‘ಜೂನ್ 14ರಂದು ಸೋನಿಯಾ ಅವರು ನಿಮ್ಮನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದೇವೆ’ ಎಂದು ತಿಳಿಸಿದರು. 2008ರಲ್ಲಿ ಮುಂಬೈ ದಾಳಿಯ ನಂತರ ಗೃಹ ಸಚಿವನ ಹುದ್ದೆಗೆ ಶಿವರಾಜ್ ಪಾಟೀಲ್ ರಾಜೀನಾಮೆ ನೀಡಿದ್ದರು. ಆ ಹುದ್ದೆಗೆ ನನ್ನನ್ನು ಆಯ್ಕೆ ಮಾಡಲು ಸೋನಿಯಾ ಮುಂದಾಗಿದ್ದರು. ಆದರೆ, ಮನಮೋಹನ್ ಸಿಂಗ್ ಅವರ ಮಧ್ಯಪ್ರವೇಶದಿಂದ ನನಗೆ ಆ ಹುದ್ದೆ ಕೈತಪ್ಪಿತು ಮತ್ತು ಪಿ.ಚಿದಂಬರಂ ಗೃಹಸಚಿವರಾದರು’ ಎಂದು ಮುಖರ್ಜಿ ಹೇಳಿದ್ದಾರೆ.