2016ರಲ್ಲಿ ಪ್ರಕಟವಾಗಿರುವ ಈ ಪುಸ್ತಕದಲ್ಲಿ, 1992ರ ಬಾಬರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ಕೆಲವು ಉಲ್ಲೇಖಗಳಿವೆ. ಹಿಂದೂಗಳ ಭಾವನೆಗಳಿಗೆ ಧಕ್ಕೆ ಉಂಟು ಮಾಡುತ್ತಿರುವ ಈ ಉಲ್ಲೇಖಗಳನ್ನು ಪುಸ್ತಕದಿಂದ ತೆಗೆದುಹಾಕಬೇಕು ಎಂದು ಸಾಮಾಜಿಕ ಕಾರ್ಯಕರ್ತ ಮತ್ತು ವಕೀಲರ ಗುಂಪೊಂದು ಅರ್ಜಿ ಸಲ್ಲಿಸಿದೆ. ಈ ಅರ್ಜಿಗೆ ಪ್ರತಿಕ್ರಿಯಿಸುವಂತೆ ನ್ಯಾಯಮೂರ್ತಿ ಪ್ರತಿಭಾ ಎಂ.ಸಿಂಗ್ ಅವರು ಪ್ರಣವ್ಗೆ ನೋಟಿಸ್ ನೀಡಿದ್ದಾರೆ. ಜುಲೈ 30ಕ್ಕೆ ಮುಂದಿನ ವಿಚಾರಣೆ ನಿಗದಿಪಡಿಸಲಾಗಿದೆ.