ಲಖನೌ (ಪಿಟಿಐ): ಉತ್ತರ ಪ್ರದೇಶದಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸರ್ಕಾರವು ಅಭಿವೃದ್ಧಿ ಕಾರ್ಯಗಳನ್ನು ಜಾರಿಗೊಳಿಸುವಲ್ಲಿ ಬಹಳ ನಿಧಾನಗತಿ ಅನುಸರಿಸುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಟೀಕಿಸಿದ್ದಾರೆ.
‘ಕೇವಲ ಯೋಜನೆಗಳ ಶಂಕುಸ್ಥಾಪನೆಯನ್ನು ಮಾತ್ರ ನೋಡುತ್ತಿದ್ದೇವೆಯೇ ಹೊರತು ಅವುಗಳ ಉದ್ಘಾಟನೆಯನ್ನಲ್ಲ’ ಎಂದು ಅವರು ಭಾನುವಾರ ಇಲ್ಲಿ ತಮ್ಮ ಪುತ್ರನ ಆಡಳಿತ ವೈಖರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
‘ರಾಜ್ಯ ಸರ್ಕಾರ ಸಾಕಷ್ಟು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರೂ, ಇನ್ನೂ ಅವುಗಳನ್ನು ಉದ್ಘಾಟಿಸುವ ಅವಕಾಶ ತಮಗೆ ಸಿಕ್ಕಿಲ್ಲ’ ಎಂದು ಅಖಿಲೇಶ್ ಸಮ್ಮುಖದಲ್ಲೇ ದೂರಿದರು.
ನಕಲು ಮಾಡಿದ ಮೋದಿ
ಗ್ರಾಮಗಳನ್ನು ದತ್ತು ಪಡೆಯುವ ಮತ್ತು ಶೌಚಾಲಯಗಳನ್ನು ನಿರ್ಮಿಸುವ ತಮ್ಮ ಯೋಜನೆಗಳನ್ನು ಈಗ ಪ್ರಧಾನಿ ನರೇಂದ್ರ ಮೋದಿ ನಕಲು ಮಾಡಿದ್ದಾರೆ. ತಾವು 1990ರಲ್ಲೇ ಈ ಯೋಜನೆಗಳನ್ನು ಜಾರಿಗೊಳಿಸಿದ್ದಾಗಿ ಹೇಳಿದರು.