<p><strong>ನವದೆಹಲಿ</strong>: ಕಳೆದ ವರ್ಷ ದೆಹಲಿಯಲ್ಲಿ ನಡೆದ ಪ್ಯಾರಾಮೆಡಿಕಲ್ ವಿದ್ಯಾರ್ಥಿ ಮೇಲಿನ ಬರ್ಬರ ಅತ್ಯಾಚಾರದಿಂದ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ ಮಹಿಳೆಯರ ವಿರುದ್ಧ ದೌರ್ಜನ್ಯ, ಅತ್ಯಾಚಾರ ಹಾಗೂ ಇತರ ಅಪರಾಧ ಪ್ರಕರಣತಡೆಯಲು ಹಲವು ಕ್ರಮ ಕೈ ಗೊಂಡಿದ್ದರೂ ಕೆಲವಷ್ಟೇ ಜಾರಿಯಾಗಿವೆ.<br /> <br /> ಆದರೆ ಮಹಿಳೆಯರಿಗೆ ಪೂರ್ಣಪ್ರಮಾಣದಲ್ಲಿ ಭದ್ರತೆ ದೊರೆತಿಲ್ಲ. ಇದೆಲ್ಲಕ್ಕಿಂತ ಮುಖ್ಯವಾಗಿ ‘ನಿರ್ಭಯ ನಿಧಿಯಡಿ ಇಡಲಾಗಿರುವ ರೂ1000 ಕೋಟಿ ಹಣದಲ್ಲಿ ಒಂದೂ ರೂಪಾಯಿಯೂ ಖರ್ಚಾಗದೇ ಹಾಗೇ ಉಳಿದಿದೆ.<br /> <br /> ಈ ಹಣದಲ್ಲಿ ಹೆಚ್ಚಿನ ಮಹಿಳಾ ಪೊಲೀಸರ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿತ್ತು. ಆದರೆ ದೇಶದಾದ್ಯಂತ ಪೊಲೀಸ್ ಪಡೆಯಲ್ಲಿ ಶೇ 6ರಷ್ಟು ಮಾತ್ರ ಮಹಿಳೆಯರು ಇದ್ದಾರೆ.<br /> <br /> ನಿರ್ಭಯ ನಿಧಿ ಮೀಸಲಿಟ್ಟಿರುವುದನ್ನು ಈ ವರ್ಷದ ಫೆಬ್ರುವರಿಯಲ್ಲಿ ಮಂಡಿಸಲಾದ ಮುಂಗಡಪತ್ರದಲ್ಲಿ ಘೋಷಿಸಲಾಗಿತ್ತು. ಆದರೆ ನಿಧಿ ನಿಯಂತ್ರಣ ಯಾರು ಮಾಡಬೇಕು ಎಂಬ ಬಗೆಗಿನ ಗೊಂದಲವೇ ಹಣ ಖರ್ಚಾಗದೆ ಹಾಗೇ ಉಳಿಯಲು ಪ್ರಮುಖ ಕಾರಣವಾಗಿದೆ. ಈ ಕುರಿತು ಗೃಹ ಸೇರಿದಂತೆ ಹಲವು ಸಚಿವಾಲಯಗಳು ಪ್ರಸ್ತಾವ ಮುಂದಿಟ್ಟಿವೆ.<br /> <br /> <strong>ಮೀರಾ ಆತಂಕ</strong><br /> ಮಹಿಳೆಯರ ವಿರುದ್ಧ ಅಪರಾಧ ತಡೆಯಲು ಹಾಗೂ ಭದ್ರತೆ ಒದಗಿಸಲು ಸರ್ಕಾರ ಏನೆಲ್ಲ ಕಾನೂನನ್ನು ರೂಪಿಸಿದ್ದರೂ ಅದರಿಂದ ಹೆಚ್ಚಿನ ಪ್ರಯೋಜನ ಮಹಿಳೆಯರಿಗೆ ಸಿಗುತ್ತಿಲ್ಲ ಎಂದು ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ.</p>.<p>ದೆಹಲಿ ಸಾಮೂಹಿಕ ಅತ್ಯಾಚಾರಕ್ಕೆ ವರ್ಷ ತುಂಬಿದ ಪ್ರಯುಕ್ತ ಸಂಸತ್ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು.