವನ್ನು ಈಗ ಸರಿಪಡಿಸಲು ಸಾಧ್ಯವಿಲ್ಲ. ಯುಪಿಎ ಸರ್ಕಾರವನ್ನು ಮುಜುಗರಕ್ಕೆ ಸಿಕ್ಕಿಸಿರುವ ಈ ಬೆಳವಣಿಗೆಗೆ ಸಂಬಂಧಿಸಿದಂತೆ ಪ್ರಧಾನಿ ರಾಜೀನಾಮೆಗೆ ಒತ್ತಡ ಹೇರುವುದಿಲ್ಲ ಎಂದು ಪತ್ರಕರ್ತರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>