<p><strong>ಚಂಡೀಗಡ (ಪಿಟಿಐ): </strong>ಶಿರೋಮಣಿ ಅಕಾಲಿ ದಳದ (ಎಸ್ಎಡಿ) ಶಾಸಕಾಂಗ ಪಕ್ಷದ ನಾಯಕರಾಗಿ ಪ್ರಕಾಶ್ ಸಿಂಗ್ ಬಾದಲ್ ಗುರುವಾರ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. <br /> <br /> ಇದರೊಂದಿಗೆ ಪಂಜಾಬ್ನ ಹೊಸ ಮುಖ್ಯಮಂತ್ರಿ ಆಯ್ಕೆ ಕುರಿತಂತೆ ಎದ್ದಿದ್ದ ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಿದ್ದು, ಐದನೇ ಬಾರಿಗೆ ಮುಖ್ಯಮಂತ್ರಿಯಾಗಿ ಇದೇ 14ರಂದು ಪ್ರಕಾಶ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.<br /> <br /> ಪ್ರಕಾಶ್ ಬಾದಲ್ ಅವರೇ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಪಕ್ಷದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಸುದ್ದಿಗಾರರಿಗೆ ಸ್ಪಷ್ಟಪಡಿಸಿದರು. <br /> <br /> ಆದರೆ ಹೊಸ ಸಚಿವ ಸಂಪುಟದಲ್ಲಿ ಯಾರೆಲ್ಲ ಸೇರ್ಪಡೆಗೊಳ್ಳುವರು ಎಂಬುದನ್ನು ಮುಖ್ಯಮಂತ್ರಿಯೇ ನಿರ್ಧರಿಸುವರು ಎಂದು ಅವರು ಪ್ರತಿಕ್ರಿಯಿಸಿದರು.<br /> <br /> ಅಕಾಲಿದಳ- ಬಿಜೆಪಿ ಮೈತ್ರಿಕೂಟ ಮಂಗಳವಾರ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಿದ್ದಂತೆಯೇ, ಪ್ರಕಾಶ್ ಬಾದಲ್ ತಮ್ಮ ಪುತ್ರ ಸುಖ್ಬೀರ್ ಅವರಿಗೆ ಅಧಿಕಾರ ಹಸ್ತಾಂತರಿಸುವರು ಎಂಬ ಊಹಾಪೋಹ ಕೇಳಿಬಂದಿತ್ತು.<br /> <br /> ರಾಜ್ಯದ ಎಲ್ಲ ಹೆಣ್ಣು ಮಕ್ಕಳಿಗೂ ಸ್ನಾತಕೋತ್ತರ ಪದವಿವರೆಗೆ ಉಚಿತ ಶಿಕ್ಷಣ ನೀಡುವುದಾಗಿ ಪ್ರಕಾಶ್ ಸಿಂಗ್ ಈ ಸಂದರ್ಭದಲ್ಲಿ ಘೋಷಿಸಿದ್ದಾರೆ. ಈವರೆಗೆ ಪದವಿವರೆಗೆ ಮಾತ್ರ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ಇತ್ತು.<br /> 1997 ಮತ್ತು 2007ರಲ್ಲಿ ಎರಡು ಬಾರಿ ಅವರು ಸಂಪೂರ್ಣ ಅವಧಿಯ ಆಡಳಿತ ನಡೆಸಿದ್ದರು. 1977- 80 ಮತ್ತು 1970- 71ರ ಅವಧಿಯಲ್ಲೂ ಮುಖ್ಯಮಂತ್ರಿಯಾಗಿದ್ದರು.