<br /> ‘ಮಹಿಳೆಯರಿಗೆ ಭದ್ರತೆ ನೀಡಲು ಸಂಸತ್ ಅವಿರೋಧವಾಗಿ ಕಾನೂನು ರೂಪಿಸಲು ಒಪ್ಪಿಗೆ ನೀಡಿದ್ದರೂ ನಿರೀಕ್ಷಿತ ಬದಲಾವಣೆ ಆಗಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಳೆದ ವರ್ಷ ದೆಹಲಿಯಲ್ಲಿ ನಡೆದ ಪ್ಯಾರಾಮೆಡಿಕಲ್ ವಿದ್ಯಾರ್ಥಿ ಮೇಲಿನ ಬರ್ಬರ ಅತ್ಯಾಚಾರದಿಂದ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ ಮಹಿಳೆಯರ ವಿರುದ್ಧ ದೌರ್ಜನ್ಯ, ಅತ್ಯಾಚಾರ ಹಾಗೂ ಇತರ ಅಪರಾಧ ಪ್ರಕರಣತಡೆಯಲು ಹಲವು ಕ್ರಮ ಕೈ ಗೊಂಡಿದ್ದರೂ ಕೆಲವಷ್ಟೇ ಜಾರಿಯಾಗಿವೆ.<br /> <br /> ಆದರೆ ಮಹಿಳೆಯರಿಗೆ ಪೂರ್ಣಪ್ರಮಾಣದಲ್ಲಿ ಭದ್ರತೆ ದೊರೆತಿಲ್ಲ. ಇದೆಲ್ಲಕ್ಕಿಂತ ಮುಖ್ಯವಾಗಿ ‘ನಿರ್ಭಯ ನಿಧಿಯಡಿ ಇಡಲಾಗಿರುವ ರೂ1000 ಕೋಟಿ ಹಣದಲ್ಲಿ ಒಂದೂ ರೂಪಾಯಿಯೂ ಖರ್ಚಾಗದೇ ಹಾಗೇ ಉಳಿದಿದೆ.<br /> <br /> ಈ ಹಣದಲ್ಲಿ ಹೆಚ್ಚಿನ ಮಹಿಳಾ ಪೊಲೀಸರ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿತ್ತು. ಆದರೆ ದೇಶದಾದ್ಯಂತ ಪೊಲೀಸ್ ಪಡೆಯಲ್ಲಿ ಶೇ 6ರಷ್ಟು ಮಾತ್ರ ಮಹಿಳೆಯರು ಇದ್ದಾರೆ.<br /> <br /> ನಿರ್ಭಯ ನಿಧಿ ಮೀಸಲಿಟ್ಟಿರುವುದನ್ನು ಈ ವರ್ಷದ ಫೆಬ್ರುವರಿಯಲ್ಲಿ ಮಂಡಿಸಲಾದ ಮುಂಗಡಪತ್ರದಲ್ಲಿ ಘೋಷಿಸಲಾಗಿತ್ತು. ಆದರೆ ನಿಧಿ ನಿಯಂತ್ರಣ ಯಾರು ಮಾಡಬೇಕು ಎಂಬ ಬಗೆಗಿನ ಗೊಂದಲವೇ ಹಣ ಖರ್ಚಾಗದೆ ಹಾಗೇ ಉಳಿಯಲು ಪ್ರಮುಖ ಕಾರಣವಾಗಿದೆ. ಈ ಕುರಿತು ಗೃಹ ಸೇರಿದಂತೆ ಹಲವು ಸಚಿವಾಲಯಗಳು ಪ್ರಸ್ತಾವ ಮುಂದಿಟ್ಟಿವೆ.<br /> <br /> <strong>ಮೀರಾ ಆತಂಕ</strong><br /> ಮಹಿಳೆಯರ ವಿರುದ್ಧ ಅಪರಾಧ ತಡೆಯಲು ಹಾಗೂ ಭದ್ರತೆ ಒದಗಿಸಲು ಸರ್ಕಾರ ಏನೆಲ್ಲ ಕಾನೂನನ್ನು ರೂಪಿಸಿದ್ದರೂ ಅದರಿಂದ ಹೆಚ್ಚಿನ ಪ್ರಯೋಜನ ಮಹಿಳೆಯರಿಗೆ ಸಿಗುತ್ತಿಲ್ಲ ಎಂದು ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ.</p>.<p>ದೆಹಲಿ ಸಾಮೂಹಿಕ ಅತ್ಯಾಚಾರಕ್ಕೆ ವರ್ಷ ತುಂಬಿದ ಪ್ರಯುಕ್ತ ಸಂಸತ್ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು.<br /> ‘ಮಹಿಳೆಯರಿಗೆ ಭದ್ರತೆ ನೀಡಲು ಸಂಸತ್ ಅವಿರೋಧವಾಗಿ ಕಾನೂನು ರೂಪಿಸಲು ಒಪ್ಪಿಗೆ ನೀಡಿದ್ದರೂ ನಿರೀಕ್ಷಿತ ಬದಲಾವಣೆ ಆಗಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>