<p><strong><span style="font-size: medium">ನವದೆಹಲಿ, (ಪಿಟಿಐ/ ಐಎಎನ್ಎಸ್):</span></strong><span style="font-size: medium"> ಮಾಜಿ ರಾಜ್ಯ ಸಚಿವ ಅಮಿತ್ ಷಾ ಭಾಗಿಯಾಗಿದ್ದಾರೆನ್ನಲಾದ , ಶೋರಾಬುದ್ದೀನ್ ಶೇಖ್ ಅವರ ನಕಲಿ ಎನ್ ಕೌಂಟರ್ ಪ್ರಕರಣದ ಪ್ರತ್ಯಕ್ಷದರ್ಶಿ ಎಂದು ಹೇಳಲಾಗುವ ತುಳಸಿರಾಮ್ ಪ್ರಜಾಪತಿಯ ಎನ್ ಕೌಂಟರ್ ಹತ್ಯೆ ಕುರಿತು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಸಿಬಿಐಗೆ ಆದೇಶ ನೀಡಿದೆ.</span><br /> <br /> <span style="font-size: medium">ಸುಪ್ರೀಂ ಕೋರ್ಟ್ ನ ಈ ಆದೇಶ ಗುಜರಾತಿನಲ್ಲಿರುವ ಬಿಜೆಪಿ ಸರ್ಕಾರಕ್ಕೆ ಮುಜುಗರ ಉಂಟುಮಾಡಿದೆ.</span></p>.<p><span style="font-size: medium">ಈ ಸಂಬಂಧ ರಾಜ್ಯ ಪೊಲೀಸರು ತನಿಖೆ ನಡೆಸಿ ಆರೋಪ ಪಟ್ಟಿ ಸಿದ್ಧಪಡಿಸಿರುವ ಸಂದರ್ಭದಲ್ಲಿ ಮತ್ತೆ ಸಿಬಿಐ ತನಿಖೆಯ ಅಗತ್ಯವಿಲ್ಲ ಎಂಬ ಗುಜರಾತ್ ಸರ್ಕಾರದ ವಾದವನ್ನು ನ್ಯಾಯಮೂರ್ತಿಗಳಾದ ಪಿ. ಸತ್ಯಶಿವಂ ಮತ್ತು ಬಿ.ಎಸ್. ಚೌಹಾಣ್ ಅವರಿದ್ದ ಸುಪ್ರೀಂ ಕೋರ್ಟ್ ನ ದ್ವಿಸದಸ್ಯ ಪೀಠ ತಿರಸ್ಕರಿಸಿದೆ.</span></p>.<p><span style="font-size: medium">ಶೋರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರಬಿ ಅವರನ್ನು ನಕಲಿ ಎನ್ ಕೌಂಟರ್ ನಲ್ಲಿ ಹತ್ಯೆಮಾಡಿದ ಪ್ರಕರಣದ ಪ್ರತ್ಯಕ್ಷ ಸಾಕ್ಷಿಯಾಗಿದ್ದ ತಮ್ಮ ಮಗ ತುಳಸಿರಾಂ ಪ್ರಜಾಪತಿಯನ್ನು ಗುಜರಾತ್ ಪೊಲೀಸರು ನಕಲಿ ಎನ್ ಕೌಂಟರ್ ಮೂಲಕ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಅವರ ತಾಯಿ ನರ್ಮದಾ ಬಾಯಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.</span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong><span style="font-size: medium">ನವದೆಹಲಿ, (ಪಿಟಿಐ/ ಐಎಎನ್ಎಸ್):</span></strong><span style="font-size: medium"> ಮಾಜಿ ರಾಜ್ಯ ಸಚಿವ ಅಮಿತ್ ಷಾ ಭಾಗಿಯಾಗಿದ್ದಾರೆನ್ನಲಾದ , ಶೋರಾಬುದ್ದೀನ್ ಶೇಖ್ ಅವರ ನಕಲಿ ಎನ್ ಕೌಂಟರ್ ಪ್ರಕರಣದ ಪ್ರತ್ಯಕ್ಷದರ್ಶಿ ಎಂದು ಹೇಳಲಾಗುವ ತುಳಸಿರಾಮ್ ಪ್ರಜಾಪತಿಯ ಎನ್ ಕೌಂಟರ್ ಹತ್ಯೆ ಕುರಿತು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಸಿಬಿಐಗೆ ಆದೇಶ ನೀಡಿದೆ.</span><br /> <br /> <span style="font-size: medium">ಸುಪ್ರೀಂ ಕೋರ್ಟ್ ನ ಈ ಆದೇಶ ಗುಜರಾತಿನಲ್ಲಿರುವ ಬಿಜೆಪಿ ಸರ್ಕಾರಕ್ಕೆ ಮುಜುಗರ ಉಂಟುಮಾಡಿದೆ.</span></p>.<p><span style="font-size: medium">ಈ ಸಂಬಂಧ ರಾಜ್ಯ ಪೊಲೀಸರು ತನಿಖೆ ನಡೆಸಿ ಆರೋಪ ಪಟ್ಟಿ ಸಿದ್ಧಪಡಿಸಿರುವ ಸಂದರ್ಭದಲ್ಲಿ ಮತ್ತೆ ಸಿಬಿಐ ತನಿಖೆಯ ಅಗತ್ಯವಿಲ್ಲ ಎಂಬ ಗುಜರಾತ್ ಸರ್ಕಾರದ ವಾದವನ್ನು ನ್ಯಾಯಮೂರ್ತಿಗಳಾದ ಪಿ. ಸತ್ಯಶಿವಂ ಮತ್ತು ಬಿ.ಎಸ್. ಚೌಹಾಣ್ ಅವರಿದ್ದ ಸುಪ್ರೀಂ ಕೋರ್ಟ್ ನ ದ್ವಿಸದಸ್ಯ ಪೀಠ ತಿರಸ್ಕರಿಸಿದೆ.</span></p>.<p><span style="font-size: medium">ಶೋರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರಬಿ ಅವರನ್ನು ನಕಲಿ ಎನ್ ಕೌಂಟರ್ ನಲ್ಲಿ ಹತ್ಯೆಮಾಡಿದ ಪ್ರಕರಣದ ಪ್ರತ್ಯಕ್ಷ ಸಾಕ್ಷಿಯಾಗಿದ್ದ ತಮ್ಮ ಮಗ ತುಳಸಿರಾಂ ಪ್ರಜಾಪತಿಯನ್ನು ಗುಜರಾತ್ ಪೊಲೀಸರು ನಕಲಿ ಎನ್ ಕೌಂಟರ್ ಮೂಲಕ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಅವರ ತಾಯಿ ನರ್ಮದಾ ಬಾಯಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.</span></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>