<br /> <br /> ಇದುವರೆಗೂ ಉಪ ಮುಖ್ಯಮಂತ್ರಿಯಾಗಿದ್ದ ಸುಖ್ಬೀರ್ ಅವರನ್ನು `ಮುಂದಿನ ಉಪ ಮುಖ್ಯಮಂತ್ರಿ ಯಾರು~ ಎಂದು ವರದಿಗಾರರು ಕೇಳಿದಾಗ, `ಅಕಾಲಿದಳ ಮತ್ತು ಬಿಜೆಪಿ ಜೊತೆಯಾಗಿ ಈ ಬಗ್ಗೆ ನಿರ್ಧರಿಸಲಿವೆ~ ಎಂದು ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ (ಪಿಟಿಐ): </strong>ಶಿರೋಮಣಿ ಅಕಾಲಿ ದಳದ (ಎಸ್ಎಡಿ) ಶಾಸಕಾಂಗ ಪಕ್ಷದ ನಾಯಕರಾಗಿ ಪ್ರಕಾಶ್ ಸಿಂಗ್ ಬಾದಲ್ ಗುರುವಾರ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. <br /> <br /> ಇದರೊಂದಿಗೆ ಪಂಜಾಬ್ನ ಹೊಸ ಮುಖ್ಯಮಂತ್ರಿ ಆಯ್ಕೆ ಕುರಿತಂತೆ ಎದ್ದಿದ್ದ ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಿದ್ದು, ಐದನೇ ಬಾರಿಗೆ ಮುಖ್ಯಮಂತ್ರಿಯಾಗಿ ಇದೇ 14ರಂದು ಪ್ರಕಾಶ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.<br /> <br /> ಪ್ರಕಾಶ್ ಬಾದಲ್ ಅವರೇ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಪಕ್ಷದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಸುದ್ದಿಗಾರರಿಗೆ ಸ್ಪಷ್ಟಪಡಿಸಿದರು. <br /> <br /> ಆದರೆ ಹೊಸ ಸಚಿವ ಸಂಪುಟದಲ್ಲಿ ಯಾರೆಲ್ಲ ಸೇರ್ಪಡೆಗೊಳ್ಳುವರು ಎಂಬುದನ್ನು ಮುಖ್ಯಮಂತ್ರಿಯೇ ನಿರ್ಧರಿಸುವರು ಎಂದು ಅವರು ಪ್ರತಿಕ್ರಿಯಿಸಿದರು.<br /> <br /> ಅಕಾಲಿದಳ- ಬಿಜೆಪಿ ಮೈತ್ರಿಕೂಟ ಮಂಗಳವಾರ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಿದ್ದಂತೆಯೇ, ಪ್ರಕಾಶ್ ಬಾದಲ್ ತಮ್ಮ ಪುತ್ರ ಸುಖ್ಬೀರ್ ಅವರಿಗೆ ಅಧಿಕಾರ ಹಸ್ತಾಂತರಿಸುವರು ಎಂಬ ಊಹಾಪೋಹ ಕೇಳಿಬಂದಿತ್ತು.<br /> <br /> ರಾಜ್ಯದ ಎಲ್ಲ ಹೆಣ್ಣು ಮಕ್ಕಳಿಗೂ ಸ್ನಾತಕೋತ್ತರ ಪದವಿವರೆಗೆ ಉಚಿತ ಶಿಕ್ಷಣ ನೀಡುವುದಾಗಿ ಪ್ರಕಾಶ್ ಸಿಂಗ್ ಈ ಸಂದರ್ಭದಲ್ಲಿ ಘೋಷಿಸಿದ್ದಾರೆ. ಈವರೆಗೆ ಪದವಿವರೆಗೆ ಮಾತ್ರ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ಇತ್ತು.<br /> 1997 ಮತ್ತು 2007ರಲ್ಲಿ ಎರಡು ಬಾರಿ ಅವರು ಸಂಪೂರ್ಣ ಅವಧಿಯ ಆಡಳಿತ ನಡೆಸಿದ್ದರು. 1977- 80 ಮತ್ತು 1970- 71ರ ಅವಧಿಯಲ್ಲೂ ಮುಖ್ಯಮಂತ್ರಿಯಾಗಿದ್ದರು.<br /> <br /> ಇದುವರೆಗೂ ಉಪ ಮುಖ್ಯಮಂತ್ರಿಯಾಗಿದ್ದ ಸುಖ್ಬೀರ್ ಅವರನ್ನು `ಮುಂದಿನ ಉಪ ಮುಖ್ಯಮಂತ್ರಿ ಯಾರು~ ಎಂದು ವರದಿಗಾರರು ಕೇಳಿದಾಗ, `ಅಕಾಲಿದಳ ಮತ್ತು ಬಿಜೆಪಿ ಜೊತೆಯಾಗಿ ಈ ಬಗ್ಗೆ ನಿರ್ಧರಿಸಲಿವೆ~ ಎಂದು ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>