ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅಂಗೀಕರಿಸಿರುವ ಹೊಸ ಸಮಿತಿಗೆ ಕೂಡ ಎ.ಕೆ.ಆಂಟನಿ ಅವರೇ ಅಧ್ಯಕ್ಷರಾಗಿ ಮುಂದುವರಿಯುವರು. ಪಕ್ಷದ ರಾಜ್ಯದ ವಿದ್ಯಮಾನಗಳ ಮೇಲ್ವಿಚಾರಕ ದಿಗ್ವಿಜಯ್ ಸಿಂಗ್, ಸಿಬ್ಬಂದಿ ಮತ್ತು ತರಬೇತಿ ಖಾತೆ ರಾಜ್ಯ ಸಚಿವ ವಿ.ನಾರಾಯಣ ಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಸಮಿತಿಯ ಸದಸ್ಯರಾಗಿದ್ದಾರೆ.